2023ರ ಕೇಂದ್ರ ಆಯವ್ಯಯದಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ಹಿರಿಯ ನಾಗರೀಕರಿಗೆ ಆಕರ್ಷಕ ಬಡ್ಡಿದರ, ಸ್ಕೀಂ ಘೋಷಿಸಿದ ನಂತರ ದೇಶದ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ತಮ್ಮ ಬ್ಯೂಸಿನೆಸ್ ಪ್ಲ್ಯಾನ್ ಗಳನ್ನು ಬದಲಾಯಿಸಿಕೊಂಡಿದೆ.
ಅನೇಕ ಬ್ಯಾಂಕುಗಳು ನಿಶ್ಚಿತ ಠೇವಣಿ (Fixed Deposit) ಮೇಲಿನ ಬಡ್ಡಿದರವನ್ನು ಪರಿಷ್ಕರಿಸಿವೆ. ವಿಶೇಷವಾಗಿ ಹಿರಿಯ ನಾಗರೀಕರಿಗೆ ಈ ಸೌಲಭ್ಯಗಳನ್ನು ನೀಡಲು ಬ್ಯಾಂಕುಗಳು ಮುಂದಾಗಿವೆ. ಫೆಬ್ರವರಿ ತಿಂಗಳ ಆರಂಭದಲ್ಲಿ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ. 6.5ಹೆಚ್ಚಿಸಿದಾಗಿನಿಂದ ಬ್ಯಾಂಕುಗಳು ಬಡ್ಡಿದರದಲ್ಲಿ ಬದಲಾವಣೆಯನ್ನು ತಂದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ ಡಿಎಫ್ ಸಿ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಏಕ್ಸಿಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಬ್ಯಾಂಕುಗಳು ಬಡ್ಡಿದರದಲ್ಲಿ ಗಮನಾರ್ಹ ಪರಿಷ್ಕರಣೆಯನ್ನು ಜಾರಿಗೆ ತಂದಿದೆ.
ರಾಷ್ಟ್ರೀಕೃತ ಬ್ಯಾಂಕುಗಳು ನಿಶ್ಚಿತ ಠೇವಣಿಯ ಮೇಲೆ ಶೇ. 7.5 - 8ರಷ್ಟು ಬಡ್ಡಿದರವನ್ನು ನೀಡಿದರೆ, ಸಣ್ಣ ಫೈನಾನ್ಸ್ ಬ್ಯಾಂಕುಗಳು ಶೇ. 9.5ರಷ್ಟು ಬಡ್ಡಿ ನೀಡುವುದಾಗಿ ಪ್ರಕಟಿಸಿದೆ. ಹಿರಿಯ ನಾಗರೀಕರಿಗೆ ಠೇವಣಿಯ ಮೇಲೆ ಶೇ. 0.5ಹೆಚ್ಚುವರಿ ಬಡ್ಡಿ ನೀಡುವುದಾಗಿ ಬಹುತೇಕ ಎಲ್ಲಾ ಬ್ಯಾಂಕುಗಳು ಪ್ರಕಟಿಸಿವೆ.
ಅರವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ಎಂಬತ್ತು ವರ್ಷ ಮೇಲ್ಪಟ್ಟ ಸೂಪರ್ ಸೀನಿಯರ್ ಸಿಟಿಜನ್ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಠೇವಣಿ ಮೇಲಿನ ಬಡ್ಡಿಗೆ ತೆರಿಗೆ ಪಾವತಿಸ ಬೇಕಾಗಿರುವುದರಿಂದ ಟ್ಯಾಕ್ಸ್ ರಿಬೇಟ್ ಪಡೆದುಕೊಳ್ಲಲೂ ಇದು ಸಹಾಯಕವಾಗಲಿದೆ.
ರಾಷ್ಟ್ರೀಕೃತ, ಖಾಸಗಿ ಬ್ಯಾಂಕುಗಳಿಗಿಂತಲೂ ಹಿರಿಯ ನಾಗರೀಕರಿಗೆ ಹೆಚ್ಚಿನ ಬಡ್ಡಿ (ನಿಶ್ಚಿತ ಠೇವಣಿಯ ಮೇಲೆ) ನೀಡುವ ಐದು ಫೈನಾನ್ಸ್ ಸಂಸ್ಥೆಗಳು ಹೀಗಿವೆ:
1. ಯುನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್
ಬೆಸ್ಟ್ ಸ್ಲ್ಯಾಬ್: ಶೇ. 9.5
ಸ್ಕೀಂ : 1,001 ದಿನ
ಸ್ಕೀಂ: 181-201 ದಿನ ಮತ್ತು 501 ದಿನಕ್ಕೆ ಬಡ್ಡಿ: ಶೇ. 9.25
2. ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್
ಬೆಸ್ಟ್ ಸ್ಲ್ಯಾಬ್: ಶೇ. 8.51 (730 -999 ದಿನ)
ಸ್ಕೀಂ : 999 ದಿನಕ್ಕೆ ಶೇ. 8.76
3. ಜನ ಸ್ಮಾಲ್ ಬ್ಯಾಂಕ್
ಬೆಸ್ಟ್ ಸ್ಲ್ಯಾಬ್: ಶೇ. 8.80 (730 -999 ದಿನ)
ಸ್ಕೀಂ : 2-3 ವರ್ಷಕ್ಕಾದರೆ ಶೇ. 0.7 ಹೆಚ್ಚುವರಿ ಬಡ್ಡಿ
4. ಬಂಧನ್ ಬ್ಯಾಂಕ್
ಬೆಸ್ಟ್ ಸ್ಲ್ಯಾಬ್: ಶೇ. 8.50 (600 ದಿನ)
5. ಐಡಿಬಿಐ ಬ್ಯಾಂಕ್
ಬೆಸ್ಟ್ ಸ್ಲ್ಯಾಬ್: ಶೇ. 7.5 (1, 2ವರ್ಷಕ್ಕೆ, 444 & 700 ದಿನಕ್ಕೆ ಹೊರತಾಗಿ)
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications