ಅಯೋಧ್ಯೆ, ಜನವರಿ 10: ಜನವರಿ 22 ರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರದಲ್ಲಿ ಮೊದಲ ಚಿನ್ನದ ಬಾಗಿಲನ್ನು ಅಳವಡಿಸಲಾಗಿದೆ. ಈ ಬಾಗಿಲು ಸುಮಾರು 12 ಅಡಿ ಎತ್ತರ ಮತ್ತು 8 ಅಡಿ ಅಗಲವಿದೆ.
ಮುಂದಿನ ಮೂರು ದಿನಗಳಲ್ಲಿ ಇನ್ನೂ 13 ಬಾಗಿಲುಗಳನ್ನು ಅಳವಡಿಸಲಾಗುವುದು ಎಂದು ತಿಳಿದು ಬಂದಿದೆ. ಗರ್ಭಗುಡಿಯ ಮೇಲಿನ ಮಹಡಿಯಲ್ಲಿ ಈ ಬಾಗಿಲುಗಳನ್ನು ಅಳವಡಿಸಲಾಗುತ್ತಿದ್ದು, ರಾಮ ಮಂದಿರದಲ್ಲಿ ಒಟ್ಟು 46 ಬಾಗಿಲುಗಳನ್ನು ಅಳವಡಿಸಲಾಗಿದೆ. ಈ ಪೈಕಿ 42ಕ್ಕೆ 100 ಕೆಜಿ ಚಿನ್ನದ ಲೇಪನ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮುಂಜಾನೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22 ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭವನ್ನು 'ರಾಷ್ಟ್ರೀಯ ಹಬ್ಬ' ಎಂದು ಕರೆದ ಮುಖ್ಯಮಂತ್ರಿ ಯೋಗಿ, ಈ ಸಂದರ್ಭಕ್ಕಾಗಿ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಬೇಕು ಎಂದು ಸೂಚನೆ ನೀಡಿದರು.
ಮಂಗಳವಾರ ಅಯೋಧ್ಯೆಗೆ 2024 ರ ಮೊದಲ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ 'ಕುಂಭ ಮಾದರಿಯ ಸ್ವಚ್ಛತೆ'ಯನ್ನು ಜಾರಿಗೆ ತರಲು ಮತ್ತು 'ರಾಮನಗರಿ' ಅತ್ಯಂತ ಸ್ವಚ್ಛ ಮತ್ತು ಸುಂದರ ನಗರವಾಗಿ ಕಾಣಿಸಿಕೊಳ್ಳಬೇಕು. ರಸ್ತೆಗಳಲ್ಲಿ ಧೂಳು ಕಾಣಿಸಬಾರದು, ಶೌಚಾಲಯಗಳನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಗತಿಯಲ್ಲಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನವರಿ 22 ರ ನಂತರ ಭಕ್ತಾದಿಗಳು ಮತ್ತು ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ನಿರೀಕ್ಷಿಸಲಾಗಿರುವುದರಿಂದ ಉತ್ತಮ ಗುಣಮಟ್ಟದ ಮತ್ತು ನಿಗದಿತ ಕಾಲಮಿತಿಯೊಳಗೆ ಕಾರ್ಯಗಳನ್ನು ನಿರ್ವಹಿಸುವ ಅಗತ್ಯವಿದೆ ಎಂದು ಸಿಎಂ ಯೋಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಮಮಂದಿರ ವಿಚಾರದಲ್ಲಿ ನಿರ್ಲಕ್ಷ್ಯವನ್ನು ಯಾವುದೇ ಸಂದರ್ಭದಲ್ಲೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. 'ಪ್ರಾಣ ಪ್ರತಿಷ್ಠಾ' ಸಮಾರಂಭವು ಜನವರಿ 16 ರಿಂದ ಏಳು ದಿನಗಳ ಕಾಲ ನಡೆಯಲಿದೆ.
ರಾಮಮಂದಿರದಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಭಾವನಾತ್ಮಕ ಮಹತ್ವವನ್ನು ಪರಿಗಣಿಸಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಶೇಷ ಸಂದರ್ಭವನ್ನು 'ರಾಷ್ಟ್ರೀಯ ಹಬ್ಬ' ಎಂದು ಕರೆದಿದ್ದು, ಜನವರಿ 22 ರಂದು ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ನಿರ್ದೇಶನ ನೀಡಿದ್ದಾರೆ.
ಈ ಸಂದರ್ಭವನ್ನು ವಿಶೇಷ ಎಂದು ಬಣ್ಣಿಸಿದ ಸಿಎಂ ಯೋಗಿ, ಜನವರಿ 22 ರಂದು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಮುಚ್ಚಬೇಕು. ಮಂಗಳವಾರದಂದು ಅಯೋಧ್ಯೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಕರ ಸಂಕ್ರಾಂತಿಯ ನಂತರ ಪ್ರಾರಂಭವಾಗುವ ಪ್ರಾಣ ಪ್ರತಿಷ್ಠೆಯ ವೈದಿಕ ವಿಧಿ ವಿಧಾನಗಳ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಸಮಾರಂಭದ ಭದ್ರತೆ ಮತ್ತು ಇತರ ವ್ಯವಸ್ಥೆಗಳಿಗೆ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಯೋಧ್ಯೆಯ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಗಣ್ಯರಿಗೆ ಆತಿಥ್ಯವನ್ನು ಹೆಚ್ಚಿಸುವ ಅಗತ್ಯವನ್ನು ಮುಖ್ಯಮಂತ್ರಿ ಒತ್ತಿ ಹೇಳಿದರು.
More From GoodReturns

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?



Click it and Unblock the Notifications