ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಭಾರತದ ಅತಿದೊಡ್ಡ ಖಾಸಗಿ ವಿಮಾನಯಾನ ಸಂಸ್ಥೆಯಾದ ಇಂಡಿಗೊ ತನ್ನ ಶೇ 10 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ.
ಇಂಡಿಗೊ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೊನೋಜಾಯ್ ದತ್ತಾ ಈ ವಿಷಯವನ್ನು ತಿಳಿಸಿದ್ದಾರೆ. ಇಂಡಿಗೊ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಇಂತಹ ನೋವಿನ ಕ್ರಮವನ್ನು ಕೈಗೊಂಡಿದ್ದೇವೆ ಎಂದು ದತ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮ ವ್ಯಾಪಾರ ಕಾರ್ಯಾಚರಣೆಯನ್ನು ಉಳಿಸಿಕೊಳ್ಳಲು ನಮ್ಮ ಕಂಪನಿಯು ಕೆಲವು ತ್ಯಾಗಗಳನ್ನು ಮಾಡದೇ ಈ ಆರ್ಥಿಕ ಬಿಕ್ಕಟ್ಟಿನ ಹೊರಬರಲು ಅಸಾಧ್ಯ ಎಂದು ದತ್ತಾ ಹೇಳಿದ್ದಾರೆ.
ನೋವಿನ ವಿದಾಯ
ಸಾಧ್ಯವಿರುವ ಎಲ್ಲ ಸನ್ನಿವೇಶಗಳನ್ನು ಎಚ್ಚರಿಕೆಯಿಂದ ನಿರ್ಣಯಿಸಿದ ನಂತರ ಮತ್ತು ಪರಿಶೀಲಿಸಿದ ನಂತರ, ನಮ್ಮ ಉದ್ಯೋಗಿಗಳ 10% ಗೆ ನಾವು ನೋವಿನ ವಿದಾಯ ಮಾಡಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ಇಂಡಿಗೊ ಇತಿಹಾಸದಲ್ಲಿ ಮೊದಲ ಬಾರಿಗೆ ನಾವು ಇಂತಹ ನೋವಿನ ಕ್ರಮವನ್ನು ಕೈಗೊಂಡಿದ್ದೇವೆ ಎಂದು ದತ್ತಾ ಹೇಳಿದ್ದಾರೆ.
ವಿಮಾನಯಾನ ಸಂಸ್ಥೆಗಳಿಗೆ ತೀವ್ರ ಹಣಕಾಸಿನ ಬಿಕ್ಕಟ್ಟು
ಕೊರೊನಾ ಅಡೆತಡೆಯಿಂದಾಗಿ ವಿಮಾನಯಾನ ಸಂಸ್ಥೆಗಳು ತೀವ್ರ ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿವೆ. ವೈರಸ್ ಹರಡುವುದನ್ನು ತಡೆಗಟ್ಟಲು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯನ್ನು ಮಾರ್ಚ್ ಕೊನೆಯ ವಾರದಲ್ಲಿ ಮುಚ್ಚಲಾಯಿತು. ಎರಡು ತಿಂಗಳ ಅಂತರದ ನಂತರ, ನಾಗರಿಕ ವಿಮಾನಯಾನ ಉದ್ಯಮವು ಮೇ 25 ರಂದು ದೇಶೀಯ ವಿಮಾನ ಕಾರ್ಯಾಚರಣೆಯನ್ನು ಸೀಮಿತ ರೀತಿಯಲ್ಲಿ ಪುನರಾರಂಭಿಸಿತು.
45% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು
ಪ್ರಸ್ತುತ, ದೇಶೀಯ ವಿಮಾನಯಾನ ಸಂಸ್ಥೆಗಳು 45% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು. ಈ ಮೊದಲು, ವಿಮಾನಗಳು ಪುನರಾರಂಭಿಸಿದಾಗ ವಿಮಾನಯಾನ ಸಂಸ್ಥೆಗಳಿಗೆ ಕೇವಲ ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿತ್ತು.
ಸಂಬಳವನ್ನು ಕಡಿತಗೊಳಿಸಿವೆ
ಎಲ್ಲಾ ವಿಮಾನಯಾನ ಸಂಸ್ಥೆಗಳಾದ ಸ್ಪೈಸ್ಜೆಟ್, ಗೋಏರ್ ಮತ್ತು ಏರ್ ಇಂಡಿಯಾಗಳು ಸಂಬಳವನ್ನು ಕಡಿತಗೊಳಿಸಿವೆ ಅಥವಾ ತಮ್ಮ ಸಿಬ್ಬಂದಿಯ ಬಹುಪಾಲು ಭಾಗವನ್ನು ವೇತನವಿಲ್ಲದೆ ರಜೆ ಮೇಲೆ ಕಳುಹಿಸಿವೆ. COVID-19 ಸಾಂಕ್ರಾಮಿಕವು ಎಲ್ಲಾ ಭಾರತೀಯ ವಾಹಕಗಳ ಮೇಲೆ ತೀವ್ರ ಪರಿಣಾಮ ಬೀರಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications