ದೇಶದಲ್ಲಿನ ಮಂದಗತಿಯ ಆರ್ಥಿಕ ಬೆಳವಣಿಗೆಯು ಉದ್ಯೋಗ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, 2020ರ ಹಣಕಾಸು ವರ್ಷದಲ್ಲಿ ದೇಶದಲ್ಲಿ ಸುಮಾರು 16 ಲಕ್ಷದಷ್ಟು ಕಡಿಮೆ ಉದ್ಯೋಗಗಳು ಸೃಷ್ಠಿಯಾಗಲಿವೆ ಎಂದು ಎಸ್ಬಿಐ ಅಂದಾಜಿಸಿದೆ.
ಎಸ್ಬಿಐ ಸಂಶೋಧನಾ ವರದಿ-ಇಕೋವ್ರಾಪ್ ಪ್ರಕಾರ ಅಸ್ಸಾಂ ಮತ್ತು ರಾಜಸ್ಥಾನದಂತಹ ಕೆಲವು ರಾಜ್ಯಗಳಲ್ಲಿ ಹಣ ವಹಿವಾಟು ತುಂಬಾ ಕಡಿಮೆಯಾಗಿದ್ದು, ಇದು ಗುತ್ತಿಗೆ ಕಾರ್ಮಿಕರ ಇಳಿಕೆಯನ್ನು ಪ್ರತಿಬಿಂಬಿಸುತ್ತಿದೆ. ಹಣ ರವಾನೆ ಕಡಿಮೆ ಆಗುತ್ತಿರುವುದನ್ನು ಗಮನಿಸದರೆ 2020ರ ಹಣಕಾಸು ವರ್ಷದಲ್ಲಿ ಕಡಿಮೆ ಉದ್ಯೋಗ ಸೃಷ್ಟಿಯಾಗಲಿವೆ ಎಂದಿದೆ.

'' ಇಪಿಎಫ್ಒ ಅಂಕಿ-ಅಂಶಗಳ ಪ್ರಕಾರ 2019ರ ಹಣಕಾಸು ವರ್ಷದಲ್ಲಿ ಭಾರತವು 89.7 ಲಕ್ಷ ಹೊಸ ವೇತನದಾರರನ್ನು ರಚಿಸಿದೆ. ಆದರೆ 2020ರ ಹಣಕಾಸು ವರ್ಷಕ್ಕೆ ಯೋಜಿಸಿದರೆ ಈ ಸಂಖ್ಯೆ ಕನಿಷ್ಠ 15.8 ಲಕ್ಷ ಕಡಿಮೆಯಾಗಬಹುದು'' ಎಂದು ವರದಿ ತಿಳಿಸಿದೆ.
ಇಪಿಎಫ್ಒ ಸಾಮಾನ್ಯವಾಗಿ ಕಡಿಮೆ ವೇತನ ಪಡೆಯುವ ಉದ್ಯೋಗಿಗಳ ಪ್ರಾಥಮಿಕ ದತ್ತಾಂಶವನ್ನು ಒಳಗೊಳ್ಳುತ್ತದೆ. ಏಕೆಂದರೆ ಪ್ರತಿ ತಿಂಗಳು 15,000 ರುಪಾಯಿ ಪಡೆಯುವ ಉದ್ಯೋಗಿಗಳ ಸಂಖ್ಯೆಯನ್ನ ಆಧರಿಸಿ ಲೆಕ್ಕಾಚಾರದ ಪ್ರಕಾರ 2019ರ ಏಪ್ರಿಲ್ನಿಂದ ಅಕ್ಟೋಬರ್ ಅವಧಿಯಲ್ಲಿ ಹೊಸ ವೇತನದಾರರ ಸಂಖ್ಯೆ 43.1 ಲಕ್ಷವಾಗಿದ್ದು, ವಾರ್ಷಿಕ 2020ರ ಹಣಕಾಸು ವರ್ಷಕ್ಕೆ ಒಟ್ಟಾರೆ 73.9 ಲಕ್ಷ ಇರಬಹುದು ಎಂದು ಹೇಳಲಾಗಿದೆ.
ಇಪಿಎಫ್ಒ ದತ್ತಾಂಶವು ಸರ್ಕಾರಿ ಉದ್ಯೋಗಿಗಳು, ರಾಜ್ಯ ಸರ್ಕಾರಿ ಉದ್ಯೋಗಿಗಳು ಮತ್ತು ಖಾಸಗಿ ಉದ್ಯೋಗಿಗಳನ್ನು ಒಳಗೊಂಡಿರುವುದಿಲ್ಲ. ಏಕೆಂದರೆ ಅಂತಹ ಮಾಹಿತಿಯು 2004ರಿಂದ ರಾಷ್ಟ್ರೀಯ ಪಿಂಚಣಿ ಯೋಜನೆಗೆ(ಎನ್ಪಿಎಸ್) ಸ್ಥಳಾಂತರಗೊಂಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications