ಸಂಸ್ಥೆಯ ಪೂರೈಕೆ ಸಾಮರ್ಥ್ಯಗಳನ್ನು ಹೆಚ್ಚಿಸಲು ಮಾರ್ಚ್-ಮೇ ಅವಧಿಯಲ್ಲಿ ಭಾರತದಾದ್ಯಂತ ಸುಮಾರು 23,000 ಜನರನ್ನು ನೇಮಿಸಿಕೊಂಡಿದೆ ಎಂದು ಫ್ಲಿಪ್ಕಾರ್ಟ್ ಮಂಗಳವಾರ ಹೇಳಿದೆ. ಹೊಸದಾಗಿ ನೇಮಕಗೊಂಡವರಲ್ಲಿ ನೌಕರರಲ್ಲಿ ಹೆಚ್ಚಿನವರನ್ನು ಪ್ರಾಥಮಿಕವಾಗಿ ಗೋದಾಮು ಮತ್ತು ವಿತರಣಾ ಶಾಖೆಗಳಲ್ಲಿ ಇರಿಸಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ಶುರುವಾದ ಬಳಿಕ ಇ-ಕಾಮರ್ಸ್ ವಲಯದ ವಹಿವಾಟು ಹೆಚ್ಚಾಗಿರುವುದರಿಂದ ಫ್ಲಿಪ್ಕಾರ್ಟ್ ಕಂಪನಿಯು ಮೂರು ತಿಂಗಳಲ್ಲಿ 23,000 ಜನರಿಗೆ ಉದ್ಯೋಗ ನೀಡಿದೆ.

''ಫ್ಲಿಪ್ಕಾರ್ಟ್ನಲ್ಲಿ ನೌಕರರ ಸುರಕ್ಷತೆಯ ಜೊತೆಗೆ, ಗ್ರಾಹಕರ ಅಗತ್ಯಗಳನ್ನು ಪೂರೈಸುವುದಕ್ಕೆ ಆದ್ಯತೆ ನೀಡಲಾಗಿದೆ. ದೇಶದಾದ್ಯಂತ ಇ-ಕಾಮರ್ಸ್ ಸೇವೆಗಳಿಗೆ ಬೇಡಿಕೆ ಹೆಚ್ಚಿದ್ದು, ಈ ಸಂದರ್ಭದಲ್ಲಿ ನಮ್ಮ ಪೂರೈಕೆ ವ್ಯವಸ್ಥೆಯನ್ನು ವಿಸ್ತರಿಸುವುದರಿಂದ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ'' ಎಂದು ಫ್ಲಿಪ್ಕಾರ್ಟ್ನ ಪೂರೈಕೆ ವ್ಯವಸ್ಥೆ ವಿಭಾಗದ ಹಿರಿಯ ಉಪಾಧ್ಯಕ್ಷ ಹೇಮಂತ್ ಬಾದ್ರಿ ತಿಳಿಸಿದ್ದಾರೆ.
ದೇಶಾದ್ಯಂತದ ಗ್ರಾಹಕರು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಲ್ಲಿ ಹೆಚ್ಚಿನ ಖರೀದಿ ಮಾಡುತ್ತಿರುವ ಸಮಯದಲ್ಲಿ ಉದ್ಯೋಗ ಸೃಷ್ಟಿಯಾಗಿದೆ. ಇದರಲ್ಲಿ ಅಗತ್ಯ ವಸ್ತುಗಳು ಮತ್ತು ದೈನಂದಿನ ಖರೀದಿಗಳು ಸೇರಿವೆ. ಕೋವಿಡ್-19 ಸಾಂಕ್ರಾಮಿಕ ತಡೆಗಟ್ಟಲು ಹೆಚ್ಚಿನ ರಾಜ್ಯಗಳು ಲಾಕ್ಡೌನ್ಗಳು ಮತ್ತು ಇತರ ಸಂಬಂಧಿತ ನಿರ್ಬಂಧಗಳನ್ನು ವಿಧಿಸಿವೆ. ಹೀಗಾಗಿ ಜನರು ಆನ್ಲೈನ್ ಶಾಪಿಂಗ್ ಮೊರೆ ಹೋಗಿದ್ದಾರೆ.
ಕಳೆದ ವರ್ಷ, ಇ-ಕಾಮರ್ಸ್ ಸಂಸ್ಥೆಗಳಾದ ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ನೇರ ಮತ್ತು ಸೀಸನ್ ಆಧಾರಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸಿತ್ತು. ಹಿಂದಿನ ವರ್ಷದಲ್ಲಿ ಫ್ಲಿಪ್ಕಾರ್ಟ್ನ ಬಿಗ್ ಬಿಲಿಯನ್ ಡೇಸ್ ಮಾರಾಟದ ಚಾಲನೆಯಲ್ಲಿ, ಲಕ್ಷಾಂತರ ಪರೋಕ್ಷ ಉದ್ಯೋಗ ಸೃಷ್ಟಿಯ ಜೊತೆಗೆ 70,000 ನೇರ ಉದ್ಯೋಗಗಳಿಗೆ ಅವಕಾಶ ಕಲ್ಪಿಸಲು ಸಂಸ್ಥೆ ಸಹಾಯ ಮಾಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications