ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಿತ್ ಬೆರೋಜ್ ಗಾರ್ ಯೋಜನಾ ಎಂಬ ಹೆಸರಿನ ಯೋಜನೆ ಶುರು ಮಾಡಿದ್ದು, ಆ ಮೂಲಕ ಪ್ರತಿ ರೇಷನ್ ಕಾರ್ಡ್ ದಾರರಿಗೆ 50 ಸಾವಿರ ರುಪಾಯಿ ಪರಿಹಾರ ಪ್ಯಾಕೇಜ್ ನೀಡಲಿದೆ ಎಂಬ ವದಂತಿ ಹರಿದಾಡುತ್ತಿರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. "ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವದಂತಿ ಸುಳ್ಳು. ಸರ್ಕಾರ ಇಂಥ ಯಾವ ಯೋಜನೆಯನ್ನೂ ಮಾಡಿಲ್ಲ" ಎಂದು ತಿಳಿಸಿದೆ.
ಕೊರೊನಾದಿಂದ ಬಾಧಿತರಾಗಿರುವ ಬಡವರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಾರ್ಚ್ 26ರಂದು 1.7 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಣೆ ಮಾಡಿತ್ತು. "rbsy.org" ಎಂಬ ವೆಬ್ ಸೈಟ್ ವೊಂದು, ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಿತ್ ಬೆರೋಜ್ ಗಾರ್ ಯೋಜನಾ ಎಂಬ ಹೆಸರಿನ ಯೋಜನೆ ಅಡಿ ಪ್ರತಿ ರೇಷನ್ ಕಾರ್ಡ್ ದಾರರಿಗೆ 50 ಸಾವಿರ ರುಪಾಯಿ ನೀಡಲಿದೆ ಎಂದು ಹೇಳಿದೆ.
40 ಸಾವಿರ ಮಂದಿಗೆ ಹಣ
ಇನ್ನೂ ಮುಂದುವರಿದು, ಈ ಯೋಜನೆ ಕೇವಲ 40 ಸಾವಿರ ಮಂದಿ ಅರ್ಜಿದಾರರಿಗೆ ಎಂದು ಕೂಡ ಹೇಳಲಾಗಿದೆ. ಆನ್ ಲೈನ್ ಮೂಲಕ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದು, ಇದರ ಜತೆಗೆ ವೆಬ್ ಸೈಟ್ ನಲ್ಲಿ ನೋಂದಣಿ ಮಾಡುವಂತೆ ಮಾಹಿತಿಯನ್ನು ನೀಡಲಾಗಿದೆ.
ಪಿಐಬಿಯಿಂದ ಫ್ಯಾಕ್ಟ್ ಚೆಕ್
ಪಿಐಬಿಯಿಂದ ಫ್ಯಾಕ್ಟ್ ಚೆಕ್ ಮಾಡಲಾಗಿದೆ. ಭಾರತ ಸರ್ಕಾರವು ಇಂಥ ಯಾವ ಯೋಜನೆಯನ್ನೂ ಆರಂಭಿಸಿಲ್ಲ. ಇಂಥ ಸುಳ್ಳು ಹಾಗೂ ವಂಚನೆ ವೆಬ್ ಸೈಟ್ ಗಳ ಬಗ್ಗೆ ಎಚ್ಚರಿಕೆ ಇರಲಿ. ಇವುಗಳು ನಿಮ್ಮ ವೈಯಕ್ತಿಕ ಮಾಹಿತಿ ಅಥವಾ ಶುಲ್ಕ ವಸೂಲಿ ಮಾಡುತ್ತವೆ ಎಂದು ಎಚ್ಚರಿಕೆಯನ್ನು ಟ್ವೀಟ್ ಮೂಲಕ ನೀಡಲಾಗಿದೆ.
ಪಿಎಂ ಮಾಸ್ಕ್ ಯೋಜನಾ ಎಂಬ ಸುಳ್ಳು ಮಾಹಿತಿ
ಯಾವಾಗ ಈ ವೆಬ್ ಸೈಟ್ ನ ಬಂಡವಾಳ ಬಯಲಿಗೆ ಬಂತೋ ಆ ನಂತರ ಅದು ಸಕ್ರಿಯವಾಗಿಲ್ಲ. ಆದರೂ ಉಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಲಾಗಿದೆ. ಇದೇ ರೀತಿ ಸೋಷಿಯಲ್ ಮೀಡಿಯಾಗಳಲ್ಲಿ "ಪಿಎಂ ಮಾಸ್ಕ್ ಯೋಜನಾ" ಎಂಬ ಸುಳ್ಳು ಮಾಹಿತಿ ಹರಿದಾಡಿತ್ತು. ಆ ನಂತರ, ಅದೆಲ್ಲ ಸುಳ್ಳು ಎಂಬುದನ್ನು ಫ್ಯಾಕ್ಟ್ ಚೆಕ್ ಮೂಲಕವೇ ಸರ್ಕಾರ ಸ್ಪಷ್ಟಪಡಿಸಿತ್ತು. ಮಾಸ್ಕ್ ಅನ್ನು ಉಚಿತವಾಗಿ ನೀಡುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದಿತ್ತು.
More From GoodReturns

Karnataka Budget-BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಂಪರ್ ಸುದ್ದಿ! ಕರ್ನಾಟಕ ಬಜೆಟ್ನಲ್ಲಿ ಮಹತ್ವದ ನಿರ್ಧಾರ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications