ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ತಿಳಿಸಿರುವ ಪ್ರಕಾರ, 27 ರಾಜ್ಯಗಳ 9879.61 ಕೋಟಿ ರುಪಾಯಿ ಮೌಲ್ಯದ ಬಂಡವಾಳ ವೆಚ್ಚಕ್ಕೆ (ಕ್ಯಾಪಿಟಲ್ ಎಕ್ಸ್ ಪೆಂಡಿಚರ್) ಅನುಮತಿ ನೀಡಿದೆ. ಅದರಲ್ಲಿ 4,939.81 ಕೋಟಿ ರುಪಾಯಿಯನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಸಚಿವಾಲಯದಿಂದ ಹೇಳಿಕೆ ನೀಡಿದ್ದು, ಆತ್ಮನಿರ್ಭರ್ ಪ್ಯಾಕೇಜ್ ಅಡಿಯಲ್ಲಿ "ಬಂಡವಾಳ ವೆಚ್ಚಕ್ಕೆ ರಾಜ್ಯಗಳಿಗೆ ವಿಶೇಷ ನೆರವು" ಎಂದು ಅಕ್ಟೋಬರ್ 12ನೇ ತಾರೀಕಿನಂದು ಘೋಷಣೆ ಮಾಡಿದ ಮೇಲೆ ತಮಿಳುನಾಡು ಹೊರತುಪಡಿಸಿ ಎಲ್ಲ ರಾಜ್ಯಗಳು ಅನುಕೂಲವನ್ನು ಪಡೆದಿವೆ ಎಂದು ತಿಳಿಸಲಾಗಿದೆ.
ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಈ ವರ್ಷ ರಾಜ್ಯ ಸರ್ಕಾರಗಳ ತೆರಿಗೆ ಸಂಗ್ರಹದಲ್ಲಿ ಇಳಿಕೆ ಆಗಿರುವುದರಿಂದ ಆರ್ಥಿಕವಾಗಿ ಸಂಕಷ್ಟದ ಸಮಯವನ್ನು ಎದುರಿಸುತ್ತಿವೆ. ಆದ್ದರಿಂದ ರಾಜ್ಯ ಸರ್ಕಾರಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚು ಮಾಡಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ.

ಆರೋಗ್ಯ, ಗ್ರಾಮೀಣಾಭಿವೃದ್ಧಿ, ನೀರು ಪೂರೈಕೆ, ನೀರಾವರಿ, ವಿದ್ಯುತ್, ಸಾರಿಗೆ, ಶಿಕ್ಷಣ, ನಗರಾಭಿವೃದ್ಧಿ ಸೇರಿದಂತೆ ವಿವಿಧ ವಲಯಗಳಿಗೆ ಬಂಡವಾಳ ವೆಚ್ಚ ಯೋಜನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಆತ್ಮನಿರ್ಭರ್ ಪ್ಯಾಕೇಜ್ ಅಡಿಯಲ್ಲಿ ಸರ್ಕಾರದಿಂದ ರಾಜ್ಯಗಳಿಗೆ ಬಡ್ಡಿರಹಿತವಾಗಿ ಐವತ್ತು ವರ್ಷಗಳಿಗೆ ಹನ್ನೆರಡು ಸಾವಿರ ಕೋಟಿ ರುಪಾಯಿ ಒದಗಿಸುವ ವಿಶೇಷ ಸಾಲ ಯೋಜನೆ ಇದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications