ಬೆಂಗಳೂರು, ಜನವರಿ 16: ಇತ್ತೀಚಿಗೆ ಬೆಂಗಳೂರಿಗ ಹತ್ತು ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ಗಳನ್ನು ಸೇರ್ಪಡೆಗೊಳಿಸಲು ರಾಜ್ಯ ಸಚಿವ ಸಂಪುಟದ ಒಪ್ಪಿಗೆ ದೊರೆತ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಈ ಬಸ್ಗಳಿಗೆ ಟೆಂಡರ್ ಅನ್ನು ಶೀಘ್ರದಲ್ಲಿ ಕರೆಯಲು ಸಿದ್ಧತೆ ನಡೆಸಿದೆ.
ಬಿಎಂಟಿಸಿಯು ಒಂದು ದಶಕದ ಹಿಂದೆ ಬೆಂಗಳೂರಿಗೆ ಒಮ್ಮೆ ಪ್ರಸಿದ್ಧವಾದ ಡಬಲ್ ಡೆಕ್ಕರ್ ಬಸ್ಗಳನ್ನು ಮರಳಿ ತರಲು ಪ್ರಯತ್ನಿಸುತ್ತಿದೆ. ಆದರೆ ಅದರ ಎಲ್ಲಾ ಪ್ರಯತ್ನಗಳು ಇಲ್ಲಿಯವರೆಗೆ ವಿಫಲವಾಗಿವೆ. ಆದರೆ ಈಗ ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (ಜಿಸಿಸಿ) ಆಧಾರದ ಮೇಲೆ ಬಸ್ಗಳನ್ನು ನಡೆಸಲಾಗುವುದು ಮತ್ತು ವಾಹನಗಳನ್ನು ಖರೀದಿಸಲಿದೆ ಎಂದು ನಿಗಮದ ಮೂಲಗಳು ತಿಳಿಸಿವೆ.

ಕಳೆದ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಐದು ಡಬಲ್ ಡೆಕ್ಕರ್ ಬಸ್ಗಳನ್ನು ಖರೀದಿಸಲು ಟೆಂಡರ್ ಕರೆಯಲಾಗಿತ್ತು. ಅಶೋಕ್ ಲೇಲ್ಯಾಂಡ್ನ ಎಲೆಕ್ಟ್ರಿಕ್ ವಾಹನ ವಿಭಾಗವಾದ ಸ್ವಿಚ್ ಮೊಬಿಲಿಟಿ ಎಂಬ ಏಕೈಕ ಬಿಡ್ಡರ್ ಐದು ಬಸ್ಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಟೆಂಡರ್ಗೆ ಒಪ್ಪಿಗೆಯಾಗುವ ಮೊದಲೇ ರಾಜ್ಯದಲ್ಲಿ ಚುನಾವಣೆ ನಡೆದು ಮೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಪ್ರತಿ ಬಸ್ಗೆ ₹ 2 ಕೋಟಿ ದರ ಹೆಚ್ಚಿದೆ ಎಂದು ಟೆಂಡರ್ ರದ್ದುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೊಸದಾಗಿ ಟೆಂಡರ್ ಕರೆಯುವಂತೆ ಬಸ್ ನಿಗಮಕ್ಕೆ ಸೂಚಿಸಲಾಗಿತ್ತು. ಆದರೆ, ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಬಸ್ ನಿಗಮಕ್ಕೆ ಭಾರಿ ಹೊರೆಯಾಗಲಿರುವ ನೇರ ಖರೀದಿಗೆ ಮುಂದಾಗದೆ ಜಿಸಿಸಿ ಮಾದರಿಯಲ್ಲೇ ಕ್ರಮಕೈಗೊಳ್ಳಲು ಆಂತರಿಕ ಸಭೆಗಳಲ್ಲಿ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲಿಯೇ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ಗಳು ಪುನರಾಗಮನವಾಗಲಿವೆ. ಬಿಎಂಟಿಸಿ ಶೀಘ್ರದಲ್ಲೇ ಟೆಂಡರ್ಗಳನ್ನು ಕರೆಯಲಿದೆ. ನಗರದಲ್ಲಿ ಐದು ಮಾರ್ಗಗಳನ್ನು ಈ ಬಸ್ಗಳಿಗಾಗಿ ಯೋಜಿಸಲಾಗಿದೆ. ಹೆಚ್ಚಿನ ಜನಸಂದಣಿ ಇರುವ ರಸ್ತೆಗಳಲ್ಲಿ ಬಸ್ಗಳನ್ನು ಓಡಿಸುವುದು ಇದರ ಉದ್ದೇಶವಾಗಿದೆ ಎಂದು ಘೋಷಿಸಿದ್ದರು.
ಡಬಲ್ ಡೆಕ್ಕರ್ ಬಸ್ಗಳು ಅಂಡರ್ಪಾಸ್ಗಳು ಮತ್ತು ಇತರ ಅಡೆತಡೆಗಳನ್ನು ತಪ್ಪಿಸುವ ರೀತಿಯಲ್ಲಿ ಮಾರ್ಗಗಳನ್ನು ಯೋಜಿಸಬೇಕಾಗುತ್ತದೆ. ಇದು ಪ್ರವಾಸಿಗರಿಗೆ ಸಹಾಯ ಮಾಡುತ್ತದೆ. ನಾವು ಚಿಕ್ಕವರಿದ್ದಾಗ ಇಂತಹ ಬಸ್ಸುಗಳು ನಗರದಲ್ಲಿ ಓಡುತ್ತಿದ್ದವು. ಯಾರೋ ನನಗೆ ಜಪಾನೀಸ್ ಮಾದರಿ (ಬಸ್ಸಿನ) ಕಳುಹಿಸಿದ್ದಾರೆ. ಮಾದರಿಯನ್ನು ಅನುಕರಿಸಲು ನಾನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಕೇಳಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದರು.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications