ಬೆಂಗಳೂರಿನ ಶ್ರೀ ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ವಂಚನೆ ಮರೆಯುವ ಮುನ್ನವೇ ಅದೇ ರೀತಿಯಲ್ಲಿ ಮತ್ತೊಂದು ಸಹಕಾರಿ ಬ್ಯಾಂಕ್ನ ವಂಚನೆ ಪ್ರಕರಣ ಬಯಲಿಗೆ ಬಂದಿದೆ.
ಗ್ರಾಹಕರಿಂದ ಕೋಟ್ಯಾಂತರ ರೂಪಾಯಿ ಠೇವಣಿ ಪಡೆದಿದ್ದ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಬ್ಯಾಂಕ್ ವಿರುದ್ಧ ಗ್ರಾಹಕರು ವಂಚನೆ ಆರೋಪ ಮಾಡಿದ್ದು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಶಿಷ್ಠ ಸೌಹಾರ್ದ ಸಹಕಾರಿ ಸಂಘ ಸುಮಾರು 450 ಕೋಟಿ ರೂ. ಮೋಸ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.

''ಬ್ಯಾಂಕ್ನಿಂದಾಗಿರುವ ವಂಚನೆ ಬಗ್ಗೆ ಮೂವರು ಠೇವಣಿದಾರರು ದೂರು ನೀಡಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಷಕ್ಷರೂ ಆಗಿರುವ ವೆಂಕಟನಾರಾಯಣ ಹಾಗೂ ಅವರ ಪುತ್ರ ಕೃಷ್ಣ ಪ್ರಸಾದ್ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅವರಿಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸದಾಗಿದೆ'' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಶಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆ ವಾರ್ಷಿಕ ಹೆಚ್ಚು ಬಡ್ಡಿ ಕೊಡುವ ಅಮಿಷ ತೋರಿತ್ತು. ನಾಲ್ಕು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ಈ ಸಹಕಾರ ಸಂಘವನ್ನು ನಂಬಿ ಸಾವಿರಾರು ಮಂದಿ ಹಣವನ್ನು ಠೇವಣಿ ಇರಿಸಿದ್ದರು. ಈ ಮೂಲಕ ಸುಮಾರು 450 ಕೋಟಿ ರೂ. ನಿಶ್ಚಿತ ಠೇವಣಿ ಇಟ್ಟಿದ್ದ ನೂರಾರು ಮಂದಿ ಠೇವಣಿ ಅವಧಿ ಕೂಡ ಮುಗಿದಿತ್ತು.
ಆದರೆ ಯಾವಾಗ ಬಡ್ಡಿ ಸಮೇತ ವಾಪಸು ನೀಡುವಂತೆ ಕೇಳಿದಾಗ ಬ್ಯಾಂಕ್ ಪಾವತಿಸಿರಲಿಲ್ಲ. ಕೇಳಿದಾಗ, ಕೊರೊನಾ ಬಂದಿದ್ದು ಸಾಲಗಾರರು ಯಾರೂ ಪಾವತಿ ಮಾಡುತ್ತಿಲ್ಲ ಎಂದು ಹೇಳಿದ್ದರು. ಈ ವಿಚಾರವಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕೂಡ ಮಧ್ಯ ಪ್ರವೇಶಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಕಾಲವಕಾಶ ನೀಡುವಂತೆ ಕೋರಿದ್ದಾರೆ. ಅದರಂತೆ ಕೆಲ ತಿಂಗಳು ಕಾಲಾವಕಾಶ ನೀಡಿದ್ದಾರೆ. ಹೀಗೆ ಕೆಲವು ತಿಂಗಳು ಕಳೆದರೂ ಹಣ ಪಾವತಿ ಮಾಡಿರಲಿಲ್ಲ. ಇದೀಗ ಸಂಘದ ಮುಖ್ಯಸ್ಥರಾದ ವೆಂಕಟನಾರಾಯಣ ಮತ್ತು ಕೃಷ್ಣ ಪ್ರಸಾದ್ ಪರಾರಿಯಾಗಿದ್ದಾರೆ.
ಹೀಗಾಗಿ ಠೇವಣಿ ಹಣದ ಅಸಲು ಇಲ್ಲದೆ ಮೋಸ ಹೋಗಿರುವುದಾಗಿ ಗ್ರಾಹಕರು ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications