ಬೆಂಗಳೂರಿನಲ್ಲಿ 2 ಕಿ.ಮೀ ಸುರಂಗ ಮಾರ್ಗಕ್ಕೆ ಡಿಪಿಆರ್‌ ತಯಾರಿ: ರಾಜ್ಯಪಾಲ

ಬೆಂಗಳೂರು, ಜನವರಿ 26: ಬೆಂಗಳೂರಿನಲ್ಲಿ 2 ಕಿಮೀ ಸುರಂಗ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಶುಕ್ರವಾರ ಹೇಳಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೆಂಗಳೂರು ಪ್ರತಿದಿನ ನೋಡುತ್ತಿರುವ ಟ್ರಾಫಿಕ್ ದಟ್ಟಣೆಯನ್ನು ಸರಾಗಗೊಳಿಸುವ "ಶಾಶ್ವತ ಪರಿಹಾರ" ವಾಗಿ ಇದನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 2 ಕಿಮೀ ಸುರಂಗ ರಸ್ತೆ ನಿರ್ಮಾಣ

ರೈತರ ಸಮಸ್ಯೆಗಳು, ನಿರುದ್ಯೋಗ, ಆರೋಗ್ಯ ಸಮಸ್ಯೆಗಳಾದ ರಕ್ತಹೀನತೆ ಮತ್ತು ಹೃದಯ ಸಂಬಂಧಿ ಸಮಸ್ಯೆಗಳು ಮತ್ತು ಬೆಂಗಳೂರಿನ ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಹಲವಾರು ಇತರ ಕಾರ್ಯಕ್ರಮಗಳು ಮತ್ತು ಕ್ರಮಗಳ ಅವಲೋಕನವನ್ನು ರಾಜ್ಯಪಾಲರು ನೀಡಿದರು.

ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ಸರ್ಕಾರವು "ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಬದ್ಧತೆಯನ್ನು ಪೂರೈಸಿದೆ" ಎಂದು ತಿಳಿಸಿದರು. ರಾಜ್ಯ ಸರ್ಕಾರವು 236 ತಾಲ್ಲೂಕುಗಳ ಪೈಕಿ 223 ರಲ್ಲಿ ಬರಗಾಲ ಎಂದು ಘೋಷಿಸಿದ ನಂತರ ಬರ ಪರಿಹಾರ ಕ್ರಮಗಳನ್ನು ಉದ್ದೇಶಿಸಿ ಅವರು ಬರಪೀಡಿತ ತಾಲೂಕುಗಳು ಅದರಲ್ಲಿ 196 ತೀವ್ರವಾಗಿ ಹಾನಿಗೊಳಗಾಗಿವೆ. ಇದರಿಂದ ಪ್ರತಿ ರೈತರ ಆಧಾರ್-ಸಂಯೋಜಿತ ಬ್ಯಾಂಕ್ ಖಾತೆಗಳಿಗೆ ನೇರವಾಗಿ 2,000 ರೂ. ನೀಡಲಾಗುತ್ತಿದೆ.

ಕಳೆದ ವರ್ಷ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 63.13 ಲಕ್ಷ ನೋಂದಾಯಿತ ಕಾರ್ಮಿಕರು ಕೆಲಸ ಮಾಡಿರುವುದನ್ನು ರಾಜ್ಯಪಾಲರು ಶ್ಲಾಘಿಸಿದರು. 185.74 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನೆ (SJICR) ಸಂಸ್ಥೆಯ ಸಹಯೋಗದಲ್ಲಿ 15 ಜಿಲ್ಲೆಗಳಲ್ಲಿ ಜಾರಿಗೊಳಿಸಲಾದ ಎಸ್‌ಟಿ-ಎಲಿವೇಟೆಡ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (ಎಸ್‌ಟಿಇಎಂಐ) ಕಾರ್ಯಕ್ರಮದಡಿ 1,084 ಹೃದ್ರೋಗಿಗಳಿಗೆ ತೃತೀಯ ಹಂತದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+