ಬೆಂಗಳೂರು, ಡಿಸೆಂಬರ್ 11: ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ಸಾರ್ವಜನಿಕರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. 2023ರ ಮಾರ್ಚ್ 31ರೊಳಗೆ ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಪಾನ್ ಲಿಂಕ್ ಮಾಡಿಕೊಳ್ಳಿಎಂದು ಆದಾಯ ತೆರಿಗೆ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ.
ಅದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಅನ್ವಯ ಆಧಾರ್ ಜೊತೆಗೆ ಪಾನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆದರೆ ಈವರೆಗೆ ಸರ್ಕಾರ ಹಲವು ಬಾರಿ ಅವಕಾಶ ನೀಡಿದರೂ ಸಹ ಸಾಕಷ್ಟು ಸಂಖ್ಯೆಯ ಜನರು ಆಧಾರ್ ಜೊತೆಗೆ ಪಾನ್ ಲಿಂಕ್ ಮಾಡಿಕೊಂಡಿಲ್ಲ. ಈ ಕಾರಣಕ್ಕೆ ಇದೀಗ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆ ಗಡುವು ವಿಸ್ತರಿಸಿ ಮಹತ್ವದ ಸೂಚನೆ ನೀಡಿದೆ.
2023ರ ಮಾರ್ಚ್ 31ರ ಅಂತಿಮ ದಿನಾಂಕದೊಳಗೆ ನೀವು ಆಧಾರ್ ಮತ್ತು ಪಾನ್ ಲಿಂಕ್ ಮಾಡಿಕೊಳ್ಳದಿದ್ದರೆ ಅವಧಿ ಮುಗಿದ ಬಳಿಕ ಏಪ್ರಿಲ್ 1ರಿಂದ ಪಾನ್ ಕಾರ್ಡ್ ನಿಷ್ಕ್ರೀಯಗೊಳ್ಳಲಿದೆ. ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಗ್ ಮಾಡಲು ಅವಕಾಶ ನೀಡಿದೆ.

ಇ-ಪೋರ್ಟಲ್ ನಲ್ಲಿ ಸ್ವತಃ ಲಿಂಕ್ ಮಾಡಿಕೊಳ್ಳಿ
ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರೀಯಗೊಳಿಸಲು ಇಲಾಖೆ ನಿರ್ಧರಿಸಿದೆ. ಪಾನ್ ಕಾರ್ಡ್ ನಿಷ್ಕ್ರೀಯಗೊಂಡರೆ ಬ್ಯಾಂಕ್ ಜೊತೆಗೆ ವಹೀವಾಟು ನಡೆಸುವುದು ಸೇರಿದಂತೆ ಎಲ್ಲ ಹಣಕಾಸು ನಿರ್ವಹಣೆ ಕಾರ್ಯಗಳಿಗೆ ತೊಂದರೆ ಆಗಲಿದೆ.

ಒಂದು ವೇಳೆ ನೀವು ಆಧಾರ್ ಜೊತೆಗೆ ಪಾನ್ ಲಿಂಕ್ ಮಾಡಿಕೊಳ್ಳಲು ಆದಾಯ ತೆರಿಗೆ ಇಲಾಖೆ ಅಧಿಕೃತ ಜಾಲತಾಣವಾಗಿರುವ (ಇಪೋರ್ಟಲ್)ಈ www.eportal.incometax.gov.in ವೆಬ್ಸೈಟ್ ಭೇಟಿ ನೀಡಿ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಗೂ ಪಾನ್ ನಂಬರ್ ನಮೂದಿಸಿ ಅಲ್ಲಿನ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಸ್ವತಃ ನೀವೆ ಮೊಬೈಲ್ ನಲ್ಲಿ ಲಿಂಕ್ ಮಾಡಿಕೊಳ್ಳಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications