ಭಾರತದ ಆರ್ಥಿಕತೆಯ ಹರಿಕಾರ ಡಾ. ಮನಮೋಹನ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಹೌದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದಕ್ಕೂ ಮುನ್ನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಂತಿಮ ನಮನ ಸಲ್ಲಿಸಿದ ನಂತರ, ಡಾ. ಸಿಂಗ್ ಅವರ ಅಂತಿಮ ಯಾತ್ರೆಯು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಯಿತು.
ಮೂರನೇ ಮೋತಿಲಾಲ್ ನಗರದಲ್ಲಿರುವ ಮನಮೋಹನ್ ಸಿಂಗ್ ಅವರ ನಿವಾಸದಿಂದ ಪಾರ್ಥೀವ ಶರೀರವನ್ನು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ತರಲಾಯಿತು. ಅಲ್ಲಿ ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದ ಬಳಿಕ ಮೆರವಣಿಗೆ ಮೂಲಕ ನಿಗಮಬೋಧ್ ಘಾಟ್ಗೆ ಕೊಂಡೊಯ್ಯಲಾಯಿತು. ಬಳಿಕ ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು, ಶ್ಲೋಕ ಪಠಣದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಯಿತು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
ರಾಜನೀತಿ ಮತ್ತು ಆರ್ಥಿಕ ಸುಧಾರಣೆಗಳಿಗೆ ಹೆಸರಾದ ಡಾ. ಸಿಂಗ್ ಅವರು 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು 1991 ರಲ್ಲಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದರು. ಅವರು ಗುರುವಾರ ದೆಹಲಿಯ ಏಮ್ಸ್ನಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು.
ಅವರ ಅಂತಿಮ ಸಂಸ್ಕಾರದ ಹಿನ್ನೆಲೆಯಲ್ಲಿ ಅವರ ಸ್ಮಾರಕದ ಮೇಲೆ ಗಲಾಟೆ ನಡೆಯುತ್ತಿದೆ. ಇತರ ಮಾಜಿ ಪ್ರಧಾನಿಗಳಂತೆಯೇ ಡಾ.ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಅವರ ಸ್ಮಾರಕವನ್ನು ಕಾಂಗ್ರೆಸ್ ಬಯಸಿದೆ. ಆದಾಗ್ಯೂ, ಕೇಂದ್ರವು ಕೊಳಕು ರಾಜಕೀಯ ಆಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತು.
ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು, ಶ್ಲೋಕ ಪಠಣದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಭೂತಾನ್ ದೊರೆ ಜಿಗ್ಮ್ ಖೇಸರ್ ಹಾಗೂ ಅವರ ಪತ್ನಿ ರಾಣಿ ಜೆಟ್ಸುನ್ ಪೆಮಾ ವಾಂಗ್ಚುಕ್ ಕೂಡ ಭಾಗಿಯಾಗಿ, ಅಂತಿಮ ನಮನ ಸಲ್ಲಿಸಿದರು.


Click it and Unblock the Notifications