ದಶಕಗಳಷ್ಟು ಹಳೆಯದಾದ ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟವು ಬುಧವಾರ ಒಪ್ಪಿಗೆ ನೀಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಈ ತಿದ್ದುಪಡಿಯಿಂದಾಗಿ ಕೃಷಿ ವಲಯಕ್ಕೆ ಬಂಡವಾಳ ಆಕರ್ಷಿಸಬಹುದು. ಈ ಹೊಸ ನಡೆಯಿಂದ ಧಾನ್ಯಗಳು, ಅಡುಗೆ ಎಣ್ಣೆ, ಎಣ್ಣೆ ಕಾಳುಗಳು, ದ್ವಿದಳ ಧಾನ್ಯ, ಈರುಳ್ಳಿ ಹಾಗೂ ಆಲೂಗಡ್ಡೆಯಂಥದ್ದರ ಮೇಲೆ ಇರುವ ನಿಯಂತ್ರಣ ಹೋಗುತ್ತದೆ ಎಂದಿದ್ದಾರೆ.
ಇನ್ನು ಮುಂದೆ ವರ್ತಕರಿಗೆ ಇಷ್ಟು ಪ್ರಮಾಣದಲ್ಲಿ ಮಾತ್ರ ದಾಸ್ತಾನು ಇಟ್ಟುಕೊಳ್ಳಬೇಕು ಎಂಬ ಮಿತಿ ಇರುವುದಿಲ್ಲ. ಈ ದಿನ ಐತಿಹಾಸಿಕವಾದದ್ದು. ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂದಿದ್ದರೆ, ದೇಶದ ರೈತರಿಗೆ ಈ ದಿನ ಸ್ವಾತಂತ್ರ್ಯ ಸಿಕ್ಕಂತಾಯಿತು ಎಂದು ತೋಮರ್ ಹೇಳಿದ್ದಾರೆ. ಇನ್ನು ಮುಂದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸಮಸ್ಯೆಗಳು ಸಹ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ.
ರೈತರು ತಮ್ಮ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಗೆ ಎಲ್ಲಾದರೂ ಮಾರಾಟ ಮಾಡಬಹುದು. ರೈತರೇ ಎಲೆಕ್ಟ್ರಾನಿಕ್ ಪ್ಲಾಟ್ ಫಾರ್ಮ್ ಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಬಹುದು ಎಪಿಎಂಸಿಯಿಂದ ಹೊರಗೆ ಮಾರುವ ಯಾವುದೇ ಉತ್ಪನ್ನಗಳ ಮೇಲೆ ತೆರಿಗೆ ಹಾಕುವುದಿಲ್ಲ ಒಂದು ದೇಶ, ಒಂದು ಮಾರುಕಟ್ಟೆ ಎಂಬ ದೂರದೃಷ್ಟಿಯೊಂದಿಗೆ ಭಾರತ ಮುಂದುವರಿಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಮತ್ತೊಂದು ಮಹತ್ವದ ತೀರ್ಮಾನದಲ್ಲಿ, ರೈತರ ಭೂಮಿ ವ್ಯಾಜ್ಯಗಳ ನಿವಾರಣೆಗೆ ಎಸ್ ಡಿಎಂ ಅಥವಾ ಡಿಸಿ ಜವಾಬ್ದಾರರು ಎನ್ನಲಾಗಿದೆ. ಭಾರತದಲ್ಲಿ ಶೇಕಡಾ ಎಂಬತ್ತೈದರಷ್ಟು ಸಣ್ಣ ಹಿಡುವಳಿ ರೈತರು ಇದ್ದಾರೆ. ಇಂದಿನ ಕ್ರಮದಿಂದ ವರ್ತಕರು, ಬಂಡವಾಳ, ತಂತ್ರಜ್ಞಾನ ಹೀಗೆ ಎಲ್ಲ ಅಗತ್ಯವೂ ರೈತರಿಗೆ ದೊರೆತಂತೆ ಆಗುತ್ತದೆ ಎಂದು ತೋಮರ್ ಹೇಳಿದ್ದಾರೆ.
ಮೋದಿ ಸರ್ಕಾರ ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಒಪ್ಪಿಕೊಂಡಿದೆ. ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಲು ವ್ಯವಸ್ಥೆ ಮಾಡಿದೆ. ಸರ್ಕಾರದ ಇಂದಿನ ನಿರ್ಧಾರವು ಕೃಷಿ ವಲಯವನ್ನು ಹೊಸ ಎತ್ತರಕ್ಕೆ ಒಯ್ಯುತ್ತದೆ. ಭಾರತದ ಕೃಷಿಕರ ಜೀವನ ಮಟ್ಟವು ಇದರಿಂದ ಸುಧಾರಣೆ ಕಾಣುತ್ತದೆ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications