ದೇಶದಲ್ಲಿ ಜನಸಾಮಾನ್ಯರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ಬೆಲೆಯು ಭಾರೀ ಕುಸಿತ ಕಂಡಿದೆ. 100 ರುಪಾಯಿ ಗಡಿ ದಾಟಿ ಭಾರೀ ಬೆಲೆ ಏರಿಕೆ ಕಂಡಿದ್ದ ಈರುಳ್ಳಿ ಬೆಲೆ ಇದೀಗ ಕೆಜಿಗೆ 10 ರಿಂದ 12 ರುಪಾಯಿಗೆ ತಲುಪಿದೆ.
ಕಳೆದ ಕೆಲ ತಿಂಗಳ ಹಿಂದೆ ಈರುಳ್ಳಿಗೆ ಚಿನ್ನದಂತಹ ಬೆಲೆಯಿತ್ತು. ಪ್ರತಿ ಕ್ವಿಂಟಾಲ್ಗೆ 13 ಸಾವಿರದಿಂದ 15 ಸಾವಿರದವರೆಗೂ ಏರಿಕೆಯಾಗಿದ್ದು ವರದಿಯಾಗಿತ್ತು. ಬೆಲೆ ಏರಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು. ಇದೀಗ ಈರುಳ್ಳಿ, ಬೆಳ್ಳುಳ್ಳಿ ಮತ್ತು ತರಕಾರಿ ಬೆಲೆ ಗಣನೀಯವಾಗಿ ಕುಸಿದಿದೆ. ತರಕಾರಿ ಬೆಲೆ ಇಳಿಕೆ ಗ್ರಾಹಕರದಲ್ಲಿ ಸಂತಸವನ್ನು ತರಿಸಿದೆ. ಆದರೆ, ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈಗಾಗಲೇ ಹೊಸ ಬೆಳೆ ಬಂದಿದ್ದು, ಉತ್ತಮ ಇಳುವರಿಯೂ ಇದೆ. ಮಾರುಕಟ್ಟೆಗೆ ಸೊಪ್ಪು ಸೇರಿದಂತೆ ವಿವಿಧ ತರಕಾರಿ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿರುವುದರಿಂದ ಬೇಡಿಕೆ ಕಡಿಮೆಯಾಗಿದೆ. ಈ ಹಿಂದೆ 200 ರುಪಾಯಿವರೆಗೂ ಏರಿಕೆಯಾಗಿದ್ದ ಈರುಳ್ಳಿ ಈಗ ಕೆಜಿಗೆ 10 ರಿಂದ 12 ರುಪಾಯಿಗೆ ಸಿಗುತ್ತಿದೆ. ಬೆಳ್ಳುಳ್ಳಿ ಕೆಜಿಗೆ 130 ರುಪಾಯಿಯಿಂದ 140ಕ್ಕೆ ಇಳಿಕೆಯಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ರಫ್ತು ಮೇಲಿನ ನಿಯಂತ್ರಣದ ಜೊತೆಗೆ ವಿದೇಶದಿಂದ ಈರುಳ್ಳಿಯನ್ನು ಆಮದು ಮಾಡಿಕೊಂಡಿತ್ತು.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications