ನವದೆಹಲಿ, ಅ. 16: ಡಾಲರ್ ಎದುರು ರೂಪಾಯಿ ದಾಖಲೆಯ ಮಟ್ಟಕ್ಕೆ ಕುಸಿಯುತ್ತಲೇ ಇದೆ. ಮೊನ್ನೆ ಮೊನ್ನೆ ರೂಪಾಯಿ ಬೆಲೆ 82.69ಕ್ಕೆ ಕುಸಿದಿತ್ತು. ಇದು ಸಾರ್ವಕಾಲಿಕ ಮಟ್ಟದ ಕುಸಿತವೆನಿಸಿದೆ. ರೂಪಾಯಿ ಕುಸಿತ ಭಾರತದ ಆರ್ಥಿಕ ಅಧಃಪತನದ ಸಂಕೇತವಾಗಿದೆ ಎಂದು ಕೆಲವರು ಹೇಳುತ್ತಾರೆ. ಆದರೆ, ಈ ಅಭಿಪ್ರಾಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಮ್ಮೆ ತಳ್ಳಿಹಾಕಿದ್ದಾರೆ.
ಅಭಿವೃದ್ಧಿಶೀಲ ದೇಶಗಳ ಕರೆನ್ಸಿಗಳಿಗೆ ಹೋಲಿಸಿದರೆ ಭಾರತೀಯ ರೂಪಾಯಿ ಬಹಳ ಉತ್ತಮ ಪ್ರದರ್ಶನ ತೋರಿದೆ. ಈಗ ಆಗುತ್ತಿರುವುದು ರೂಪಾಯಿ ಕುಸಿತ ಅಲ್ಲ ಎಂದಿರುವ ವಿತ್ತ ಸಚಿವೆ, ಡಾಲರ್ ಎಡಬಿಡದೆ ಬಲವರ್ಧನೆ ಆಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ಕರೆನ್ಸಿಯ ಮೌಲ್ಯ ನಿಗದಿ ಮಾಡಲು ಆರ್ಬಿಐ ಪ್ರಯತ್ನಿಸುತ್ತಿದೆ ಎಂಬ ಆರೋಪವನ್ನೂ ವಿತ್ತ ಸಚಿವೆ ಇದೇ ವೇಳೆ ತಳ್ಳಿಹಾಕಿದ್ದಾರೆ.

"ಮಾರುಕಟ್ಟೆ ತೀರಾ ಅನಿಶ್ಚಿತ ಸ್ಥಿತಿಗೆ ಹೋಗದ ಹಾಗೆ ನೋಡಿಕೊಳ್ಳುವತ್ತ ಆರ್ಬಿಐ ಗಮನ ಹರಿಸುತ್ತಿದೆಯೇ ಹೊರತು ರೂಪಾಯಿಯ ಮೌಲ್ಯ ನಿಗದಿ ಮಾಡಲು ಮಧ್ಯಪ್ರವೇಶಿಸುತ್ತಿಲ್ಲ. ಅನಿಶ್ಚಿತತೆಯನ್ನು ಕಡಿಮೆ ಮಾಡುವುದರತ್ತ ಮಾತ್ರ ಆರ್ಬಿಐ ಕೆಲಸ ಮಾಡುತ್ತಿದೆ. ರೂಪಾಯಿ ತನ್ನ ಸಹಜ ಬೆಲೆ ತಲುಪುತ್ತದೆ ಎಂದು ನಾನು ಈ ಮುಂಚೆಯೇ ಹೇಳಿದ್ದೇನೆ," ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈಗಿನ ರೂಪಾಯಿ ಕುಸಿತಕ್ಕೆ ಕಾರಣವೇನು?
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದ ಆರಂಭಗೊಂಡು ನಡೆಯುತ್ತಿರುವ ಜಾಗತಿಕ ರಾಜಕೀಯ ಪ್ರಕ್ಷುಬ್ದ ಸ್ಥಿತಿ, ಹಾಗೂ ಇತರ ಬೆಳವಣಿಗೆಗಳ ಕಾರಣದಿಂದ ರೂಪಾಯಿ ಮೌಲ್ಯ ಕುಸಿಯುತ್ತಿರಬಹುದು ಎಂಬುದು ತಜ್ಞರ ಅನಿಸಿಕೆ.

ಯುದ್ಧದಿಂದ ವಿವಿಧ ಸರಕುಗಳ ಬೆಲೆ ಹೆಚ್ಚಳವಾಗಿ ಜಾಗತಿಕವಾಗಿ ವಿವಿಧ ದೇಶಗಳ, ಅದರಲ್ಲೂ ಅಭಿವೃದ್ಧಿ ಹೊಂದಿದ ದೇಶಗಳ ಹಣದುಬ್ಬರ ಬಹಳ ದೊಡ್ಡ ಮಟ್ಟಕ್ಕೆ ಏರಲು ಕಾರಣವಾಗಿದೆ. ಅಮೆರಿಕದಲ್ಲೂ ಹಣದುಬ್ಬರ ಶೇ. 8ಕ್ಕಿಂತ ಹೆಚ್ಚಾಗಿ ಹೋಗಿದೆ. ಇದೇ ಕಾರಣಕ್ಕೆ ಅಮೆರಿಕದ ಫೆಡರಲ್ ಬ್ಯಾಂಕ್ನ ಬಡ್ಡಿ ದರಗಳು ಸತತವಾಗಿ ಏರುತ್ತಿವೆ. ತತ್ಪರಿಣಾಮವಾಗಿ ಭಾರತದಿಂದ ವಿದೇಶೀ ಹೂಡಿಕೆಗಳು ಅಮೆರಿಕಕ್ಕೆ ವಾಪಸ್ ಹೋಗುತ್ತಿವೆ. ಇದು ರೂಪಾಯಿ ಮೌಲ್ಯ ಕುಸಿಯಲು ಕಾರಣ ಎನ್ನಲಾಗುತ್ತಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications