ಮಾಸ್ಟರ್ಕಾರ್ಡ್ನ ಮಾಜಿ ಸಿಇಒ ಮತ್ತು ಭಾರತ ಮೂಲದ ಅಜಯ್ ಬಂಗಾರ ಹೆಸರನ್ನು ವಿಶ್ವಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ವಾಷಿಂಗ್ಟನ್ ನಾಮನಿರ್ದೇಶನ (ಶಿಫಾರಸು) ಮಾಡುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಗುರುವಾರ ಹೇಳಿದ್ದಾರೆ. ಪ್ರಸ್ತುತ ವಿಶ್ವಬ್ಯಾಂಕ್ನ ಮುಖ್ಯಸ್ಥರಾದ ಡೇವಿಡ್ ಮಾಲ್ಪಾಸ್ ಶೀಘ್ರ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬಳಿಕ ಯುಎಸ್ ಅಧ್ಯಕ್ಷ ವಿಶ್ವ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾರನ್ನು ಶಿಫಾರಸು ಮಾಡಿದ್ದಾರೆ.
ಅಷ್ಟು ಮಾತ್ರವಲ್ಲದೆ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅಜಯ್ ಬಂಗಾರ ಗುಣಗಾನವನ್ನು ಕೂಡಾ ಮಾಡಿದ್ದಾರೆ. "ಅಜಯ್ ಬಂಗಾ ಮೂರು ದಶಕಕ್ಕೂ ಅಧಿಕ ಸಮಯದಿಂದ ಜಾಗತಿಕವಾಗಿ ಉದ್ಯೋಗ ಸೃಷ್ಟಿ, ದೊಡ್ಡ ಆರ್ಥಿಕತೆಯಲ್ಲಿ ಹೂಡಿಕೆ ಸೃಷ್ಟಿಸುವಲ್ಲಿ, ಹಲವಾರು ಬದಲಾವಣೆಗಳ ಮೂಲಕವೇ ಜಾಗತಿಕವಾಗಿ ಸಂಸ್ಥೆಗಳಿಗೆ ಮಾರ್ಗದರ್ಶನವನ್ನು ಯಶಸ್ವಿಯಾಗಿ ನೀಡುತ್ತಾ ಬಂದಿದ್ದಾರೆ. ಅಂತಹ ವ್ಯಕ್ತಿಯ ಹೆಸರನ್ನು ವಾಷಿಂಗ್ಟನ್ ವಿಶ್ವ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶಿಸುತ್ತದೆ," ಎಂದಿದ್ದಾರೆ.

ಹಾಗಾದರೆ ಅಜಯ್ ಬಂಗಾ ಯಾರು ಎಂದು ತಿಳಿಯೋಣ ಮುಂದೆ ಓದಿ?
63 ವರ್ಷದ ಅಜಯ್ ಬಂಗಾ ಭಾರತೀಯ-ಅಮೇರಿಕನ್ ಆಗಿದ್ದಾರೆ. ಪ್ರಸ್ತುತ ಈಕ್ವಿಸಿ ಸಂಸ್ಥೆಯಾದ ಜನರಲ್ ಅಟ್ಲಾಟಿಕ್ನಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಅದಕ್ಕೂ ಮುನ್ನ 2021ರಲ್ಲಿ ಆರಂಭವಾದ ಜನರಲ್ ಅಟ್ಲಾಂಟಿಕ್ನ ಬಿಯಾಂಡ್ನೆಟ್ಜಿರೋ ಸಾಹಸೋದ್ಯಮಕ್ಕೆ ಸಲಹೆಗಾರರಾಗಿದ್ದವರು. ಇದಕ್ಕೂ ಹಿಂದೆ ಮಾಸ್ಟರ್ಕಾರ್ಡ್ನ ಸಿಇಒ ಆಗಿ ಅಜಯ್ ಬಂಗಾ ಕಾರ್ಯನಿರ್ವಹಣೆ ಮಾಡಿದ್ದರು.
ಪ್ರಸ್ತುತ ವಿಶ್ವಬ್ಯಾಂಕ್ನ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಆಗಿದ್ದು, ತನ್ನ ಅವಧಿ ಪೂರ್ಣವಾಗುವುದಕ್ಕೂ ಮುನ್ನವೇ ಸ್ಥಾನವನ್ನು ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಆದ್ದರಿಂದಾಗಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಅಜಯ್ ಬಂಗಾ ಹೆಸರು ನಾಮನಿರ್ದೇಶನ ಮಾಡಿದ್ದಾರೆ. ಹಾಗೆಯೇ ಅಜಯ್ ಬಂಗಾರ ಸಾಮರ್ಥ್ಯವನ್ನು ಹಾಡಿಹೊಗಳಿದ್ದಾರೆ.
ಅಜಯ್ ಬಂಗಾ ಮಾಸ್ಟರ್ಕಾರ್ಡ್ ಮುಖ್ಯಸ್ಥರಾಗಿ ಮತ್ತು ಅಮೇರಿಕನ್ ರೆಡ್ ಕ್ರಾಸ್, ಕ್ರಾಫ್ಟ್ ಫುಡ್ಸ್ ಮತ್ತು ಡೌ ಇಂಕ್ನ ಮಂಡಳಿಗಳಲ್ಲಿಯೂ ಸೇವೆ ನೀಡಿದ್ದಾರೆ. ಒಟ್ಟಾಗಿ ಸುಮಾರು 30 ವರ್ಷಗಳ ಅನುಭವವನ್ನು ಅಜಯ್ ಬಂಗಾ ಹೊಂದಿದ್ದಾರೆ. ಇನ್ನು ನಾಮನಿರ್ದೇಶನಗೊಂಡ ಅಜಯ್ ಬಂಗಾರಿಗೆ ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫಾರಮ್ (ಯುಎಸ್ಐಎಸ್ಪಿಎಫ್) ಅಭಿನಂದನೆ ಸಲ್ಲಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications