ಇಂಗ್ಲೆಂಡ್ ನಲ್ಲಿ ಮಂಗಳವಾರ (ಜನವರಿ 5, 2021) ಕಠಿಣ ಲಾಕ್ ಡೌನ್ ಹೇರಲಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ವಿಪರೀತ ಹೆಚ್ಚಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಸರ್ಕಾರದ ಹಿರಿಯ ಸಚಿವರು ಹೇಳುವಂತೆ, ಮಾರ್ಚ್ ತನಕ ಲಾಕ್ ಡೌನ್ ಆಗಬಹುದು. ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸಂಜೆ ಘೋಷಣೆ ಮಾಡಿರುವಂತೆ, ಶಾಲೆಗಳು ಮುಚ್ಚಲಾಗಿದೆ ಮತ್ತು ಅಗತ್ಯಗಳಿಗೆ ಹೊರತುಪಡಿಸಿ ಮನೆಯಿಂದ ಹೊರ ಬಾರದಂತೆ ತಿಳಿಸಲಾಗಿದೆ.
ಸಂಪುಟ ಕಚೇರಿಯ ಸಚಿವರಾದ ಮೈಕೇಲ್ ಗೋವ್ ಸ್ಕೈನ್ಯೂಸ್ ಜತೆ ಮಂಗಳವಾರ ಬೆಳಗ್ಗೆ ಮಾತನಾಡಿ, ಆರು ವಾರಗಳ ಕಾಲ ಘೋಷಣೆ ಆಗಿರುವ ಲಾಕ್ ಡೌನ್ ಯಾವಾಗ ತೆರವಾಗಬಹುದು ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ. ಇದು ಬಹಳ, ಬಹಳ ಕಷ್ಟದ ವಾರಗಳು ಎಂದು ಹೇಳಿದ್ದಾರೆ.
ಕ್ರಮಗಳನ್ನು ಫೆಬ್ರವರಿ 15ರಿಂದ ಪರಿಶೀಲಿಸಲಾಗುವುದು, ಆದರೆ ಸರ್ಕಾರದಿಂದ ನಿರ್ದಿಷ್ಟವಾಗಿ ಹೀಗೆ ಎಂದು ಮಿರ್ಬಂಧದ ವಿಚಾರದಲ್ಲಿ ಹೇಳಲು ಸಾಧ್ಯವಿಲ್ಲ. "ನಾವು ಮಾರ್ಚ್ ತಿಂಗಳಿಗೆ ಪ್ರವೇಶಿಸಿದ ಮೇಲೆ ಕೆಲವು ನಿರ್ಬಂಧಗಳನ್ನು ತೆರವು ಮಾಡುವುದಕ್ಕೆ ಸಾಧ್ಯವಾಗಬಹುದು, ಆದರೆ ಎಲ್ಲವೂ ಅಲ್ಲ," ಎಂದು ಅವರು ಹೇಳಿದ್ದಾರೆ.

ಈ ಕ್ರಮಗಳು ಇಂಗ್ಲೆಂಡ್ ನಲ್ಲಿ ಮಂಗಳವಾರ ಬೆಳಗ್ಗೆಯಿಂದ ಆರಂಭವಾಗಿದೆ. ಬುಧವಾರ ಬೆಳಗ್ಗೆಯಿಂದ ಇವು ಕಾನೂನಾಗಿ ಬಿಡುತ್ತವೆ. ಸ್ಕಾಟ್ಲೆಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್ ನಲ್ಲಿ ಕೂಡ ಶಾಲೆಯನ್ನು ಮುಚ್ಚುವುದು ಸೇರಿದಂತೆ ಕಠಿಣ ಲಾಕ್ ಡೌನ್ ತರಲಾಗಿದೆ.
ಯುನೈಟೆಡ್ ಕಿಂಗ್ ಡಮ್ ನಲ್ಲಿ ಸೋಮವಾರದಂದು ಒಟ್ಟು 58,784 ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಕಳೆದ ಏಳು ದಿನಕ್ಕೆ ಹೋಲಿಸಿದರೆ ಶೇಕಡಾ ಐವತ್ತರಷ್ಟು ಹೆಚ್ಚಾಗಿದೆ. ಒಟ್ಟಾರೆಯಾಗಿ ಬ್ರಿಟನ್ ನಲ್ಲಿ 27 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 75,431 ಮಂದಿ ಸಾವನ್ನಪ್ಪಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications