ಭಾರತದ ಮೊದಲ ಸವರನ್ ಗ್ರೀನ್ ಬಾಂಡ್ ಯೋಜನೆಯ ಅಂತಿಮ ಚೌಕಟ್ಟನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದನೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವೆ ಹೇಳಿಕೆ ನೀಡಿದ್ದು, ಇದು ಭಾರತಕ್ಕೆ ಬಲ ತುಂಬಲಿದೆ ಎಂದಿದ್ದಾರೆ.
ನ್ಯಾಷನಲ್ ಡಿಟರ್ಮೈನ್ಡ್ ಕಾಂಟ್ರಿಬ್ಯೂಷನ್ (ಎನ್ಡಿಸಿ) ಗುರಿಯನ್ನು ತಲುಪುವ ನಿಟ್ಟಿನಲ್ಲಿ ಬಲತುಂಬಲಿದೆ, ಹಾಗೆಯೇ ಜಾಗತಿಕ ಹಾಗೂ ಸ್ಥಳೀಯವಾಗಿ ಹೂಡಿಕೆದಾರರನ್ನು ಈ ಯೋಜನೆ ಆಕರ್ಷಿಸಲಿದೆ ಎಂದು ಕೂಡಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇದು ನಮ್ಮ ಆರ್ಥಿಕತೆಗೆ ಸಹಾಯಕವಾಗಿದೆ. ಹಸಿರು ಯೋಜನೆಗಳಿಗೆ ಸಂಪನ್ಮೂಲವನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ದೇಶದಲ್ಲಿ ಈಗ ಸವರನ್ ಗ್ರೀನ್ ಬಾಂಡ್ ಅನ್ನು ಜಾರಿ ಮಾಡಲಾಗುತ್ತದೆ ಎಂದು ಕೂಡಾ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಷ್ಟಕ್ಕೂ ದೇಶದ ಈ ಮೊದಲ ಸವರನ್ ಗ್ರೀನ್ ಬಾಂಡ್ ಎಂದರೇನು ಎಂದು ನಿಮಗೆ ತಿಳಿದಿದೆಯೇ, ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ..

ಸವರನ್ ಗ್ರೀನ್ ಬಾಂಡ್ ಎಂದರೇನು?
ಹವಾಮಾನ ಬದಲಾವಣೆ, ಹವಾಮಾನ ಸಂಬಂಧಿತ ಯೋಜನೆಗಳಿಗೆ ನಿಧಿಯನ್ನು ಸಂಗ್ರಹ ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಸವರನ್ ಗ್ರೀನ್ ಬಾಂಡ್ ಅನ್ನು ಮಾರಾಟ ಮಾಡುತ್ತದೆ. ಈ ಸವರನ್ ಗ್ರೀನ್ ಬಾಂಡ್ ಹೊಂದಿರುವವರು ತೆರಿಗೆ ವಿನಾಯಿತಿಯನ್ನು ಕೂಡಾ ಪಡೆಯಲು ಸಾಧ್ಯವಾಗುತ್ತದೆ. ಯಾರಿಗೆ ಹವಾಮಾನ ಹಾಗೂ ವಾತಾವರಣಕ್ಕೆ ಸಂಬಂಧಿಸಿದ ಹಸಿರು ಯೋಜನೆಗಳ ಮೇಲೆ ಆಸಕ್ತಿ ಇದೆಯೋ, ಆ ಹೂಡಿಕೆದಾರರು ಈ ಸವರನ್ ಗ್ರೀನ್ ಬಾಂಡ್ ಮೇಲೆ ಹೂಡಿಕೆ ಮಾಡಬಹುದು.
ಈ ಸವರನ್ ಗ್ರೀನ್ ಬಾಂಡ್ ಹೊರತಾಗಿ ದೇಶದಲ್ಲಿ 2007ರಲ್ಲಿ ಮೊದಲ ಬಾರಿಗೆ ಗ್ರೀನ್ ಬಾಂಡ್ ಅನ್ನು ಪರಿಚಯಪಡಿಸಲಾಗಿದೆ. ಹವಾಮಾನ ಸಂಬಂಧಿತ ಯೋಜನೆಗೆ ಹೂಡಿಕೆಯನ್ನು ಹೆಚ್ಚಿಸುವ ಈ ಗ್ರೀನ್ ಬಾಂಡ್ಗಳು ಆರ್ಥಿಕ ಅಸ್ತ್ರವಾಗಿದೆ. ಬೇರೆ ಬಾಂಡ್ಗಳಿಗೆ ಹೋಲಿಕೆ ಮಾಡಿದಾಗ ಸಾಮಾನ್ಯವಾಗಿ ಈ ಗ್ರೀನ್ ಬಾಂಡ್ಗಳಿಗೆ ಹೆಚ್ಚು ದುಬಾರಿಯಾಗಿರಲಾರದು. ಕಡಿಮೆ ಮೊತ್ತಕ್ಕೆ ಈ ಗ್ರೀನ್ ಬಾಂಡ್ಗಳು ಲಭ್ಯವಿರುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications