ಭಾರತದ ಸ್ವದೇಶಿ ಇ-ಕಾಮರ್ಸ್ ಮಾರುಕಟ್ಟೆಯಾಗಿರುವ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ವಿಮೆಯ ಸೌಲಭ್ಯವನ್ನು ಒದಗಿಸಲು ಗ್ರೂಪ್ ಸೇಫ್ ಗಾರ್ಡ್ ವಿಮೆಯನ್ನು ಜಾರಿಗೆ ತರುವ ದೃಷ್ಟಿಯಿಂದ, ದೇಶದ ಖ್ಯಾತ ವಿಮಾ ಕಂಪನಿಯಾಗಿರುವ ಐಸಿಐಸಿಐ ಲೊಂಬಾರ್ಡ್ ನೊಂದಿಗೆ ಸಹಭಾಗಿತ್ವವನ್ನು ಮಾಡಿಕೊಂಡಿದೆ.
ಇತರೆ ಆರೋಗ್ಯ ವಿಮಾ ಪಾಲಿಸಿಗಳಿಗೆ ಹೋಲಿಸಿದರೆ ಈ ಗ್ರೂಪ್ ಸೇಫ್ ಗಾರ್ಡ್ ನ ಪ್ರಯೋಜನಗಳು ಉತ್ತಮವಾಗಿವೆ. ಇವುಗಳಲ್ಲಿ ಪ್ರಮುಖವಾಗಿ ಅನಾರೋಗ್ಯಪೀಡಿತ ಗ್ರಾಹಕರು ಆಸ್ಪತ್ರೆಗೆ ದಾಖಲಾದರೆ ಪ್ರತಿದಿನ ನಗದು ವಿಮೆಯನ್ನು ಪಡೆಯಬಹುದಾಗಿದೆ. ಈ ನಿಗದಿತ ವಿಮಾ ಹಣದಿಂದ ಗ್ರಾಹಕರು ಆಕಸ್ಮಿಕ ವೈದ್ಯಕೀಯ ಅಥವಾ ತುರ್ತು ವೆಚ್ಚಗಳಿಗೆ ಭರಿಸಬಹುದಾಗಿದೆ. ಈ ವಿಮೆಯು ಕೈಗೆಟುಕುವ ದರದಲ್ಲಿ ಲಭ್ಯವಿದ್ದು, ಕಾಗದರಹಿತ ಮತ್ತು ಸರಳವಾಗಿರುತ್ತದೆ. ಅಪಘಾತದಿಂದ ಆಸ್ಪತ್ರೆಗೆ ದಾಖಲಾಗುವುದು ಅಥವಾ ಯೋಜಿತ ಸರ್ಜರಿಗಳು /ಚಿಕಿತ್ಸೆಗಳಿಗೆ ನೆರವಾಗುತ್ತದೆ.

ಆಸ್ಪತ್ರೆಗಳಲ್ಲಿ ದಾಖಲಾಗುವ ವೇಳೆ ಭಾರತೀಯರು ಗಣನೀಯ ಪ್ರಮಾಣದಲ್ಲಿ ವೆಚ್ಚ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ವರದಿಯ ಪ್ರಕಾರ, ಭಾರತದಲ್ಲಿ ಆಸ್ಪತ್ರೆಗೆ ದಾಖಲಾಗುವವರಲ್ಲಿ ತಲಾ ಒಬ್ಬರಿಗೆ ಸರಾಸರಿ 4,452 ದಿಂದ 31,845 ರೂಪಾಯಿ ವೆಚ್ಚವಾಗುತ್ತಿದೆ. ಅದೇ ರೀತಿ ಆಸ್ಪತ್ರೆಗೆ ದಾಖಲಾಗುವುದರಿಂದ ಸರಾಸರಿ ಪ್ರತಿದಿನ 8,164 ರೂಪಾಯಿಗಳು ನಷ್ಟವಾಗುತ್ತಿದೆ.
ಐಸಿಐಸಿಐ ಲೊಂಬಾರ್ಡ್ ಫ್ಲಿಪ್ ಕಾರ್ಟ್ ಗ್ರಾಹಕರಿಗೆ ಹಾಸ್ಪಿಕ್ಯಾಶ್ ಮೂಲಕ ಪ್ರಯೋಜನವನ್ನು ನೀಡುತ್ತದೆ. ಗ್ರಾಹಕರು ತುರ್ತು ವೈದ್ಯಕೀಯ ವೆಚ್ಚಗಳು, ಪ್ರಯಾಣ, ಆಸ್ಪತ್ರೆಯಿಂದ ಡಿಸ್ ಚಾರ್ಜ್ ನಂತರದ ವೆಚ್ಚಗಳು ಅಥವಾ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ನಷ್ಟವಾಗುವ ಆದಾಯಕ್ಕೆ ಪರಿಹಾರವನ್ನು ನೀಡುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications