ಅಯ್ಯೋಧ್ಯೆ ಶ್ರೀರಾಮಂದಿರಕ್ಕೆ ಮೊದಲ ಚಿನ್ನದ ಬಾಗಿಲು ಅಳವಡಿಕೆ

ಅಯೋಧ್ಯೆ, ಜನವರಿ 10: ಜನವರಿ 22 ರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರದಲ್ಲಿ ಮೊದಲ ಚಿನ್ನದ ಬಾಗಿಲನ್ನು ಅಳವಡಿಸಲಾಗಿದೆ. ಈ ಬಾಗಿಲು ಸುಮಾರು 12 ಅಡಿ ಎತ್ತರ ಮತ್ತು 8 ಅಡಿ ಅಗಲವಿದೆ.

ಮುಂದಿನ ಮೂರು ದಿನಗಳಲ್ಲಿ ಇನ್ನೂ 13 ಬಾಗಿಲುಗಳನ್ನು ಅಳವಡಿಸಲಾಗುವುದು ಎಂದು ತಿಳಿದು ಬಂದಿದೆ. ಗರ್ಭಗುಡಿಯ ಮೇಲಿನ ಮಹಡಿಯಲ್ಲಿ ಈ ಬಾಗಿಲುಗಳನ್ನು ಅಳವಡಿಸಲಾಗುತ್ತಿದ್ದು, ರಾಮ ಮಂದಿರದಲ್ಲಿ ಒಟ್ಟು 46 ಬಾಗಿಲುಗಳನ್ನು ಅಳವಡಿಸಲಾಗಿದೆ. ಈ ಪೈಕಿ 42ಕ್ಕೆ 100 ಕೆಜಿ ಚಿನ್ನದ ಲೇಪನ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀರಾಮಂದಿರಕ್ಕೆ ಮೊದಲ ಚಿನ್ನದ ಬಾಗಿಲು ಅಳವಡಿಕೆ

ಇಂದು ಮುಂಜಾನೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22 ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭವನ್ನು 'ರಾಷ್ಟ್ರೀಯ ಹಬ್ಬ' ಎಂದು ಕರೆದ ಮುಖ್ಯಮಂತ್ರಿ ಯೋಗಿ, ಈ ಸಂದರ್ಭಕ್ಕಾಗಿ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಬೇಕು ಎಂದು ಸೂಚನೆ ನೀಡಿದರು.

ಮಂಗಳವಾರ ಅಯೋಧ್ಯೆಗೆ 2024 ರ ಮೊದಲ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ 'ಕುಂಭ ಮಾದರಿಯ ಸ್ವಚ್ಛತೆ'ಯನ್ನು ಜಾರಿಗೆ ತರಲು ಮತ್ತು 'ರಾಮನಗರಿ' ಅತ್ಯಂತ ಸ್ವಚ್ಛ ಮತ್ತು ಸುಂದರ ನಗರವಾಗಿ ಕಾಣಿಸಿಕೊಳ್ಳಬೇಕು. ರಸ್ತೆಗಳಲ್ಲಿ ಧೂಳು ಕಾಣಿಸಬಾರದು, ಶೌಚಾಲಯಗಳನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಗತಿಯಲ್ಲಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನವರಿ 22 ರ ನಂತರ ಭಕ್ತಾದಿಗಳು ಮತ್ತು ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ನಿರೀಕ್ಷಿಸಲಾಗಿರುವುದರಿಂದ ಉತ್ತಮ ಗುಣಮಟ್ಟದ ಮತ್ತು ನಿಗದಿತ ಕಾಲಮಿತಿಯೊಳಗೆ ಕಾರ್ಯಗಳನ್ನು ನಿರ್ವಹಿಸುವ ಅಗತ್ಯವಿದೆ ಎಂದು ಸಿಎಂ ಯೋಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಮಮಂದಿರ ವಿಚಾರದಲ್ಲಿ ನಿರ್ಲಕ್ಷ್ಯವನ್ನು ಯಾವುದೇ ಸಂದರ್ಭದಲ್ಲೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. 'ಪ್ರಾಣ ಪ್ರತಿಷ್ಠಾ' ಸಮಾರಂಭವು ಜನವರಿ 16 ರಿಂದ ಏಳು ದಿನಗಳ ಕಾಲ ನಡೆಯಲಿದೆ.

ರಾಮಮಂದಿರದಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಭಾವನಾತ್ಮಕ ಮಹತ್ವವನ್ನು ಪರಿಗಣಿಸಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಶೇಷ ಸಂದರ್ಭವನ್ನು 'ರಾಷ್ಟ್ರೀಯ ಹಬ್ಬ' ಎಂದು ಕರೆದಿದ್ದು, ಜನವರಿ 22 ರಂದು ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ನಿರ್ದೇಶನ ನೀಡಿದ್ದಾರೆ.

ಈ ಸಂದರ್ಭವನ್ನು ವಿಶೇಷ ಎಂದು ಬಣ್ಣಿಸಿದ ಸಿಎಂ ಯೋಗಿ, ಜನವರಿ 22 ರಂದು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಮುಚ್ಚಬೇಕು. ಮಂಗಳವಾರದಂದು ಅಯೋಧ್ಯೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಕರ ಸಂಕ್ರಾಂತಿಯ ನಂತರ ಪ್ರಾರಂಭವಾಗುವ ಪ್ರಾಣ ಪ್ರತಿಷ್ಠೆಯ ವೈದಿಕ ವಿಧಿ ವಿಧಾನಗಳ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಸಮಾರಂಭದ ಭದ್ರತೆ ಮತ್ತು ಇತರ ವ್ಯವಸ್ಥೆಗಳಿಗೆ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಯೋಧ್ಯೆಯ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಗಣ್ಯರಿಗೆ ಆತಿಥ್ಯವನ್ನು ಹೆಚ್ಚಿಸುವ ಅಗತ್ಯವನ್ನು ಮುಖ್ಯಮಂತ್ರಿ ಒತ್ತಿ ಹೇಳಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+