ನವದೆಹಲಿ, ಮೇ 23: ಜಗತ್ತಿನ ಸಿರಿವಂತ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ಟೆಸ್ಲಾ ಕಂಪನಿಯ ಅಧ್ಯಕ್ಷ ಇಲಾನ್ ಮಸ್ಕ್ ಕಳೆದ ತಿಂಗಳು ಪ್ರಧಾನಿ ಮೋದಿಯನ್ನು ಭೇಟಿ ಮಾಡಲು ಭಾರತಕ್ಕೆ ಬರಲಿದ್ದಾರೆ ಎಂದು ವರದಿಯಾಗಿತ್ತು. ಈ ಭೇಟಿಯ ವೇಳೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ತಯಾರಿಕೆಗಾಗಿ ಗಿಗಾಫ್ಯಾಕ್ಟರಿ ಸ್ಥಾಪಿಸಲು ಮಾತುಕತೆ ನಡೆಸಬಹುದೆಂಬ ಎಂಬ ಊಹಾಪೋಹಗಳಿತ್ತು. ಆದರೆ ಚರ್ಚಿಸಲು ನಿಗದಿಯಾಗಿದ್ದ ಭೇಟಿಯನ್ನು ಕೊನೆ ಕ್ಷಣದಲ್ಲಿ ಮಸ್ಕ್ ರದ್ದುಪಡಿಸಿ ಚೀನಾಗೆ ಹಾರಿದ್ದರು. ಈ ಎಲ್ಲಾ ಬೆಳವಣಿಗೆ ಬಳಿಕ ಮಸ್ಕ್ ಇದೀಗ ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಬೇಟಿ ನೀಡಲು ಮುಂದಾಗಿದ್ದಾರೆ
ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲೋನ್ ಮಸ್ಕ್ ಶ್ರೀಲಂಕಾದಲ್ಲಿ ತನ್ನ ಸ್ಟಾರ್ಲಿಂಕ್ ಇಂಟರ್ನೆಟ್ ಸೇವೆಗಳನ್ನು ಹೊರತರಲು ನೋಡುತ್ತಿದ್ದಾರೆ. ಮಸ್ಕ್ ತನ್ನ ಭಾರತ ಭೇಟಿಯನ್ನು ರದ್ದುಗೊಳಿಸಿದ ಚೀನಾ ಮತ್ತು ಇಂಡೋನೇಷ್ಯಾಕ್ಕೆ ಭೇಟಿ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ಸ್ಟಾರ್ಲಿಂಕ್ ಅನ್ನು ವಿಸ್ತರಿಸಲು ಮತ್ತು ಜಾಗತಿಕವಾಗಿ ಮೊಬೈಲ್ ಬ್ರಾಡ್ಬ್ಯಾಂಡ್ ಸೇವೆಗಳನ್ನು ಮುನ್ನಡೆಸಲು ನಿರಂತರ ಪ್ರಯತ್ನ ನಡೆಸುತ್ತಿರುವ ಸ್ಪೇಸ್ಎಕ್ಸ್ ಮೇ 19 ರಂದು ದ್ವೀಪ ರಾಷ್ಟ್ರದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯನ್ನು ಪ್ರಾರಂಭಿಸಲು ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದರು.

ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ 10ನೇ ವಿಶ್ವ ಜಲ ವೇದಿಕೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರೊಂದಿಗೆ ಸ್ಟಾರ್ಲಿಂಕ್ ಸೇವೆಗಳ ಅವಕಾಶಗಳನ್ನು ಟೆಸ್ಲಾ ಸಿಇಒ ಚರ್ಚಿಸಿದ್ದಾರೆ ಎನ್ನಲಾಗಿದೆ
ರನಿಲ್ ವಿಕ್ರಮಸಿಂಘೆ ಅವರ ಮಾಧ್ಯಮ ವಿಭಾಗ ಮಾಡಿದ X ನಲ್ಲಿನ ಪೋಸ್ಟ್ನಲ್ಲಿ, "ಇಂಡೋನೇಷ್ಯಾದಲ್ಲಿ ನಡೆದ 10 ನೇ ವಿಶ್ವ ಜಲ ವೇದಿಕೆಯ ಉನ್ನತ ಮಟ್ಟದ ಸಭೆಯ ಸಂದರ್ಭದಲ್ಲಿ, ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಎಲೋನ್ ಮಸ್ಕ್ ಅವರನ್ನು ಭೇಟಿಯಾಗಿ ಶ್ರೀಲಂಕಾದಲ್ಲಿ @Starlink ಅನುಷ್ಠಾನದ ಕುರಿತು ಚರ್ಚಿಸಿದರು."ಎಂದು ಬರೆದುಕೊಂಡಿದೆ.
ಆದರೆ ಎಲೋನ್ ಅವರ ಶ್ರೀಲಂಕಾ ಭೇಟಿಯ ನಿಖರವಾದ ದಿನಾಂಕಗಳನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಆದರೆ ಭೇಟಿಯ ಏರ್ಪಾಡುಗಳನ್ನು, ಅದರ ದಿನಾಂಕ ಅಂತಿಮಗೊಳಿಸಲು ಶ್ರೀಲಂಕಾ ಸರ್ಕಾರವು ಎಲೋನ್ ಅವರ ತಂಡದೊಂದಿಗೆ ಸಂಪರ್ಕದಲ್ಲಿದೆ ಎಂದು ವರದಿಯಾಗಿದೆ. ಬಾಲಿಯಲ್ಲಿ ನಡೆದ ಚರ್ಚೆಯಲ್ಲಿ, ಅಧ್ಯಕ್ಷ ಎಲಾನ್ ಶ್ರೀಲಂಕಾದ ಪುನರುಜ್ಜೀವನ, ಆರ್ಥಿಕ ದಕ್ಷತೆ ಮತ್ತು ಹೂಡಿಕೆಗೆ ಹೊಸ ಅವಕಾಶಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.
ಶ್ರೀಲಂಕಾದ ನೀರು ಸರಬರಾಜು ಮತ್ತು ಎಸ್ಟೇಟ್ ಮೂಲಸೌಕರ್ಯ ಅಭಿವೃದ್ಧಿ ಸಚಿವ ಜೀವನ್ ಥೋಂಡಮನ್ ಈ ಕುರಿತು ಎಕ್ಸ್ ಮಾಡಿದ್ದು, ನಾನು ಅಧ್ಯಕ್ಷ ವಿಕ್ರಮಸಿಂಘೆಯೊಂದಿಗೆ ಇಂಡೋನೇಷ್ಯಾಕ್ಕೆ ತೆರಳಿ ವಿಶ್ವ ಜಲ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದೆವು. ಇದೇ ವೇಳೆ ಶ್ರೀಲಂಕಾ ಅಧ್ಯಕ್ಷರು ಮತ್ತು ಟೆಸ್ಲಾ ಸಿಇಓ ಶ್ರೀಲಂಕಾದ ಚೇತರಿಕೆ, ಆರ್ಥಿಕ ಕಾರ್ಯಸಾಧ್ಯತೆ ಮತ್ತು ಹೊಸ ಹೂಡಿಕೆ ಅವಕಾಶಗಳ ಬಗ್ಗೆ ಎಲೋನ್ ಮಸ್ಕ್ ಅವರೊಂದಿಗೆ ಚರ್ಚಿಸಿದರು ಎಂದು ಬರೆದುಕೊಂಡಿದ್ದಾರೆ.
ಏಪ್ರಿಲ್ 20 , 22 ರಂದು ಮಸ್ಕ್ ಭಾರತಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅದು ರದ್ದಾಗಿತ್ತು., "ದುರಾದೃಷ್ಟವಶಾತ್ ಟೆಸ್ಲಾ ಬಾದ್ಯತೆಗಳ ಹಿನ್ನಲೆ ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡುವ ಅಗತ್ಯ ಏರ್ಪಟಿದೆ. ಈ ವರ್ಷಾಂತ್ಯದಲ್ಲಿ ಭಾರತ ಪ್ರವಾಸ ಕುರಿತು ಯೋಚಿಸಲಾಗುವುದು" ಎಂದು ಬರೆದುಕೊಂಡಿದ್ದರು.
More From GoodReturns

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಏಪ್ರಿಲ್ 1ರಿಂದ ಈ ರಾಜ್ಯದ ಸರ್ಕಾರಿ ಜನರಿಗೆ ಹೊಸ ಪಿಂಚಣಿ...ಕೊನೆಯ ಸಂಬಳದ 50%ನಷ್ಟು ಖಚಿತ! ಈ ಗುಡ್ನ್ಯೂಸ್ ಯಾರಿಗೆ?

SBI Credit Card: ಎಸ್ಬಿಐ ಗ್ರಾಹಕರೇ ಇಲ್ಲಿ ಗಮನಿಸಿ! ಏಪ್ರಿಲ್ 1 ರಿಂದ ಈ ನಿಯಮ ಚೇಂಜ್

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Investment: ಹೂಡಿಕೆ ತಡವಾಗಿ ಮಾಡ್ತಿದ್ದೀರ? 35ರ ನಂತರ ಹೇಗೆ ಸಂಪತ್ತು ನಿರ್ಮಿಸಬೇಕು ಎಂದು ಇಲ್ಲಿ ತಿಳಿಯಿರಿ



Click it and Unblock the Notifications