2023ರ ಬಜೆಟ್ ಅಧಿವೇಶನವನ್ನು ರಾಷ್ಟ್ರಪತಿಯವರು ಉದ್ದೇಶಿಸಿ ಮಾತನಾಡಿದ್ದಾರೆ. ಐದನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ ಒಂದರಂದು ಮಂಡನೆಯಾಗಲಿರುವ 2023ರ ಬಜೆಟ್ ಹೊಸ ಘಟನೆಯೊಂದಕ್ಕೆ ಸಾಕ್ಷಿಯಾಗಲಿದೆ.
ನವದೆಹಲಿ, ಫೆ 1: ಫೆಬ್ರವರಿ ಒಂದರಂದು ಮಂಡನೆಯಾಗಲಿರುವ 2023ರ ಬಜೆಟ್ ಹೊಸ ಘಟನೆಯೊಂದಕ್ಕೆ ಸಾಕ್ಷಿಯಾಗಲಿದೆ. ಬಜೆಟ್ ಅಧಿವೇಶನ ಮಂಗಳವಾರ ( ಜ 31) ಆರಂಭವಾಗಿದೆ.
1947ರ ನಂತರ ಇದೇ ಮೊದಲ ಬಾರಿಗೆ ಅಪರೂಪದ ವಿದ್ಯಮಾನವೊಂದಕ್ಕೆ ಹಾಲೀ ಬಜೆಟ್ ಅಧಿವೇಶನ ಸಾಕ್ಷಿಯಾಗಲಿದೆ. ಬಜೆಟ್ ಜಂಟಿ ಅಧಿವೇಶನವನ್ನು ರಾಷ್ಟ್ರಪತಿ ದ್ರೌಪದಿ ಮರ್ಮು ಉದ್ದೇಶಿಸಿ ಮಾತನಾಡುವ ಮೂಲಕ ಆರಂಭವಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಆಯವ್ಯಯವನ್ನು ಮಂಡಿಸಲಿದ್ದಾರೆ. ಆ ಮೂಲಕ, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ರಾಷ್ಟ್ರಪತಿಯೊಬ್ಬರು ಸದನವನ್ನು ಉದ್ದೇಶಿಸಿ ಮಾತನಾಡಿದ್ದು ಮತ್ತು ಮಹಿಳಾ ಹಣಕಾಸು ಸಚಿವೆ ಕೇಂದ್ರ ಬಜೆಟ್ ಮಂಡಿಸುವ ಅಪರೂಪದ ಸನ್ನಿವೇಶಕ್ಕೆ ದೇಶ ಸಾಕ್ಷಿಯಾಗಲಿದೆ.

ಈ ಹಿಂದೆ ಪ್ರತಿಭಾ ಪಾಟೀಲ್ 2007-2012ರ ಐದು ವರ್ಷದ ಅವಧಿಗೆ ರಾಷ್ಟ್ರಪತಿಯಾಗಿದ್ದ ವೇಳೆ ಜಸ್ವಂತ್ ಸಿಂಗ್, ಪಿ.ಚಿದಂಬರಂ, ಮನಮೋಹನ್ ಸಿಂಗ್, ಪ್ರಣವ್ ಮುಖರ್ಜಿ ಕೇಂದ್ರ ಹಣಕಾಸು ಸಚಿವರಾಗಿದ್ದರು.
ಈಗ, ದ್ರೌಪದಿ ಮರ್ಮು ಅವರು 25.07.2022 ರಂದು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಅವರು ಇದೇ ಮೊದಲ ಬಾರಿಗೆ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಿರ್ಮಲಾ ಸೀತಾರಾಮನ್ ನಾಲ್ಕು ಬಾರಿ ಈ ಹಿಂದೆ ಬಜೆಟ್ ಮಂಡಿಸಿದ್ದರೂ ಈ ಅವಧಿಯಲ್ಲಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಗಳಾಗಿದ್ದರು.
ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ಡಿಎ ಮೈತ್ರಿಕೂಟದ ಸರಕಾರದ ಪೂರ್ಣಪ್ರಮಾಣದ ಕೊನೆಯ ಬಜೆಟ್ ಇದಾಗಲಿದೆ. ಫೆಬ್ರವರಿ ಹದಿಮೂರರ ವರೆಗೆ ಹಾಲೀ ಬಜೆಟ್ ಅಧಿವೇಶನ ನಡೆಯಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications