"Covid- 19 ಆರ್ಥಿಕ ಉತ್ತೇಜನ ಘೋಷಿಸಿದ ಕೇಂದ್ರ ಸರ್ಕಾರವು ಇದರಲ್ಲಿ ಲಕ್ಷಾಂತರ ಸಂಖ್ಯೆಯ ಬಡ ಹಾಗೂ ಹಸಿದ ವಲಸಿಗ ಕಾರ್ಮಿಕರಿಗೆ ಏನೂ ನೀಡಿಲ್ಲ. ಆ ವಲಸಿಗ ಕಾರ್ಮಿಕರಲ್ಲಿ ನಡೆದುಕೊಂಡೇ ತಮ್ಮ ಮನೆಗಳನ್ನು ಸೇರಿಕೊಂಡವರು ಇದ್ದಾರೆ" ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಟೀಕಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರದಂದು ಮಾಡಿದ ಘೋಷಣೆ ಬಗ್ಗೆ ನಿರಾಸೆ ವ್ಯಕ್ತಪಡಿಸಿದ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರವು ಸಣ್ಣ ಉದ್ಯಮಗಳಿಗೆ ಶೂರಿಟಿ ಇಲ್ಲದಂತೆ 3 ಲಕ್ಷ ಕೋಟಿ ರುಪಾಯಿ ವಿತರಿಸಿವುದಾಗಿ ಘೋಷಿಸಿತು. ಆದರೆ ಬಾಕಿ 16.4 ಲಕ್ಷ ಕೋಟಿ ರುಪಾಯಿ ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.
MSMEಗೆ ಘೋಷಿಸಿದ ಪ್ಯಾಕೇಜ್ ಹೊರತುಪಡಿಸಿ ಉಳಿದ ಘೋಷಣೆಗಳು ನಿರಾಶಾದಾಯಕ ಆಗಿದೆ. ಈ ಸರ್ಕಾರವು ಅದರದೇ ಅಜ್ಞಾನ ಮತ್ತು ಭಯದ ಕೈದಿಯಂತೆ ಆಗಿದೆ. ಸರ್ಕಾರವು ಹೆಚ್ಚು ಖರ್ಚು ಮಾಡಬೇಕು. ಆದರೆ ಈ ಸರ್ಕಾರಕ್ಕೆ ಆ ಸಾಮರ್ಥ್ಯ ಇಲ್ಲ. ಸರ್ಕಾರವು ಹೆಚ್ಚು ಸಾಲ ಮಾಡಬೇಕಿದೆ. ಅದು ಕೂಡ ಈ ಸರ್ಕಾರಕ್ಕೆ ಆಗುತ್ತಿಲ್ಲ. ಇನ್ನು ರಾಜ್ಯ ಸರ್ಕಾರಗಳು ಹೆಚ್ಚು ಸಾಲ ಮಾಡಿ, ಖರ್ಚು ಹೆಚ್ಚು ಮಾಡಬೇಕು. ಅದಕ್ಕೂ ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರವು ಮೊದಲಿಗೆ ಏನು ಮಾಡಬೇಕು ಅಂದರೆ, ಜನಸಂಖ್ಯೆಯಲ್ಲಿ ತಳ ಮಟ್ಟದಲ್ಲಿ ಇರುವ 13 ಕೋಟಿ ಕುಟುಂಬಗಳಿಗೆ ತಲಾ 5 ಸಾವಿರ ರುಪಾಯಿಯನ್ನು ನೀಡಬೇಕು. ಅಂದರೆ, ಅದಕ್ಕಾಗಿ ಸರ್ಕಾರಕ್ಕೆ 65 ಸಾವಿರ ಕೋಟಿ ರುಪಾಯಿ ವೆಚ್ಚವಾಗುತ್ತದೆ. ಇನ್ನು ಕ್ಷೇತ್ರವಾರು ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಪ್ರತಿ ವಲಯಕ್ಕೂ ಆರ್ಥಿಕ ಬೆಂಬಲ ನೀಡಬೇಕು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications