ಭಾರತದಲ್ಲಿ ಯುವ ಉದ್ಯಮಿಗಳು ಬೆಳೆಯಲು ಅನುಕೂಲವಾದ ಪರಿಸ್ಥಿತಿ ಇದೆ. ಇಲ್ಲಿಯ ಪ್ರತಿಯೊಬ್ಬ ಸಣ್ಣ ಉದ್ಯಮಿ ಮತ್ತು ಉದ್ಯಮವೂ ಧೀರೂಭಾಯ್ ಅಂಬಾನಿಯೋ ಅಥವಾ ಬಿಲ್ ಗೇಟ್ಸ್ ಆಗುವ ಅವಕಾಶ ಹೊಂದಿದ್ದಾರೆ ಎಂದು ಆರ್ಐಎಲ್ ಚೇರ್ಮನ್ ಮುಕೇಶ್ ಅಂಬಾನಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ''ಫ್ಯೂಚರ್ ಡೀಕೋಡೆಡ್ ಸಿಇಒ 2020'' ಶೃಂಗಸಭೆಯಲ್ಲಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅಂಬಾನಿ ಭವಿಷ್ಯದಲ್ಲಿ ಗೇಮಿಂಗ್ ಉತ್ತುಂಗಕ್ಕೇರುತ್ತದೆ ಎಂದು ಭವಿಷ್ಯ ನುಡಿದರು.

ಇದೇ ವೇಳೆ ಮಾತನಾಡಿದ ಮುಕೇಶ್ ಅಂಬಾನಿ ವಿಶ್ವದ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ವಿಶೇಷತೆಯೇ ಇದಾಗಿದೆ. ತಳಮಟ್ಟದಲ್ಲಿ ಉದ್ಯಮಶೀಲತೆಯ ಶಕ್ತಿ ಸಾಕಷ್ಟಿದೆ. ಈ ಸಣ್ಯ ಉದ್ಯಮಗಳು ದೇಶದ 70 ಪರ್ಸೆಂಟ್ರಷ್ಟು ಉದ್ಯೋಗ ನೀಡುತ್ತವೆ. ಭಾರತದ ರಫ್ತಿನಲ್ಲಿ 40 ಪರ್ಸೆಂಟ್ ಪಾಲು ಈ ಉದ್ಯಮಗಳಿಗಿದೆ. ಇವರಿಗೆ ಉತ್ತಮ ತಂತ್ರಜ್ಞಾನ ಸಿಕ್ಕರೆ ಭಾರತ ಇನ್ನಷ್ಟು ವೇಗದಲ್ಲಿ ಬೆಳೆಯಬಲ್ಲುದು ಎಂದು ಮುಕೇಶ್ ಅಂಬಾನಿ ಹೇಳಿದರು.
ಇನ್ನು 5 ಅಥವಾ ಹತ್ತು ವರ್ಷಗಳಲ್ಲಿ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕ ದೇಶವಾಗಲಿದೆ. ನೀವು 1992ರಲ್ಲಿ ಮೈಕ್ರೋಸಾಫ್ಟ್ಗೆ ಕೆಲಸಕ್ಕೆ ಸೇರಿದ ಸಂದರ್ಭದಲ್ಲಿ ಭಾರತದ ಆರ್ಥಿಕತೆ 300 ಬಿಲಿಯನ್ ಡಾಲರ್ (21 ಲಕ್ಷ ಕೋಟಿ ರೂ) ಇತ್ತು. ಇವತ್ತು 3 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಬೆಳೆದು ನಿಂತಿದೆ. ಇಷ್ಟು ಅಗಾಧವಾಗಿ ಭಾರತ ಬೆಳೆಯುತ್ತದೆಂದು ಯಾರೂ ಅಂದಾಜು ಮಾಡಿರಲಿಲ್ಲ ಎಂದು ಸತ್ಯ ನಾಡೆಲ್ಲಾ ಅವರಿಗೆ ಅಂಬಾನಿ ತಿಳಿಸಿದರು.
ಭಾರತದಲ್ಲಿ ಜಿಯೋ ಟೆಲಿಕಾಂ ವಲಯದಲ್ಲಿ ಕ್ರಾಂತಿಯನ್ನೇ ಮಾಡಿಬಿಟ್ಟಿದೆ. ನಮ್ಮ ಟೆಲಿಕಾಂ ಉದ್ಯಮವು ಡೇಟಾ ಬೆಲೆ ತಗ್ಗಲು ಪ್ರಮುಖ ಪಾತ್ರವಹಿಸಿದೆ. ಜಿಯೋ ಬರುವುದಕ್ಕೂ ಮೊದಲು ಪ್ರತಿ ಒಂದು ಜಿಬಿ ಡೇಟಾಗೆ 300 ರಿಂದ 500 ರುಪಾಯಿ ದರವಿತ್ತು. ಆದರೆ ಜಿಯೋ ಪ್ರತಿ ಜಿಬಿ ಡೇಟಾವನ್ನು 12 ರಿಂದ 14 ರುಪಾಯಿಗೆ ನೀಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿದೆ ಎಂದಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications