ದೆಹಲಿಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ಆರ್ಥಿಕ ತಜ್ಞರು ಹಾಗೂ ವಿವಿಧ ವಲಯಗಳ ಪರಿಣಿತರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಯಿತು. ಆದರೆ ಈ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿರಲಿಲ್ಲ.
ಆರ್ಥಿಕತೆಯು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸಲು ಇರುವ ಮಾರ್ಗಗಳ ಕುರಿತಾಗಿ ಮೋದಿ ಅವರು ಕಳೆದ ಕೆಲವು ದಿನಗಳಿಂದ ಉದ್ಯಮಿಗಳು ಆರ್ಥಿಕ ತಜ್ಞರೊಂದಿಗೆ ಸರಣಿ ಸಭೆ ನಡೆಸುತ್ತಿದ್ದು, ಗುರುವಾರ ಬಜೆಟ್ ಪೂರ್ವ ಸಭೆಯಲ್ಲಿ ಈ ಕುರಿತಾಗಿಯೂ ಚರ್ಚಿಸಿದರು.

''ದೇಶದ ಆರ್ಥಿಕತೆ ತಳಹದಿ ಸುಭದ್ರವಾಗಿದ್ದು, ಭಾರತದ ಆರ್ಥಿಕತೆಗೆ ಪುಟಿದೇಳುವ ಸಾಮರ್ಥ್ಯವಿದೆ. ಪ್ರವಾಸ, ನಗರಾಭಿವೃದ್ಧಿ, ಮೂಲಸೌಕರ್ಯ ಮತ್ತು ಕೃಷಿ ಆಧಾರಿತ ಉದ್ಯಮಗಳು ಆರ್ಥಿಕ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೊತೆಗೆ ಸಭೆಯಲ್ಲಿ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸುವಂತಾಗಲು ವಿಶೇಷ ಪ್ರಯತ್ನಗಳನ್ನು ಮಾಡುವಂತೆ ಕರೆ ನೀಡಿದರು.
ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಂಪುಟ ಸಚಿವರು, ನೀತಿ ಆಯೋಗದ ಅಧಿಕಾರಿಗಳು, ಸರ್ಕಾರದ ಉನ್ನತಾಧಿಕಾರಿಗಳು ಭಾಗವಹಿಸಿದ್ದರು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೌರು ಹಾಜರಿದ್ದರು. ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಬಜೆಟ್ ಪೂರ್ವ ಸಭೆಯಲ್ಲಿ ಭಾಗವಹಿಸಿದರ ಪರಿಣಾಮ ಅವರ ಅನುಪಸ್ಥಿತಿಯಲ್ಲಿ ಮೋದಿ ಸಭೆ ನಡೆಸಿದರು ಎಂದು ಮೂಲಗಳು ಹೇಳಿವೆ.
ಇನ್ನು ಬಜೆಟ್ ಸಭೆಯಲ್ಲಿ ನಿರ್ಮಲಾ ಸೀತರಾಮನ್ ಗೌರು ಕುರಿತಾಗಿ ಎಡಪಕ್ಷಗಳು ಭಾರೀ ಟೀಕೆ ಮಾಡಿವೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಕೇಂದ್ರ ಸರ್ಕಾರದ ಕಾಲೆಳೆದಿದ್ದು ''ಮಹಿಳೆಯ ಕೆಲಸ ಮಾಡಲು ಎಷ್ಟು ಪುರುಷರು ಬೇಕು?'' ಎಂದು ಕಿಡಿಕಾರಿದೆ. ನೆಟ್ಟಿಗರು ಹಣಕಾಸು ಸಚಿವರ ಗೌರು ಹಾಜರಿ ಬಗ್ಗೆ ಸಾಕಷ್ಟು ಟ್ರೋಲ್ ಮಾಡಿದ್ದಾರೆ.
More From GoodReturns

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

ಏಪ್ರಿಲ್ 1ರಿಂದ ಈ ರಾಜ್ಯದ ಸರ್ಕಾರಿ ಜನರಿಗೆ ಹೊಸ ಪಿಂಚಣಿ...ಕೊನೆಯ ಸಂಬಳದ 50%ನಷ್ಟು ಖಚಿತ! ಈ ಗುಡ್ನ್ಯೂಸ್ ಯಾರಿಗೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!



Click it and Unblock the Notifications