ಬೆಂಗಳೂರು, ಸೆಪ್ಟೆಂಬರ್ 4: ವಿದೇಶಿ ನೇರ ಹೂಡಿಕೆಯ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯವು ತಮಗೆ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿ ಭಾರತದ ಇ- ಕಾಮರ್ಸ್ ದೈತ್ಯ ಸಂಸ್ಥೆಯಾದ ಫ್ಲಿಪ್ಕಾರ್ಟ್ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಸಚಿನ್ ಬನ್ಸಾಲ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
2009-14ರ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಫ್ಲಿಪ್ಕಾರ್ಟ್ ವಿರುದ್ಧ ಆರೋಪವನ್ನು ಮಾಡಲಾಗಿದೆ. ಇದರಿಂದ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ 1999ರ ಸೆಕ್ಷನ್ 16ರ ಅಡಿ ಫ್ಲಿಪ್ಕಾರ್ಟ್ ವಿರುದ್ಧ ನ್ಯಾಯಿಕ ವಿಚಾರಣೆಯನ್ನು ಆರಂಭಿಸಿ ನೋಟಿಸ್ ನೀಡಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಫ್ಲಿಫ್ಕಾರ್ಟ್ ವಿದೇಶಿ ನೇರ ಹೂಡಿಕೆ ನೀತಿ- 2010ರ ಅನುಪಾಲನೆಯನ್ನು ಮಾಡಿಲ್ಲ ಎನ್ನುವುದು ಜಾರಿ ನಿರ್ದೇಶನಾಲಯದ ಆರೋಪವಾಗಿದೆ. ಪ್ರಕರಣವು 2012-13ರಷ್ಟು ಹಳೆಯದಾಗಿದ್ದು, ಈ ಕುರಿತು ನೋಟಿಸ್ ಅನ್ನು ಆ.5, 2021ರಂದು ನೀಡಲಾಗಿದೆ ಎಂದಿರುವ ಬನ್ಸಾಲ್ ಈ ಸುದೀರ್ಘ ವಿಳಂಬವನ್ನು ಪ್ರಶ್ನಿಸಿದ್ದಾರೆ.
ಜಾರಿ ನಿರ್ದೇಶನಾಲಯದ (ಇಡಿ) 10,600 ಕೋಟಿ ರೂ.ಗಳ ಫೆಮಾ (ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ) ಉಲ್ಲಂಘನೆ ನೋಟಿಸ್ ನೀಡಿರುವುದನ್ನು ಸಚಿನ್ ಬನ್ಸಾಲ್ ಶುಕ್ರವಾರ ಮದ್ರಾಸ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
2009-14ರ ಅವಧಿಯಲ್ಲಿ ಕೆಲವು ಫ್ಲಿಪ್ಕಾರ್ಟ್ ಗ್ರೂಪ್ ಕಂಪನಿಗಳ ಷೇರುಗಳನ್ನು ವಿದೇಶಿ ಹೂಡಿಕೆದಾರರಿಗೆ ನೀಡುವುದಕ್ಕೆ ಸಂಬಂಧಿಸಿದಂತೆ 2010ರ ಏಕೀಕೃತ ಎಫ್ಡಿಐ ನೀತಿಯಲ್ಲಿ ಷರತ್ತುಗಳನ್ನು ಪಾಲಿಸಿಲ್ಲ ಎಂದು ಸಚಿನ್ ಬನ್ಸಾಲ್ ಮತ್ತು ಇತರರ ವಿರುದ್ಧ ನೋಟಿಸ್ ನೀಡಲಾಗಿದೆ.
ನ್ಯಾಯಮೂರ್ತಿ ಆರ್. ಮಹದೇವನ್ ಕಳೆದ 12 ವರ್ಷಗಳಿಂದ ಆಪಾದಿತ ಉಲ್ಲಂಘನೆಯ ಮೇಲೆ ಏಕೆ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಕೇಳಿದ್ದಾರೆ. ಮೂರು ವಾರಗಳಲ್ಲಿ ಇಡಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications