ಬೆಂಗಳೂರು, ಏಪ್ರಿಲ್ 6: ಪೂರ್ವ ಮತ್ತು ಭಾರತದ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶಾಖದ ಅಲೆ ಇರಲಿದ್ದು, ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ವಿದರ್ಭ, ಉತ್ತರ ಒಳನಾಡಿನ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ಇಂದು ಮತ್ತು ನಾಳೆ ಶಾಖದ ಅಲೆಯ ಪರಿಸ್ಥಿತಿಗಳು ಪ್ರತ್ಯೇಕವಾಗಿರುತ್ತವೆ ಎಂದು ಐಎಂಡಿ ತಿಳಿಸಿದೆ.

ತಮಿಳುನಾಡು, ಪುದುಚೇರಿ, ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡು ಕರ್ನಾಟಕ, ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಈಗಾಗಲೇ ವಿವಿಧೆಡೆ ಶಾಖದ ಅಲೆಯ ಪರಿಸ್ಥಿತಿ ಮುಂದುವರೆದಿದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ ಏಳು ದಿನಗಳಲ್ಲಿ ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಗುಡುಗು ಮತ್ತು ಮಿಂಚುಗಳೊಂದಿಗೆ ಲಘು ಅಥವಾ ಮಧ್ಯಮ ಮಳೆಯಾಗಬಹುದು. ಮುಂದುವರೆದು ಹಿಮ ಮಳೆಯೂ ಬರಬಹುದು. ಬಿಸಿ ಅಲೆಗಳ ಪರಿಣಾಮಗಳನ್ನು ತಗ್ಗಿಸಲು ವಿಶೇಷವಾಗಿ ಲೋಕಸಭೆ ಚುನಾವಣೆಯ ನಡುವೆ ಸಾಮೂಹಿಕ ಸಭೆಗಳಿಗೆ ಯೋಜನೆಗಳನ್ನು ರೂಪಿಸುವಂತೆ ಕೇಂದ್ರವು ಬುಧವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ.
ಶಾಖ ಸಂಬಂಧಿತ ಅನಾರೋಗ್ಯದ ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಯಾವುದೇ ಬಿಕ್ಕಟ್ಟು ನಿರ್ವಹಿಸುವ ಕ್ರಮಗಳ ಕುರಿತು ಜನರಲ್ಲಿ ಸಮಯೋಚಿತ, ಮುಂಚಿತವಾಗಿ ಮತ್ತು ವ್ಯಾಪಕವಾದ ಜಾಗೃತಿಯು ಶಾಖದ ಅಲೆಗಳ ತೀವ್ರ ಪರಿಣಾಮವನ್ನು ಕಡಿಮೆ ಮಾಡಲು ಹೆಚ್ಚು ಸಹಾಯಕವಾಗಬಲ್ಲದು ಎಂದು ಅವರು ಹೇಳಿದರು.
ಈ ವರ್ಷ ದೇಶದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಏಪ್ರಿಲ್ ಆರಂಭದಿಂದ ದೇಶದ ಹಲವು ಭಾಗಗಳಲ್ಲಿ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಶಾಖದ ಪರಿಣಾಮದ ಅಪಾಯ ಹೆಚ್ಚಾಗಿದೆ ಎಂದು ಮಾಂಡವಿಯಾ ಹೇಳಿದ್ದಾರೆ. "2024 ರ ಸಾರ್ವತ್ರಿಕ ಚುನಾವಣೆಯು ಬಂದಿದೆ. ಇದರಲ್ಲಿ ವ್ಯಾಪಕ ಸಾರ್ವಜನಿಕ ಭಾಗವಹಿಸುವಿಕೆಯನ್ನು ನಿರೀಕ್ಷಿಸಲಾಗಿದ್ದು, ಸಾರ್ವಜನಿಕ ಸಹಭಾಗಿತ್ವವಿಲ್ಲದೆ ಈ ಮಹಾನ್ ಕಾರ್ಯಕ್ರಮವು ಪೂರ್ಣಗೊಳ್ಳುವುದಿಲ್ಲ. ಇದರಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.


Click it and Unblock the Notifications