ಭಾರತದ ಇ-ಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ಕಾರ್ಟ್ ತನ್ನ ಮಾರಾಟದ ಉತ್ಪನ್ನಗಳನ್ನು ಪ್ಯಾಕ್ ಮಾಡುವ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ಬದಲಾಯಿಸಿ ಪರಿಸರ ಸ್ನೇಹಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.
ಶೂನ್ಯ ತ್ಯಾಜ್ಯ ಉತ್ಪಾದನೆ ಪರಿಕಲ್ಪನೆಯ ಯೋಜನೆ ರೂಪಿಸಿರುವ ಫ್ಲಿಪ್ಕಾರ್ಟ್ ತನ್ನ ಮಾರಾಟದ ಉತ್ಪನ್ನಗಳ ಪ್ಯಾಕೇಕಿಂಗ್ ಪ್ಲಾಸ್ಟಿಕ್ ಬಳಕೆಯ ಪ್ರಮಾಣವನ್ನು ಹಂತ ಹಂತವಾಗಿ ಕಡಿಮೆ ಮಾಡುತ್ತಿದೆ. ಇದರ ಪರಿಣಾಮವಾಗಿ ತನ್ನದೇ ಆದ ವಲಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸುಮಾರು 50 ಪರ್ಸೆಂಟ್ರಷ್ಟು ಕಡಿಮೆ ಮಾಡಿದೆ.
ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಗುರಿಯನ್ನು ಹೊಂದಿರುವ ಫ್ಲಿಪ್ಕಾರ್ಟ್ ಮಹಾರಾಷ್ಟ್ರದಲ್ಲಿ ತನ್ನದೇ ಸ್ವಂತ ಸಪ್ಲೈ ಚೇನ್ನಲ್ಲಿ ಮೇ 1, 2020 ರಿಂದ ಸಂಪೂರ್ಣವಾಗಿ ಕಾಗದದ ಪೊಟ್ಟಣಗಳಲ್ಲಿ ಪ್ಯಾಕ್ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತಗೊಳಿಸಿದೆ.

ಜೊತೆಗೆ ಪರಿಸರ ಸ್ನೇಹಿ ಪೇಪರ್ ಶ್ರೆಡ್ಸ್ ಬಳಕೆ, ಪಾಲಿ ಪೌಚ್ಗಳ ಬದಲಿಗೆ ಪುನರ್ ಬಳಕೆ ಮಾಡಬಹುದಾದ ಪೇಪರ್ ಬ್ಯಾಗ್ಗಳ ಬಳಕೆ, ಬಬಲ್ ರ್ಯಾಪ್ಗಳು ಮತ್ತು ಏರ್ ಬ್ಯಾಗ್ಗಳ ಬದಲಾಗಿ ಕಾರ್ಟನ್ ವೇಸ್ಟ್ ಶ್ರೆಡೆಡ್ ಉತ್ಪನ್ನಗಳಂತಹ ಹಲವಾರು ಬಗೆಯ ಪರಿಸರಸ್ನೇಹಿ ಉತ್ಪನ್ನಗಳನ್ನು ಬಳಕೆ ಮಾಡಲು ಆರಂಭಿಸಿದೆ.
ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ಸೆಕ್ಯೂರಿಟಿ ಬ್ಯಾಗ್ ಗಳಿಗೆ ಬದಲಾಗಿ ಕಾಗದದಿಂದ ತಯಾರಿಸಲಾದ ಸೆಕ್ಯೂರಿಟಿ ಎನ್ವಲಪ್ಗಳ ಬಳಕೆ ಮಾಡಲಾಗುತ್ತಿದೆ. ರಾಪಿಂಗ್ ಫಿಲ್ಮ್ಗಳ ಬದಲಾಗಿ ಪುನರ್ಬಳಕೆ ಮಾಡಿದ ಕಾಗದದಿಂದ ತಯಾರಿಸಲಾಗಿರುವ ಕುಶನಿಂಗ್ ಉತ್ಪನ್ನಗಳನ್ನು ಬಳಸಲಾಗುತ್ತಿದೆ.
ಫ್ಲಿಪ್ಕಾರ್ಟ್ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಮತ್ತು ಇತರೆ ಪರಿಸರ ಸ್ನೇಹಿ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿದ್ದುಕೊಂಡು ಸುಸ್ಥಿರ ಪರಿಸರ ನಿರ್ಮಾಣದತ್ತ ಹೆಜ್ಜೆ ಇರಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications