ನವದೆಹಲಿ, ಜೂನ್ 5: ಕೊರೊನಾವೈರಸ್ ಹಾವಳಿಯಿಂದ ದೇಶದ ಎಲ್ಲ ಕ್ಷೇತ್ರಗಳ ಬೆಳವಣಿಗೆಗೆ ಗರ ಬಡಿದಂತಾಗಿದೆ. ಇದಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆತ್ಮಾ ನಿರ್ಭರ್ ಪ್ಯಾಕೇಜ್ ಅಡಿ 21 ಲಕ್ಷ ಕೋಟಿ ರುಪಾಯಿ ಘೋಷಣೆ ಮಾಡಿದೆ.
ಆದರೆ, ಈ ಪ್ಯಾಕೇಜ್ ವಾಸ್ತವವಾಗಿ ಕೊರೊನಾವೈರಸ್ ಲಾಕ್ಡೌನ್ ನಂತರದ ದುಸ್ಥಿತಿ ಸುಧಾರಿಸುವಲ್ಲಿ ಕೆಲಸ ಮಾಡದು ಎಂದು ಕೆಲ ಆರ್ಥಿಕ ತಜ್ಞರು ಆರೋಪಿಸುತ್ತಿದ್ದಾರೆ. ಇನ್ನೂ ಹಣಕಾಸಿನ ಘೋಷಣೆಗಳು ಅವಶ್ಯಕತೆ ಇದೆ ಎಂದು ಹೇಳುತ್ತಿದ್ದಾರೆ.
ಆದರೆ, ಶುಕ್ರವಾರ ಕೇಂದ್ರ ಹಣಕಾಸು ಸಚಿವಾಲಯ ನೀಡಿರುವ ಹೇಳಿಕೆ ದೀಗಿಲು ಹುಟ್ಟಿಸುವಂತಿದೆ. ಕೊರೊನಾ ತಡೆಗಟ್ಟಲು ಕಳೆದ 70 ದಿನ ಲಾಕ್ಡೌನ್ ಘೋಷಣೆ ಮಾಡಿದ್ದರೂ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಪರಿಸ್ಥಿತಿ ಹೀಗಿದ್ದರೂ 2020-21 ನೇ ಆರ್ಥಿಕ ವರ್ಷದಲ್ಲಿ ಉಳಿದ ದಿನಗಳಲ್ಲಿ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದಿಲ್ಲ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ಮಂಜೂರಾದ ಹಣವನ್ನು ಬಳಸಲು ಗಮನ
ಆತ್ಮ ನಿರ್ಭರ ಭಾರತ್ ಅಭಿಯಾನ ಮತ್ತು ಇತರ ವಿಶೇಷ ಪ್ಯಾಕೇಜ್ಗಳ ಅಡಿಯಲ್ಲಿ ಈಗಾಗಲೇ ಮಂಜೂರಾದ ಹಣವನ್ನು ಬಳಸಲು ಗಮನ ಹರಿಸಲಾಗುವುದು. ಅಲ್ಲದೇ ಯೋಜನೆಗಳನ್ನು ಘೋಷಿಸಿದವರಿಗೆ ಮಾತ್ರ ಒದಗಿಸಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಬಜೆಟ್ ಅಡಿಯಲ್ಲಿ ಈಗಾಗಲೇ ಅನುಮೋದಿಸಲಾದ ಯೋಜನೆಗಳು ಮಾರ್ಚ್ 31 ರವರೆಗೆ ಸ್ಥಗಿತಗೊಳ್ಳುತ್ತವೆ ಎಂದು ಅದು ಹೇಳಿದೆ.
ಹೊಸ ಯೋಜನೆಗಳು ಸ್ಟಾಪ್
ಹೊಸ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಗುವುದಿಲ್ಲ. ಈಗಾಗಲೇ ಅನುಮೋದನೆ ಪಡೆದ ಹೊಸ ಯೋಜನೆಗಳ ಪ್ರಾರಂಭವು 2021 ರ ಮಾರ್ಚ್ 31 ರವರೆಗೆ ಒಂದು ವರ್ಷದವರೆಗೆ ಸ್ಥಗಿತಗೊಳ್ಳುತ್ತದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸುತ್ತದೆ.
ಸರ್ಕಾರಗಳಿಗೆ ಆದಾಯ ನಷ್ಟ
ಕೊರೊನಾವೈರಸ್ ಲಾಕ್ಡೌನ್ ಕಾರಣದಿಂದಾಗಿ ಸರ್ಕಾರಗಳು ಆದಾಯ ನಷ್ಟ ಅನುಭವಿಸುತ್ತಿವೆ. ವಿವಿಧ ರಾಜ್ಯ ಸರ್ಕಾರಗಳು ಸಹ ಖರ್ಚನ್ನು ಸ್ಥಗಿತಗೊಳಿಸಿವೆ. ಜನರ ಕೈಯಲ್ಲಿ ಹೆಚ್ಚಿನ ಹಣವನ್ನು ನೀಡಲು ಮತ್ತು ಖರ್ಚನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳು ಜನರಿಗೆ ಹಲವು ಪರಿಹಾರ ಪ್ಯಾಕೇಜ್ ಘೋಷಿಸುತ್ತಿವೆ. ಆದರೆ, ಕೇಂದ್ರ ಮಾತ್ರ ಇನ್ಮುಂದೆ ಯಾವುದೇ ಹೊಸ ಪ್ಯಾಕೇಜ್ ಇರುವುದಿಲ್ಲ ಎಂದು ಹೇಳಿರುವುದು ಕೆಲವು ಕ್ಷೇತ್ರಗಳಿಗೆ ನಿರಾಸೆಯಂತೂ ತರಿಸಿದೆ
ಜಿಡಿಪಿ ಕುಸಿತದ ಚಿಂತೆ
ಮೇ 22 ರಂದು ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್, ಕೋವಿಡ್ -19 ಕಾರಣದಿಂದಾಗಿ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಕುಸಿಯಬಹುದು ಎಂದು ಹೇಳಿದ್ದರು. ಕೇವಲ ಒಂದು ತಿಂಗಳ ಹಿಂದೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ, ಈ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಕೇಲವ 1.9% ಎಂದು ಹೇಳಿತ್ತು. ಕೇಂದ್ರ ಹಣಕಾಸು ಸಚಿವಾಲಯದ ಹೇಳಿಕೆಯಂತೂ ಆರ್ಥಿಕ ಪ್ರಗತಿ ಬಗ್ಗೆ ಮತ್ತಷ್ಟು ಚಿಂತೆ ಮಾಡುವಂತೆ ಮಾಡಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications