ಭಾರತದ ಆರ್ಥಿಕತೆಯ ಹರಿಕಾರ ಡಾ. ಮನಮೋಹನ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಹೌದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದಕ್ಕೂ ಮುನ್ನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಂತಿಮ ನಮನ ಸಲ್ಲಿಸಿದ ನಂತರ, ಡಾ. ಸಿಂಗ್ ಅವರ ಅಂತಿಮ ಯಾತ್ರೆಯು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಯಿತು.
ಮೂರನೇ ಮೋತಿಲಾಲ್ ನಗರದಲ್ಲಿರುವ ಮನಮೋಹನ್ ಸಿಂಗ್ ಅವರ ನಿವಾಸದಿಂದ ಪಾರ್ಥೀವ ಶರೀರವನ್ನು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ತರಲಾಯಿತು. ಅಲ್ಲಿ ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದ ಬಳಿಕ ಮೆರವಣಿಗೆ ಮೂಲಕ ನಿಗಮಬೋಧ್ ಘಾಟ್ಗೆ ಕೊಂಡೊಯ್ಯಲಾಯಿತು. ಬಳಿಕ ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು, ಶ್ಲೋಕ ಪಠಣದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಯಿತು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
ರಾಜನೀತಿ ಮತ್ತು ಆರ್ಥಿಕ ಸುಧಾರಣೆಗಳಿಗೆ ಹೆಸರಾದ ಡಾ. ಸಿಂಗ್ ಅವರು 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು 1991 ರಲ್ಲಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದರು. ಅವರು ಗುರುವಾರ ದೆಹಲಿಯ ಏಮ್ಸ್ನಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು.
ಅವರ ಅಂತಿಮ ಸಂಸ್ಕಾರದ ಹಿನ್ನೆಲೆಯಲ್ಲಿ ಅವರ ಸ್ಮಾರಕದ ಮೇಲೆ ಗಲಾಟೆ ನಡೆಯುತ್ತಿದೆ. ಇತರ ಮಾಜಿ ಪ್ರಧಾನಿಗಳಂತೆಯೇ ಡಾ.ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಅವರ ಸ್ಮಾರಕವನ್ನು ಕಾಂಗ್ರೆಸ್ ಬಯಸಿದೆ. ಆದಾಗ್ಯೂ, ಕೇಂದ್ರವು ಕೊಳಕು ರಾಜಕೀಯ ಆಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತು.
ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು, ಶ್ಲೋಕ ಪಠಣದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಭೂತಾನ್ ದೊರೆ ಜಿಗ್ಮ್ ಖೇಸರ್ ಹಾಗೂ ಅವರ ಪತ್ನಿ ರಾಣಿ ಜೆಟ್ಸುನ್ ಪೆಮಾ ವಾಂಗ್ಚುಕ್ ಕೂಡ ಭಾಗಿಯಾಗಿ, ಅಂತಿಮ ನಮನ ಸಲ್ಲಿಸಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications