ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಸ್ಟ್ 7ನೇ ತಾರೀಕಿನ ಶುಕ್ರವಾರ ಹೊಸದಾಗಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಮತ್ತು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಈ ನಿರ್ಧಾರಕ್ಕೆ ಬಂದಿದ್ದಾರೆ.
ಈ ಹೊಸ ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ, ತ್ರಿಚಕ್ರ ಹಾಗೂ ಕಾರು ಖರೀದಿಸುವವರಿಗೆ ಸರ್ಕಾರವು ಹಣಕಾಸು ನೆರವು ನೀಡಬೇಕಾಗುತ್ತದೆ. ಅದರ ಜತೆಗೆ "ಸ್ಕ್ರಾಪಿಂಗ್ ಪ್ರೋತ್ಸಾಹಧನ"ವನ್ನು ಕೊಡಬೇಕಾಗುತ್ತದೆ. ಈ ಹೊಸ ನೀತಿ ಜಾರಿಯಿಂದ ಮುಂದಿನ ಐದು ವರ್ಷಗಳಲ್ಲಿ ಐದು ಲಕ್ಷ ಹೊಸ ಎಲೆಕ್ಟ್ರಿಕ್ ವಾಹನ ನೋಂದಣಿಯನ್ನು ಸರ್ಕಾರ ನಿರೀಕ್ಷಿಸುತ್ತದೆ ಎಂಬುದನ್ನು ಕೇಜ್ರಿವಾಲ್ ಹೇಳಿದ್ದಾರೆ.
ಎಲೆಕ್ಟ್ರಿಕ್ ದ್ವಿಚಕ್ರ, ಆಟೋ ಹಾಗೂ ಇ ರಿಕ್ಷಾಗಳಿಗೆ 30,000 ರುಪಾಯಿ ತನಕ ಹಾಗೂ ಎಲೆಕ್ಟ್ರಿಕ್ ಕಾರುಗಳಿಗೆ 1.5 ಲಕ್ಷದ ತನಕ ಪ್ರೋತ್ಸಾಹಧನ ದೊರೆಯುತ್ತದೆ. ದೆಹಲಿ ಸರ್ಕಾರದಿಂದ ಎಲೆಕ್ಟ್ರಿಕ್ ವಾಹನಗಳಿಗೆ ಒಂದು ವಿಭಾಗವನ್ನೇ ತೆರೆಯುತ್ತದೆ ಮತ್ತು ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ನಿಗಾ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಇಂದು ಅಧಿಸೂಚನೆ ಹೊರಡಿಸಲಾಗಿದೆ. ಈ ನೀತಿಯನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲು ರಾಜ್ಯ ಎಲೆಕ್ಟ್ರಿಕ್ ವಾಹನ ಮಂಡಳಿ ಸ್ಥಾಪಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇನ್ನು ಇದನ್ನು "ಪ್ರಗತಿಪರ ನೀತಿ" ಎಂದು ಕರೆದಿರುವ ಕೇಜ್ರಿವಾಲ್, ಮುಂದಿನ ಒಂದು ವರ್ಷದಲ್ಲಿ ಎಲೆಕ್ಟ್ರಿಕ್ ವಾಹನಗಳ 100 ಚಾರ್ಜಿಂಗ್ ಸ್ಟೇಷನ್ ಅನ್ನು ನಗರದಲ್ಲಿ ಶುರು ಮಾಡಲಾಗುವುದು ಎಂದಿದ್ದಾರೆ.
ರಾಜ್ಯವೊಂದಕ್ಕೆ ಹೊರೆಯಾಗದೆ ಒಂದು ನೀತಿಯನ್ನು ಹೇಗೆ ತರಬಹುದು ಎಂಬುದಕ್ಕೆ ಇದು ಉತ್ತಮ ಉದಾಹರಣೆ. ದೆಹಲಿಯ EV ನೀತಿ ಇತರ ರಾಜ್ಯಗಳಿಗೆ ನಿದರ್ಶನ ಎಂದು ಸೊಸೈಟಿ ಆಫ್ ಮ್ಯಾನುಫ್ಯಾಕ್ಚರರ್ಸ್ ಆಫ್ ಎಲೆಕ್ಟ್ರಿಕ್ ವೆಹಿಕಲ್ಸ್ (SMEV) ಡೈರೆಕ್ಟರ್ ಜನರಲ್ ಸೊಹಿಂದರ್ ಗಿಲ್ ಹೇಳಿದ್ದಾರೆ.
ಉತ್ತಮ ಆಲೋಚನೆ, ಚಿಂತನೆ ಒಳಗೊಂಡ ಎಲೆಕ್ಟ್ರಿಕ್ ವಾಹನ ನೀತಿಯನ್ನು ಬಹಳ ಶೀಘ್ರವಾಗಿ ಅಧಿಸೂಚನೆ ಹೊರಡಿಸಿದ ದೆಹಲಿ ಮತ್ತು ತೆಲಂಗಾಣ ಸರ್ಕಾರಕ್ಕೆ ಮಹೀಂದ್ರಾ ಎಲೆಕ್ಟ್ರಿಕ್ ಎಂ.ಡಿ. ಹಾಗೂ ಸಿಇಒ ಮಹೇಶ್ ಬಾಬು ಧನ್ಯವಾದ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications