ಯೆಸ್ ಬ್ಯಾಂಕ್ನಿಂದ ಅಕ್ರಮ ಹಣ ವರ್ಗಾವಣೆ ಹಾಗೂ ನಷ್ಟವೊಂದಿದ ಕಂಪನಿಗಳಿಗೆ ಸಾಲ ನೀಡಿರುವ ಪ್ರಕರಣಗಳನ್ನು ಜಾರಿ ನಿರ್ದೇಶನಾಲಯ(ಇಡಿ) ಬಹಳ ಜಾಗರೂಕತೆಯಿಂದ ವಿಚಾರಣೆ ನಡೆಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲಯನ್ಸ್ ಗ್ರೂಪ್ ಚೇರ್ಮೆನ್ ಅನಿಲ್ ಅಂಬಾನಿಗೂ ಸೋಮವಾರ ಸಮನ್ಸ್ ನೀಡಿದೆ.
ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರುಪಾಯಿ ವಸೂಲಾಗದ ಸಾಲ(ಎನ್ಪಿಎ)ವನ್ನು ಹೊಂದಿದೆ. ಹೀಗೆ ಯೆಸ್ ಬ್ಯಾಂಕ್ ನಿಂದ ಸಾಲ ಪಡೆದು ತೀರಿಸದೆ ಇರುವ ಕಂಪನಿಯಲ್ಲಿ ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್ ಕೂಡ ಸೇರಿದೆ. ಬಹುಮೊತ್ತದ ಸಾಲ ಪಡೆದಿರುವ ಅನಿಲ್ ಅಂಬಾನಿ ನಷ್ಟವೊಂದಿದ್ದು ಸಾಲವನ್ನು ತೀರಿಸಿಲ್ಲ. ಹೀಗೆ ಬಹು ಪ್ರಕರಣಗಳು ಸಾಲ ಪಡೆದು ತೀರಿಸದೇ ಇರುವುದು ಯೆಸ್ ಬ್ಯಾಂಕ್ನ ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ.

ಈ ವಿಚಾರವಾಗಿ ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನೀಡಿದ್ದು, ಹಾಜರಾಗುವಂತೆ ಹೇಳಿದೆ. ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮೇಲ್ವಿಚಾರಣೆಯಲ್ಲಿ ಅಂಬಾನಿ ಸಾವಿರಾರು ಕೋಟಿ ಸಾಲ ಪಡೆದಿದ್ದಾರೆ. ಆದಾಗ್ಯೂ ಆರೋಗ್ಯ ಸಮಸ್ಯೆಯಿಂದ ಇಡಿ ಕಚೇರಿಗೆ ಹಾಜರಾಗುವ ದಿನಾಂಕದಲ್ಲಿ ವಿನಾಯಿತಿ ಬೇಕು ಎಂದು ಅನಿಲ್ ಅಂಬಾನಿ ಕೇಳಿಕೊಂಡಿದ್ದು, ಹಾಜರಾಗಬೇಕಿರುವ ದಿನಾಂಕ ಬದಲಾಗಿದೆ.
ಅಂಬಾನಿಯ ಗ್ರೂಪ್ ಬ್ಯಾಂಕಿನಿಂದ 12,800 ಸಾವಿರ ಕೋಟಿಗಳಷ್ಟು ಸಾಲ ಪಡೆದಿದ್ದು ಹಿಂದಿರುಗಿಸಲ್ಲ. ಇದೆಲ್ಲಾ ದೊಡ್ಡ ಮಟ್ಟದಲ್ಲಿ ಬ್ಯಾಂಕ್ಗೆ ಹೊರೆಯಾಗಿದ್ದು ವಸೂಲಾಗದ ಸಾಲವಾಗಿ ಪರಿಣಮಿಸಿದೆ.
ಮಾರ್ಚ್ 6ರಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಿಲ್ ಅಂಬಾನಿ ಗ್ರೂಪ್, ಎಸ್ಸೆಲ್, ಐಎಲ್ಎಫ್ಎಸ್, ಡಿಹೆಚ್ಎಫ್ಎಲ್ ಮತ್ತು ವೊಡಾಫೋನ್ ಕಾರ್ಪೊರೇಟ್ ಸಾಲಗಳಿಂದ ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications