ಸ್ಟಾರ್ಟ್ಅಪ್ನ ಸಿಇಒ ತನ್ನ ನಾಲ್ಕು ವರ್ಷದ ಮಗುವನ್ನು ಬರ್ಬರವಾಗಿ ಕೊಂದ ಆರೋಪದ ಬಳಿಕ ಪೋಸ್ಟ್ಮಾರ್ಟಮ್ ವರದಿಯನ್ನು ಉಲ್ಲೇಖಿಸಿ ವೈದ್ಯರು ಭಯಾನಕವಾದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ವೈದ್ಯರು ಗೋವಾದ ಸರ್ವಿಸ್ ಅಪಾರ್ಟ್ಮೆಂಟ್ನಲ್ಲಿ ಮಗುವನ್ನು ಹೇಗೆ ಕೊಂದರು ಎಂಬ ಮಾಹಿತಿ ನೀಡಿದ್ದಾರೆ.
ಬಾಲಕನನ್ನು ಆತನ ತಾಯಿಯೇ ಕೊಂದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕನ ದೇಹದ ಮೇಲೆ ಯಾವುದೇ ಪ್ರತಿರೋಧದ ಗುರುತುಗಳು ಇಲ್ಲ ಎಂದು ಕೂಡಾ ವೈದ್ಯರು ತಿಳಿಸಿದ್ದಾರೆ. ಗೋವಾ ಪೊಲೀಸರ ನಿರ್ದೇಶನದ ಮೇರೆಗೆ ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಸಿಇಒ ಅವರನ್ನು ಬಂಧಿಸಲಾಗಿದೆ.

ಕೃತಕ ಬುದ್ಧಿಮತ್ತೆ ಸ್ಟಾರ್ಟ್ಅಪ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸುಚನಾ ಸೇಠ್ ಅವರು ಸೂಟ್ಕೇಸ್ನಲ್ಲಿ ತನ್ನ ಮಗುವಿನ ಮೃತದೇಹದೊಂದಿಗೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯೂರು ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕುಮಾರ್ ನಾಯ್ಕ್ ಮಾತನಾಡಿ, "ಮಗುವನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಅಥವಾ ಮಗುವಿನ ಉಸಿರುಗಟ್ಟಿಸಲಾಗಿದೆ. ಬಟ್ಟೆ ಅಥವಾ ದಿಂಬು ಬಳಸಲಾಗಿದೆ. ಕತ್ತು ಹಿಸುಕಿ ಮಗು ಸಾವನ್ನಪ್ಪಿದೆ," ಎಂದು ಹೇಳಿದರು.
ಮಗುವನ್ನು ಕೈಯಿಂದ ಕತ್ತು ಹಿಸುಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. "ಮಗುವನ್ನು ಕೈಗಳನ್ನು ಬಳಸಿ ಕತ್ತು ಹಿಸುಕಿದಂತೆ ಕಾಣುತ್ತಿಲ್ಲ. ದಿಂಬು ಅಥವಾ ಇನ್ನಾವುದೇ ವಸ್ತುವನ್ನು ಬಳಸಿದಂತೆ ತೋರುತ್ತಿದೆ," ಎಂದು ವೈದ್ಯರು ಹೇಳಿದರು.
"ಸಾಮಾನ್ಯವಾಗಿ ಭಾರತದಲ್ಲಿ, ರಿಗರ್ ಮೋರ್ಟಿಸ್ 36 ಗಂಟೆಗಳ ನಂತರ ತಿಳಿಯುವುದಿಲ್ಲ. ಆದರೆ ಈ ಮಗುವಿನ ಪ್ರಕರಣದಲ್ಲಿ ಯಾವುದೇ ರಿಗರ್ ಮೋರ್ಟಿಸ್ ಇರಲಿಲ್ಲ. ಆದ್ದರಿಂದ, ಅವನ ಮರಣವಾಗಿ 36 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದಿದೆ," ಎಂದು ತಿಳಿದು ಬರುತ್ತದೆ. ರಿಗರ್ ಮೋರ್ಟಿಸ್, ಅಥವಾ ಪೋಸ್ಟ್ಮಾರ್ಟಮ್ ರಿಜಿಡಿಟಿ ಒಂದು ಶಾರೀರಿಕ ಪ್ರಕ್ರಿಯೆಯಾಗಿದ್ದು ಅದು ಸಾವಿನ ನಂತರ ದೇಹದ ಸ್ನಾಯುಗಳು ಗಟ್ಟಿಯಾಗಲು ಕಾರಣವಾಗುತ್ತದೆ.
ದೇಹದ ಮೇಲೆ ಯಾವುದೇ ರಕ್ತದ ಕಳೆ ಅಥವಾ ಹೋರಾಟದ ಗುರುತುಗಳಿಲ್ಲ ಎಂದು ನಾಯಕ್ ಹೇಳಿದರು. ಬಾಲಕನ ಸಾವಿನ ನಿಖರವಾದ ಸಮಯವನ್ನು ನಿರ್ಧರಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಗೋವಾದ ಅಪಾರ್ಟ್ಮೆಂಟ್ನಲ್ಲಿ ಸಾವನ್ನಪ್ಪಿ 36 ಗಂಟೆಗಳು ಕಳೆದಿವೆ. "ನಿಖರವಾದ ಸಮಯ ಹೇಳಲು ನಾವು ಸಾಧ್ಯವಿಲ್ಲ. ಆದರೆ ಮರಣವಾಗಿ 36 ಗಂಟೆಗಳು ಕಳೆದಿದೆ," ಎಂದು ನಾಯಕ್ ಹೇಳಿದರು.
ಸುಚನಾ ಸೇಠ್ ಗೋವಾದ ಅಪಾರ್ಟ್ಮೆಂಟ್ನಲ್ಲಿ ತನ್ನ ನಾಲ್ಕು ವರ್ಷದ ಮಗುವನ್ನು ಕೊಂದು, ಶವವನ್ನು ಬ್ಯಾಗ್ನಲ್ಲಿ ತುಂಬಿ, ಬೆಂಗಳೂರಿಗೆ ಕ್ಯಾಬ್ ವ್ಯವಸ್ಥೆ ಮಾಡುವಂತೆ ಅಪಾರ್ಟ್ಮೆಂಟ್ ಸಿಬ್ಬಂದಿಗೆ ಕೇಳಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಿಇಒ ತನ್ನ ಮಗನನ್ನು ಕೊಂದು ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂದು ಮಾಹಿತಿಯಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications