ನವದೆಹಲಿ: ಕಳೆದ ಮೂರು ತಿಂಗಳಕ್ಕೂ ಹೆಚ್ಚು ದಿನ ದೇಶದಲ್ಲಿ ಕೊರೊನಾ ಹಾವಳಿಯಿಂದ ಜನಜೀವನ ತತ್ತರಗೊಂಡಿದೆ. ಆರ್ಥಿಕ ಕ್ಷೇತ್ರ ಜರ್ಜರಿತವಾಗಿದೆ. ಲಾಕ್ಡೌನ್ ಹೊರತಾಗಿಯೂ ಈ ಒಂದು ಕ್ಷೇತ್ರದಲ್ಲಿ ಭಾರೀ ಆಶಾದಾಯಕ ಬೆಳವಣಿಗೆ ಕಂಡು ಬಂದಿದೆ. ಅದುವೇ ರಸಗೊಬ್ಬರ ಕ್ಷೇತ್ರ.
ಸತತ ಲಾಕ್ಡೌನ್ ಹೊರತಾಗಿಯೂ ಏಪ್ರಿಲ್-ಜೂನ್ ತಿಂಗಳಲ್ಲಿ ರಸಗೊಬ್ಬರ ಮಾರಾಟ ಶೇಕಡಾ 83 ರಷ್ಟು ಏರಿಕೆ ಕಂಡು 111.61 ಲಕ್ಷ ಟನ್ ದಾಖಲಿಸಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಏಪ್ರಿಲ್-ಜೂನ್ 2020 ರ ಅವಧಿಯಲ್ಲಿ, ರೈತರಿಗೆ ರಸಗೊಬ್ಬರಗಳ ಪಿಒಎಸ್ (ಪಾಯಿಂಟ್ ಆಫ್ ಸೇಲ್) ಮಾರಾಟ 111.61 ಲಕ್ಷ ಟನ್ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 61.05 ಲಕ್ಷ ಟನ್ ಮಾರಾಟ ಮಾಡಿದ್ದಕ್ಕಿಂತ ಇದು 82.81 ಶೇಕಡಾ ಹೆಚ್ಚಾಗಿದೆ" ಎಂದು ಕೇಂದ್ರ ರಸಗೊಬ್ಬರ ಸಚಿವಾಲಯ ತಿಳಿಸಿದೆ.
ಡಿಎಪಿ ಬೇಡಿಕೆ ಎರಡು ಪಟ್ಟು ಹೆಚ್ಚಾಗಿದೆ
ಯೂರಿಯಾ ಮಾರಾಟವು ಶೇಕಡಾ 67 ರಷ್ಟು ಹೆಚ್ಚಳಗೊಂಡು 64.82 ಲಕ್ಷ ಟನ್ಗಳಿಗೆ ತಲುಪಿದ್ದರೆ, ಪರಿಶೀಲನೆಯ ಅವಧಿಯಲ್ಲಿ ಡಿಎಪಿ ಬೇಡಿಕೆ ಎರಡು ಪಟ್ಟು ಹೆಚ್ಚಾಗಿ 22.46 ಲಕ್ಷ ಟನ್ಗಳಿಗೆ ತಲುಪಿದೆ. ಸಂಕೀರ್ಣ ರಸಗೊಬ್ಬರಗಳ ಮಾರಾಟವು ದ್ವಿಗುಣಗೊಂಡು 24.32 ಲಕ್ಷ ಟನ್ಗಳಿಗೆ ತಲುಪಿದೆ.
ಸಂಘಟಿತ ಪ್ರಯತ್ನದಿಂದ
ರಾಷ್ಟ್ರಮಟ್ಟದ ಕೋವಿಡ್ 19 ಲಾಕ್ಡೌನ್ನಿಂದಾಗಿ ಸಾಕಷ್ಟು ನಿರ್ಬಂಧಗಳ ಹೊರತಾಗಿಯೂ, ರಸಗೊಬ್ಬರ ಇಲಾಖೆ, ರೈಲ್ವೆ, ರಾಜ್ಯ ಸರ್ಕಾರಗಳು ಮತ್ತು ಬಂದರುಗಳ ಸಂಘಟಿತ ಪ್ರಯತ್ನದಿಂದ, ದೇಶದಲ್ಲಿ ರಸಗೊಬ್ಬರಗಳ ಉತ್ಪಾದನೆ ಮತ್ತು ಪೂರೈಕೆ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದೆ ಎಂದು ಕೇಂದ್ರ ರಸಗೊಬ್ಬರ ಸಚಿವಾಲಯ ತಿಳಿಸಿದೆ.
ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು, ಖಾರಿಫ್ ಋತುವಿನಲ್ಲಿ ರೈತರಿಗೆ ರಸಗೊಬ್ಬರಗಳ ಸಂಗ್ರಹ ಮತ್ತು ಲಭ್ಯತೆಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯ ಸರ್ಕಾರಗಳಿಗೆ ಸಾಕಷ್ಟು ರಸಗೊಬ್ಬರಗಳನ್ನು ಅಗತ್ಯವಾಗಿ ಒದಗಿಸಿದ್ದೇವೆ. ಇದರಿಂದ ಈ ಸಾರಿ ರಸಗೊಬ್ಬರ ಮಾರಾಟ ಪ್ರಮಾಣ ಹೆಚ್ಚಾಗಿದೆ. ಇದು ಕೃಷಿ ಕ್ಷೇತ್ರದ ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.
ಉಳಿದ ಪ್ರಮುಖ ಕ್ಷೇತ್ರಗಳ ಬೆಳವಣಿಗೆ ಕುಂಠಿತ
ಆದರೆ, ಕೊರೊನಾವೈರಸ್ ಲಾಕ್ಡೌನ್ನಿಂದಾಗಿ ಮೇ ತಿಂಗಳಲ್ಲಿ ದೇಶದ ಎಂಟು ಪ್ರಮುಖ ವಲಯಗಳ ಉತ್ಪಾದನೆಯು ಶೇಕಡಾ 23.4 ರಷ್ಟು ಕುಗ್ಗಿದೆ. ರಸಗೊಬ್ಬರವನ್ನು ಹೊರತುಪಡಿಸಿ, ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಈ ಎಲ್ಲಾ ಏಳು ವಲಯಗಳು ಮೇ ತಿಂಗಳಲ್ಲಿ ನಕಾರಾತ್ಮಕ ಬೆಳವಣಿಗೆಯನ್ನು ದಾಖಲಿಸಿವೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications