ಕರ್ನಾಟಕದಲ್ಲಿ ಗ್ಯಾರಂಟಿಗಳ ಅನಾವರಣವಾದ ನಂತರ ಕೇಂದ್ರ ಕೂಡ ಒಂದಿಷ್ಟು ಯೋಜನೆಗಳನ್ನ ಹೊರಡಿಸಿತ್ತು. ಆದ್ರೆ ಇದೇ ಯೋಜನೆಗಳನ್ನ ಜಾಲಾವಾಗಿಸಿಕೊಂಡಿರುವ ಕೆಲವರು ಯೋಜನೆಗಳ ಕುರಿತು ಒಂದಿಷ್ಟು ಸುಳ್ಳು ಸುದ್ದಿಗಳನ್ನ ಹರಿಬಿಡ್ತಿದ್ದಾರೆ. ಇಂತದ್ದೇ ಈಗ ಮತ್ತೋಂದು ಪೋಸ್ಟ್ವೊಂದು ಎಲ್ಲೆಡೆ ವೈರಲ್ ಆಗ್ತಿದೆ.
ಈ ಮಧ್ಯೆ ನಿರುದ್ಯೋಗ ಭತ್ಯೆ ಯೋಜನೆ 2024-25ರ ಅಡಿಯಲ್ಲಿ 10 ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಕೇಂದ್ರ ಸರ್ಕಾರ ಪ್ರತಿ ತಿಂಗಳು 3,500 ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದೆ ಎನ್ನಲಾಗ್ತಿದೆ. ಇನ್ನು ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,ಇದರ ಸತ್ಯಾಸತ್ಯತೆ ಇಲ್ಲಿದೆ.

ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಸರ್ವೇಸಾಮಾನ್ಯವಾಗಿಬಿಟ್ಟಿದೆ. ಸರ್ಕಾರ ಒಂದು ಯೋಜನೆಯನ್ನ ಹೊರಡಿಸಿದ ತಣ ಆನ್ಲೈನ್ಗಳ ಮೂಲಕ ಹಣ ಮಾಡುವ ಸಲುವಾಗಿ ಬೇರೆ ಬೇರೆ ಹೊಸ ಯೋಜೆಗಳು ಜಾರಿಯಾಗಿವೆ. ಕೊನೆಯ ದಿನಾಂಕ ಕೂಡ ನಿಗಧಿಯಾಗಿದೆ ಎಂದು ಸುಳ್ಳು ಮಾಹಿತಿಗಳನ್ನ ಹರಿಬಿಡ್ತಿದ್ದಾರೆ. ಈಗ ಕೇಂದ್ರ ಸರ್ಕಾರದ ಕೆಲವು ಯೋಜನೆಗಳ ಬಗ್ಗೆ ಕೂಡ ಸುಳ್ಳು ಸುದ್ದಿಗಳು ಹರಿದಾಡ್ತಿವೆ.
ಅಲ್ಲದೆ ಇತ್ತೀಚಿನ ದಿನಗಳಲ್ಲಿ ಇದು ಬಹುದೊಡ್ಡ ಸ್ಕ್ಯಾಮ್ ಆಗಿ ಮಾರ್ಪಟ್ಟಿದೆ. ಆನ್ ಮೂಲಕ, ಎಸ್ಎಮ್ಎಸ್ಗಳ ಮೂಲಕ ಹಾಗೆ ಕರೆಗಳ ಮೂಲಕ ಸುಳ್ಳು ಜಾಹೀರಾತುಗಳನ್ನ, ಹಾಗೆ ಸುಳ್ಳು ಮಾಹಿತಿಗಳನ್ನ ಜನರಿಗೆ ನೀಡಿ ಹಣ ವಸೂಲು ಮಾಡಲು ಮುಂದಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇದೀಗ ಕೇಂದ್ರ ಸರ್ಕಾರದಿಂದ 10 ನೇ ತರಗತಿ ತೇರ್ಗಡೆಯಾದವರಿಗೆ ಉತ್ತಮ ಯೋಜನೆ ಒಂದನ್ನ ಅನಾವಣಗೊಳಿಸಿದೆ, ಹಾಗೆ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3500 ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಮನೋಜ್ ಸರ್ ಜಾಬ್ಸ್ ಹೆಸರಿನ ಒಂದು ಯೂಟ್ಯೂಬ್ ಚಾನೆಲ್ನಲ್ಲಿನ ಥಂಬ್ನೇಲ್ನಲ್ಲಿ ಈ ಸುದ್ದಿ ಕಂಡುಬಂದಿದೆ. 'ಕೇಂದ್ರ ಸರ್ಕಾರವು ನಿರುದ್ಯೋಗ ಭತ್ಯೆ ಯೋಜನೆ 2024-25ರ ಅಡಿಯಲ್ಲಿ 10 ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,500 ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದೆ' ಎಂದು ಅದರಲ್ಲಿ ಬರೆಯಲಾಗಿದೆ. ಅಲ್ಲದೆ ಈ ನಿರುದ್ಯೋಗ ಭತ್ಯೆಯ ಥಂಬ್ನೇಲ್ ಹೊಂದಿರುವ ಈ ಯೂಟ್ಯೂಬ್ ವಿಡಿಯೋದಲ್ಲಿ, ಈ ಯೋಜನೆಯು ಎಲ್ಲಾ ರಾಜ್ಯಗಳ ನಿರುದ್ಯೋಗಿ ಯುವಕರಿಗೆ ಎಂದು ಹೇಳಲಾಗಿದೆ.
Fact Check:
ಸಾಮಾಜಿಕ ಜಾಲಾತಾಣದಲ್ಲಿ ಕಂಡುಬಂದ ಈ ಮಾಹಿತಿಯನ್ನ ಪರಿಶೀಲಿಸಿದಾಗ ಈ ರೀತಿಯ ಯಾವುದೇ ಯೋಜನೆಗಳನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿಲ್ಲ ಎನ್ನುವುದು ತಿಳಿದುಬಂದಿದೆ. ಅಲ್ಲದೆ 10 ನೇ ತರಗತಿಯಲ್ಲಿ ತೇರ್ಗಡೆಯಾಗಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಯಾವುದೇ ನಿರುದ್ಯೋಗ ಬತ್ಯೆಯನ್ನ ನೀಡುತ್ತಿಲ್ಲ ಎನ್ನುವುದು ತಿಳಿದುಬಂದಿದೆ.
ಇದಲ್ಲದೆ ಈ ವಿಚಾರವಾಗಿ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ(PIB) ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನ ಮಾಡಿದೆ. ಅದರಲ್ಲಿ ಈ ವೈರಲ್ ಆಗಿರುವ ಸುದ್ದಿ ಸುಳ್ಳು ಎಂದು ತಿಳಿಯಪಡಿಸಿದೆ. ಪಿಐಬಿ ಪೋಸ್ಟ್ನಲ್ಲಿ, ಮನೋಜ್ ಸರ್ಜಾಬ್ಸ್ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ತನ್ನ ವಿಡಿಯೋ ಥಂಬ್ನೇಲ್ ಒಂದರಲ್ಲಿ ನಿರುದ್ಯೋಗ ಭತ್ಯೆ ಯೋಜನೆ 2024-25 ಅಡಿಯಲ್ಲಿ ಸರ್ಕಾರವು 10 ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ₹3,500 ಭತ್ಯೆ ನೀಡುತ್ತಿದೆ ಎಂದು ಹೇಳಿಕೊಂಡಿದೆ. #PIBFactCheck ಈ ಹಕ್ಕು ನಕಲಿಯಾಗಿದೆ ಎಂದು ತಿಳಿಸಿದೆ. ಹಾಗೆ ಭಾರತ ಸರ್ಕಾರವು ಆ ರೀತಿಯ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಒಟ್ನಲ್ಲಿ ಕೇಂದ್ರ ಸರ್ಕಾರ ಅಂತಹ ಯಾವುದೇ ಯೋಜನೆಯನ್ನ ಜಾರಿಗೆ ತಂದಿಲ್ಲ ಎನ್ನುವುದು ಮಾತ್ರ ಖಚಿತವಾಗಿದೆ. ಹೀಗಾಗಿ 10ನೇ ತರಗತಿ ಉತ್ತೀರ್ಣರಾದ ಯುವಕರಿಗೆ 3500 ರೂಪಾಯಿ ನಿರುದ್ಯೋಗ ಭತ್ಯೆ ನೀಡುವ ವೈರಲ್ ಹಕ್ಕು ನಕಲಿ ಎನ್ನುವುದು ಸ್ಪಷ್ಟವಾಗಿದೆ.
More From GoodReturns

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

LPG cylinder shortage: ಬೆಂಗಳೂರಲ್ಲಿ 1,700ರೂ. ಸಿಲಿಂಡರ್ 5,000 ರೂ.ಗೆ ಮಾರಾಟ..ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ

Pink Line Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಶೀಘ್ರದಲ್ಲಿ ಆರಂಭ, ಹೊಸ ರೈಲಿನ ಆಗಮನ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ



Click it and Unblock the Notifications