ಜೈಪುರ: ಜಗತ್ತಿನಲ್ಲಿ ತೀವ್ರ ಆತಂಕ ಹುಟ್ಟಿಹಾಕಿರುವ ಕೊರೊನಾವೈರಸ್ ಮಾರಿಗೆ ಔಷಧಿ ಕಂಡು ಹಿಡಿಯುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆದರೆ, ಕೊರೊನಾವೈರಸ್ ಗೆ ನಾವು ಔಷಧಿ ಕಂಡು ಹಿಡಿದಿದ್ದೇವೆ ಎಂದು ಭಾರತದ ಯೋಗ ಗುರು ಬಾಬಾ ರಾಮದೇವ್ ಹೇಳಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲೂ ದೊಡ್ಡ ಸಂಚನವನ್ನುಂಟು ಮಾಡಿತ್ತು.
ಕೊರೊನಾವೈರಸ್ ಗೆ ಕೊರೊನಿಲ್ ಮಾತ್ರೆಗಳನ್ನು ತಯಾರಿಸಿದ್ದೇವೆ ಎಂದು ಹೇಳಿದ ಬೆನ್ನಲ್ಲೇ ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರ ಪತಂಜಲಿ ಸಂಸ್ಥೆಯ ವಿರುದ್ಧ ಗರಂ ಆಗಿದ್ದವು. ಅನುಮತಿ ಪಡೆಯದೇ, ಔಷಧಿ ಕಂಡು ಹಿಡಿದಿದ್ದೇವೆ ಎಂದು ಹೇಳಿರುವುದರ ಬಗ್ಗೆ ನೋಟಿಸ್ ನೀಡಲಾಗಿತ್ತು.
ಇದೀಗ ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆಗೆ ಮತ್ತೊಂದು ಸಂಕಷ್ಟ ಬಂದಿದ್ದು, ಕೊರೊನಾವೈರಸ್ಗೆ ಔಷಧಿ ಕಂಡು ಹಿಡಿದಿದ್ದೇವೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಬಾಬಾ ರಾಮದೇವ್ ಹಾಗೂ ಇತರ ನಾಲ್ವರ ವಿರುದ್ಧ ಜೈಪುರದಲ್ಲಿ ಎಫ್ಐಆರ್ ದಾಖಲಾಗಿದೆ.
ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ
ಯೋಗ ಗುರು ರಾಮದೇವ್, ಪತಂಜಲಿ ಸಿಇಒ ಆಚಾರ್ಯ ಬಾಲಕೃಷ್ಣ, ವಿಜ್ಞಾನಿ ಅನುರಾಗ್ ವರ್ಷ್ನಿ, ನಿಮ್ಸ್ ಅಧ್ಯಕ್ಷ ಬಲ್ಬೀರ್ ಸಿಂಗ್ ತೋಮರ್ ಮತ್ತು ನಿರ್ದೇಶಕ ಅನುರಾಗ್ ತೋಮರ್ ವಿರುದ್ಧ ಜೈಪುರದ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.
ಸೆಕ್ಷನ್ 420 ರಲ್ಲಿ ಪ್ರಕರಣ ದಾಖಲು
ಕೊರೊನಿಲ್ ಪ್ರಚಾರದಲ್ಲಿ ತೊಡಗಿದ್ದಕ್ಕಾಗಿ ರಾಮ್ದೇವ್ ಸೇರಿದಂತೆ ಐದು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಕ್ಷನ್ 420 ಸೇರಿದಂತೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಜ್ಯೋತಿ ನಗರ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಉಪಾಧ್ಯಾಯ ತಿಳಿಸಿದ್ದಾರೆ.
ಅನುಮತಿ ಪಡೆಯಲಾಗಿದೆ
ರೋಗಿಗಳ ಮೇಲೆ ವಿಚಾರಣೆ ನಡೆಸಲು ನಮಗೆ ಎಲ್ಲ ಅನುಮತಿಗಳಿವೆ. ಐಸಿಎಂಆರ್ ಸಂಸ್ಥೆಯಾದ ಸಿಟಿಆರ್ಐನಿಂದ ಪರೀಕ್ಷೆಗೆ ಮೊದಲು ಅನುಮತಿ ಪಡೆಯಲಾಗಿದೆ. ಅನುಮತಿ ನೀಡಿದ್ದಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಜೈಪುರ ನಿಮ್ಸ್ ಅಧ್ಯಕ್ಷ ಬಲ್ಬೀರ್ ಸಿಂಗ್ ತೋಮರ್ ಪತಂಜಲಿ ಪರವಾಗಿ ಹೇಳಿದ್ದಾರೆ. ಜೈಪುರದ ನೀಮ್ಸ್ನಲ್ಲಿ 100 ಕೊರೊನಾ ರೋಗಿಗಳ ಮೇಲೆ ಪ್ರಯೋಗ ನಡೆಸಲಾಯಿತು. ಅವರಲ್ಲಿ 69 ಪ್ರತಿಶತದಷ್ಟು ರೋಗಿಗಳು ಮೂರು ದಿನಗಳಲ್ಲಿ ಗುಣಮುಖರಾಗಿದ್ದರೆ, 100 ಪ್ರತಿಶತದಷ್ಟು ರೋಗಿಗಳನ್ನು ಏಳು ದಿನಗಳಲ್ಲಿ ಗುಣಪಡಿಸಲಾಗಿದೆ ಎಂದು ಹೇಳಿದ್ದಾರೆ.
ಒಂದು ಮಾತ್ರೆಗೆ 545 ರುಪಾಯಿ
ಕೊರೊನಿಲ್ ಆಯುರ್ವೇದ ಮಾತ್ರೆಗಳ ಕಿಟ್ನ್ನು ಪತಂಜಲಿ ಕೋವಿಡ್ 19 ರೋಗಿಗಳಿಗೆ ರೂಪಿಸಿದೆ. ಈ ಕಿಟ್ನಲ್ಲಿ ಹತ್ತು ಮಾತ್ರೆಗಳು ಇರುತ್ತವೆ. ಒಂದು ಮಾತ್ರೆಗೆ 545 ರುಪಾಯಿ. ಈ ಮಾತ್ರೆಗಳು ಕೋವಿಡ್ 19 ರೋಗಿಗಳನ್ನು ಗುಣಪಡಿಸಲು ಸಮರ್ಥವಾಗಿದೆ ಎಂದು ಬಾಬಾ ರಾಮದೇವ್ ಅವರು ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications