ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಂಗಳವಾರ ಹೀರೋ ಮೋಟೋಕಾರ್ಪ್ ಕಾರ್ಯನಿರ್ವಾಹಕ ಅಧ್ಯಕ್ಷ ಪವನ್ ಮುಂಜಾಲ್ ಮತ್ತು ಇತರರ ನಿವಾಸ ಮತ್ತು ಕಟ್ಟಡಗಳ ಮೇಲೆ ದಾಳಿ ಮಾಡಿ, ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರಮುಖವಾಗಿ ದೆಹಲಿ ಮತ್ತು ಇತರೆ ಪ್ರದೇಶದಲ್ಲಿ ಈ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ದೆಹಲಿ ಹಾಗೂ ಗುರುಗ್ರಾಮದಲ್ಲಿರುವ ಹೀರೋ ಮೋಟೋಕಾರ್ಪ್ ಸಂಬಂಧಿತ ಕಚೇರಿಗಳ ಮೇಲೆ ಇಡಿ ದಾಳಿಯನ್ನು ನಡೆಸಿದೆ, ಶೋಧ ಮಾಡಿದೆ ಎಂದು ವರದಿಯು ಹೇಳಿದೆ. ವಿದೇಶಿ ಕರೆನ್ಸಿಯನ್ನು ಸಾಗಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ತನಿಖೆಯನ್ನು ನಡೆಸಲಾಗಿದ್ದು, ಮುಂಜಾಲ್ಗೆ ನಿಕಟವಾದ ವ್ಯಕ್ತಿಯಾದ ಕಾರಣ ಮುಂಜಾಲ್ ಮನೆ, ಕಚೇರಿ ಮೇಲೆಯೂ ದಾಳಿ ನಡೆಸಲಾಗಿದೆ.

ಕಳೆದ ವರ್ಷದಲ್ಲಿ ದಾಳಿ ನಡೆಸಿದ್ದ ಇಡಿ
ತೆರಿಗೆ ವಂಚನೆ ಪ್ರಕರಣದ ತನಿಖೆಯ ಭಾಗವಾಗಿ ಕಳೆದ ವರ್ಷ ಮಾರ್ಚ್ನಲ್ಲಿ ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ಕಾರ್ಯನಿರ್ವಾಹಕ ಅಧ್ಯಕ್ಷ ಪವನ್ ಮುಂಜಾಲ್ ಮತ್ತು ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟಾರ್ಕಾರ್ಪ್ ಮೇಲೆ ದಾಳಿ ನಡೆಸಿತ್ತು.
ಕಂಪನಿಯ ಷೇರು ಕುಸಿತ
ಹೀರೋ ಮೋಟೋಕಾರ್ಪ್ ಕಾರ್ಯನಿರ್ವಾಹಕ ಅಧ್ಯಕ್ಷ ಪವನ್ ಮುಂಜಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯವು ದಾಳಿಯನ್ನು ನಡೆಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಸಂಸ್ಥೆಯ ಷೇರು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮೋಟೋಕಾರ್ಪ್ ಷೇರು ಪ್ರಪಾತಕ್ಕೆ ಇಳಿಯುತ್ತಿದೆ.
ದಾಳಿಯ ಸುದ್ದಿಯಾಗುತ್ತದ್ದಂತೆ ಹೀರೋ ಮೋಟೋಕಾರ್ಪ್ ಸ್ಟಾಕ್ ಬಿಎಸ್ಇಯಲ್ಲಿ ಸುಮಾರು ಶೇಕಡ 5.34 ರಷ್ಟು ಇಳಿಕೆಯಾಗಿ, 3,032.10 ರೂಪಾಯಿಗೆ ತಲುಪಿದೆ. ಆದರೆ ನಾವು ವರ್ಷದಿಂದ ವರ್ಷಕ್ಕೆ ನೋಡಿದಾಗ ಈ ಸಂಸ್ಥೆಯ ಷೇರು ಶೇಕಡ 13 ರಷ್ಟು ಏರಿಕೆಯನ್ನು ಕಂಡಿದೆ. ಇನ್ನು ಈ ಸಮಯಕ್ಕೆ ಷೇರು ಸುಮಾರು ಶೇಕಡ 3.07ರಷ್ಟು ಇಳಿಕೆಯಾಗಿ, 3,105.50 ರೂಪಾಯಿಗೆ ತಲುಪಿದೆ.
ಹೀರೋ ಮೋಟೋಕಾರ್ಪ್ 2001 ರಲ್ಲಿ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕರಾಗಿ ಬೆಳೆದ ಸಂಸ್ಥೆಯಾಗಿದೆ. ಕಳೆದ 20 ಸತತ ವರ್ಷಗಳಿಂದಲೂ ಹೀರೋ ಮೋಟೋಕಾರ್ಪ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಕಂಪನಿಯು ಏಷ್ಯಾ, ಆಫ್ರಿಕಾ, ಮಧ್ಯ ಅಮೇರಿಕಾ, ಮತ್ತು ದಕ್ಷಿಣ ಮತ್ತು 40 ದೇಶಗಳಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications