ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಇದುವರೆಗೆ ನವೆಂಬರ್ನಲ್ಲಿ ಭಾರತೀಯ ಮಾರುಕಟ್ಟೆಗಳಲ್ಲಿ 50,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಇದು ಒಂದು ತಿಂಗಳಲ್ಲಿ ಹೂಡಿಕೆಯ ಒಳಹರಿವಿನಲ್ಲಿ ಇದು ದಾಖಲೆಯ ಮಟ್ಟಕ್ಕೆ ತಲುಪಿದ್ದು, ಭಾರತೀಯ ಮಾರುಕಟ್ಟೆಯತ್ತ ಆಕರ್ಷಿತರಾಗಿದ್ದಾರೆ.
ರಾಷ್ಟ್ರೀಯ ಷೇರುಪೇಟೆ ಎನ್ಎಸ್ಇಯಲ್ಲಿ ಲಭ್ಯವಿರುವ ತಾತ್ಕಾಲಿಕ ಮಾಹಿತಿಯ ಪ್ರಕಾರ, ಎಫ್ಐಐ ನವೆಂಬರ್ 24 ರವರೆಗೆ 55,552.64 ಕೋಟಿ ರೂ.ಗಳ ಷೇರುಗಳನ್ನು ಖರೀದಿಸಿದೆ.
ಒಂದು ತಿಂಗಳಿನಲ್ಲಿ ಅತಿ ಹೆಚ್ಚಿನ ಹೂಡಿಕೆ
ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯೊಂದಿಗೆ ಲಭ್ಯವಿರುವ ನೈಜ ಅಂಕಿ-ಅಂಶಗಳ ಪ್ರಕಾರ ಎಫ್ಐಐಗಳು ನವೆಂಬರ್ 23 ರವರೆಗೆ 54,521.68 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಇದು ಒಂದು ತಿಂಗಳಲ್ಲಿ ದಾಖಲಾದ ಅತಿ ಹೆಚ್ಚಿನ ಮೊತ್ತವಾಗಿದ್ದು, ಹಿಂದೆಂದೂ ಕಾಣದ ರೀತಿಯಲ್ಲಿ ಹೂಡಿಕೆ ಹರಿದುಬಂದಿದೆ. ವಿಶ್ಲೇಷಕರ ಪ್ರಕಾರ ಈ ಮೊತ್ತವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಮಾರ್ಚ್ನಿಂದ ಈವರೆಗೆ ಶೇ. 74ರಷ್ಟು ಏರಿಕೆ
ಮಾರ್ಚ್ನಿಂದ ಈವರೆಗೆ ಸೂಚ್ಯಂಕಗಳಲ್ಲಿ ಶೇ. 74ರಷ್ಟು ಏರಿಕೆ ಕಂಡಿದ್ದು, ವಿದೇಶಿ ಹೂಡಿಕೆದಾರರ ಒಲವು ಹೆಚ್ಚಾಗಿದೆ. ಎಫ್ಐಐಗಳ ಬಲವಾದ ಒಳಹರಿವಿನಿಂದಾಗಿ ನಿಫ್ಟಿ ಕೇವಲ 14 ವಹಿವಾಟು ಅವಧಿಗಳಲ್ಲಿ 12,000 ರಿಂದ 13,000 ಅಂಕಗಳನ್ನು ದಾಟಲು ಸಹಾಯ ಮಾಡಿತು.
ಈ ವರ್ಷ 96,766 ಕೋಟಿ ರೂ. ಹೂಡಿಕೆ
ಇನ್ನು 2020 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಫ್ಐಐ ನಿವ್ವಳ ಖರೀದಿ ಇದುವರೆಗೆ 96,766 ಕೋಟಿ ರೂ. ತಲುಪಿದೆ. ಡಾಲರ್ ಸೂಚ್ಯಂಕದಲ್ಲಿನ ದೌರ್ಬಲ್ಯದಿಂದಾಗಿ ಭಾರತೀಯ ಮಾರುಕಟ್ಟೆಗಳಲ್ಲಿ ಒಳಹರಿವು ಹೆಚ್ಚಾಗಿದೆ.
ಭಾರತೀಯ ಮಾರುಕಟ್ಟೆಗೆ ಏಕೆ ಈ ಆಕರ್ಷಣೆ?
ಹಲವಾರು ಯುರೋಪಿಯನ್ ರಾಷ್ಟ್ರಗಳು ಮತ್ತು ಅಮೆರಿಕಾ ರಾಷ್ಟ್ರವು ಕೊರೊನಾವೈರಸ್ ಎರಡನೇ ಸುತ್ತಿನಲ್ಲಿ ಹೋರಾಡುತ್ತಿರುವಾಗಲೂ, ಭಾರತವು ಕೋವಿಡ್-19 ವೈರಸ್ ಸೋಂಕಿನ ಚೇತರಿಕೆ ಮತ್ತು ನಿಧಾನಗೊಳ್ಳುವ ಲಕ್ಷಣಗಳನ್ನು ತೋರಿಸುತ್ತಿದೆ. ಇದು ಭಾರತಕ್ಕೆ ಎಫ್ಐಐಗಳನ್ನು ಆಕರ್ಷಿಸುತ್ತಿದೆ ಎಂದು ತಜ್ಞರು ಹೇಳಿದ್ದಾರೆ.
ಇದರ ಜೊತೆಗೆ ಕೋವಿಡ್-19 ಲಸಿಕೆಯ ಆಶಾವಾದವು ಸಹ ಹೂಡಿಕೆದಾರರು ತಮ್ಮ ಹಣವನ್ನು ಹೆಚ್ಚಿಸಲು ಪ್ರೇರೇಪಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications