ಟಾಟಾ ಸನ್ಸ್ ಸಂಸ್ಥೆ ಮಾಜಿ ಚೇರ್ಮನ್ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ಸಮೀಪ ಸೈರಸ್ ಮಿಸ್ತ್ರಿ ಅವರಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿರುವ, ಅಪಘಾತದಲ್ಲಿ ಸೈರಸ್ ಮಿಸ್ತ್ರೀ ಮೃತಪಟ್ಟಿದ್ದಾರೆ.
ಇನ್ನು ಮಿಸ್ತ್ರೀ ಜೊತೆಗಿದ್ದ ಮೂವರು ಗಾಯಗೊಂಡಿದ್ದಾರೆ. ಮಿಸ್ತ್ರಿ ಅವರ ಜೊತೆಗೆ ಕಾರು ಚಾಲಕ ಸೇರಿದಂತೆ ಇನ್ನಿಬ್ಬರು ಪ್ರಯಾಣಿಸುತ್ತಿದ್ದು ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, "ಮಿಸ್ತ್ರಿ ಅವರು ಅಹಮದಾಬಾದಿನಿಂದ ಮುಂಬೈ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಸುಮಾರು 3.15ಕ್ಕೆ ಅಪಘಾತ ನಡೆದಿದ್ದು, ಸೂರ್ಯ ನದಿಯ ಮೇಲಿನ ಸೇತುವೆ ಬಳಿ ಅಪಘಾತ ಸಂಭವಿಸಿದೆ,'' ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಸೈರಸ್ ಮಿಸ್ತ್ರಿ ವೃತ್ತಿ ಜೀವನ
2011ರಲ್ಲಿ ಟಾಟಾ ಮೂಹದ ಸಾರಥಿಯಾಗಿ ಸೈರಸ್ ಮಿಸ್ತ್ರಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಳಿಕ ಹಲವಾರು ಭಿನ್ನಾಭಿಪ್ರಾಯದಿಂದಾಗಿ ಸಮೂಹವನ್ನು ತೊರೆದಿದ್ದರು. ಅಕ್ಟೋಬರ್ 24, 2016 ರಂದು ಟಾಟಾ ಸನ್ಸ್ ನ ಅಧ್ಯಕ್ಷ ಹುದ್ದೆಯಿಂದ ಸೈರಸ್ ಮಿಸ್ತ್ರಿ ವಜಾ ನೀಡಿದ್ದು, ರತನ್ ಟಾಟಾ ಮಧ್ಯಂತರ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ಅಕ್ಟೋಬರ್ 25, 2016ರಲ್ಲಿ ಟಾಟಾ ಟ್ರಸ್ಟಿಗಳ ನೆರಳಿನಂಥ ನಿಯಂತ್ರಣ ಇದೆ ಎಂದು ಸೈರಸ್ ಮಿಸ್ತ್ರಿ ಟಾಟಾ ಸನ್ಸ್ ಆಡಳಿತ ಮಂಡಳಿಗೆ ಪತ್ರ ಬರೆದಿದ್ದರು. ಡಿಸೆಂಬರ್ 19, 2016ರಂದು ಟಾಟಾ ಗ್ರೂಪ್ ಎಲ್ಲ ಸಂಸ್ಥೆಗಳ ನಿರ್ದೇಶಕ ಹುದ್ದೆಗೆ ಸೈರಸ್ ಮಿಸ್ತ್ರಿ ರಾಜೀನಾಮೆ ನೀಡಿದ್ದಾರೆ. ಫೆಬ್ರವರಿ 6, 2017ರಂದು ಟಾಟಾ ಸನ್ಸ್ ಆಡಳಿತ ಮಂಡಳಿ ನಿರ್ದೇಶಕ ಹುದ್ದೆಯಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾ ಮಾಡಲಾಯಿತು. ಇದನ್ನು ಪ್ರಶ್ನಿಸಿ ಸೈರಸ್ ಮಿಸ್ತ್ರಿ ಅರ್ಜಿಯನ್ನು ಕೂಡಾ ಸಲ್ಲಿಕೆ ಮಾಡಿದ್ದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications