ನವದೆಹಲಿ, ಜೂನ್ 16: ಕೊರೊನಾ ಲಾಕ್ಡೌನ್ ನ ತರುವಾಯ ಆರ್ಥಿಕ ಚೇತರಿಕೆಯ ಹಸಿರು ಚಿಗುರುಗಳು ಈಗ ಗೋಚರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್-ಗವರ್ನರ್ಗಳೊಂದಿಗೆ ಮಂಗಳವಾರ ನಡೆದ ವಿಡಿಯೋ ಕಾನ್ಪರೆನ್ಸ್ ಸಂವಾದದಲ್ಲಿ ಮಾತನಾಡಿ, ಆರ್ಥಿಕ ಚೇತರಿಕೆಗೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಕಳೆದ ಕೆಲವು ವಾರಗಳಲ್ಲಿ ಹಲವಾರು ಕ್ರಮಗಳು ಆರ್ಥಿಕ ಚೇತರಿಕೆಗೆ ಕಾರಣವಾಗಿವೆ ಎಂದು ಪಿಎಂ ಮೋದಿ ಹೇಳಿದರು. ರಫ್ತು, ವಿದ್ಯುತ್ ಉತ್ಪಾದನೆ ಮತ್ತು ದ್ವಿಚಕ್ರ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆಯಂತಹ ಹಲವಾರು ಆರ್ಥಿಕ ಸೂಚಕಗಳನ್ನು ಮೋದಿ ಉಲ್ಲೇಖಿಸಿದ್ದಾರೆ.
ವಿದ್ಯುತ್ ಬಳಕೆ ಹೆಚ್ಚಾಗಲು ಪ್ರಾರಂಭಿಸಿದೆ
ಇದೇ ವೇಳೆ ಕೊರೊನಾನವೈರಸ್ ಸಾಂಕ್ರಾಮಿಕ ವಿರುದ್ಧದ ಭಾರತದ ಹೋರಾಟವನ್ನು ಮೋದಿ ಶ್ಲಾಘಿಸಿದರು. ಇತರ ರಾಷ್ಟ್ರಗಳಿಗಿಂತ ಭಾರತ ಉತ್ತಮ ಪ್ರದರ್ಶನ ನೀಡಿದೆ ಎಂದರು. ಈ ಹಿಂದೆ ಕಡಿಮೆಯಾಗುತ್ತಿದ್ದ ವಿದ್ಯುತ್ ಬಳಕೆ ಈಗ ಹೆಚ್ಚಾಗಲು ಪ್ರಾರಂಭಿಸಿದೆ ಎಂದು ಮೋದಿ ಹೇಳಿದರು. ಕಳೆದ ವರ್ಷ ಮೇ ಗೆ ಹೋಲಿಸಿದರೆ ಈ ವರ್ಷದ ಮೇ ತಿಂಗಳಲ್ಲಿ ರಸಗೊಬ್ಬರ ಮಾರಾಟ ದ್ವಿಗುಣಗೊಂಡಿದೆ ಎಂದು ಅವರು ಹೇಳಿದರು.
ಈ ಸಲ ಮುಂಗಾರು ಬಿತ್ತನೆ 12-13% ಹೆಚ್ಚಳ
ಈ ಬಾರಿ, ಮುಂಗಾರು ಬಿತ್ತನೆ ಹಿಂದಿನ ವರ್ಷಕ್ಕಿಂತ ಸುಮಾರು 12-13% ಹೆಚ್ಚಾಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಡಿಜಿಟಲ್ ಪಾವತಿ ಲಾಕ್ಡೌನ್ಗೆ ಮುಂಚೆಯೇ ಸ್ಥಾನವನ್ನು ತಲುಪಿದೆ. ಇದು ಮಾತ್ರವಲ್ಲ, ಮೇ ತಿಂಗಳಲ್ಲಿ ಟೋಲ್ ಸಂಗ್ರಹದ ಹೆಚ್ಚಳವು ಆರ್ಥಿಕ ಚಟುವಟಿಕೆಯ ಹೆಚ್ಚಳವನ್ನೂ ತೋರಿಸುತ್ತದೆ" ಎಂದು ಪ್ರಧಾನಿ ಹೇಳಿದರು.
ರಪ್ತು ವಲಯ ಚೇತರಿಸಿಕೊಳ್ಳುತ್ತಿದೆ
ಸತತ 3 ತಿಂಗಳು ರಫ್ತು ಕಡಿಮೆಯಾದ ನಂತರ, ಜೂನ್ನಲ್ಲಿ ರಫ್ತು ಮತ್ತೆ ಏರಿದೆ. ಇವೆಲ್ಲವೂ ನಮ್ಮನ್ನು ಮುಂದೆ ಸಾಗಲು ಪ್ರೋತ್ಸಾಹಿಸುವ ಚಿಹ್ನೆಗಳು ಎಂದು ಮೋದಿ ಹೇಳಿದರು.
ಅನ್ಲಾಕ್ 2.0
ಕೊರೊನಾಕ್ಕೆ ಜಗ್ಗದೇ ನಮ್ಮ ಆರ್ಥಿಕತೆಯು ಹೆಚ್ಚು ತೆರೆದುಕೊಳ್ಳುತ್ತದೆ. ನಮ್ಮ ಕಚೇರಿಗಳು ತೆರೆಯುತ್ತವೆ. ಮಾರುಕಟ್ಟೆಗಳು ತೆರೆದುಕೊಳ್ಳುತ್ತವೆ. ಸಾರಿಗೆ ತೆರೆದುಕೊಳ್ಳುತ್ತವೆ. ಆದ್ದರಿಂದ ಹೊಸ ಉದ್ಯೋಗಾವಕಾಶಗಳು ಸಿಗಲಿವೆ ಎಂದು ಪ್ರಧಾನಿ ಮೋದಿ ಅವರು ಅನ್ಲಾಕ್ 2.0 ಬಗ್ಗೆ ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಿದರು.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications