ಪುರಂದರ್ ವಿಮಾನ ನಿಲ್ದಾಣವು ಮಹಾರಾಷ್ಟ್ರದ ಪುಣೆಯಲ್ಲಿ ನಿರ್ಮಿಸಲು ಯೋಜಿಸಲಾದ ಹೊಸದಾಗಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣವಾಗಿದೆ.ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಇದು ಹೆಚ್ಚಿನ ರಿಯಲ್ ಎಸ್ಟೇಟ್ ಡೆವಲಪರ್ಗಳು ಮತ್ತು ಹೂಡಿಕೆದಾರರನ್ನು ನಿರೀಕ್ಷೆಯಿದೆ.ವಿಮಾನ ನಿಲ್ದಾಣಕ್ಕೆ ಸರ್ಕಾರ ಭೂಸ್ವಾಧೀನಕ್ಕೆ ನಾಲ್ವರು ಅಧಿಕಾರಿಗಳ ನೇಮಕ ಮಾಡಲಾಗಿದೆ.
ಹೌದು,ಹೊಸ ಪುಣೆ ವಿಮಾನ ನಿಲ್ದಾಣ ಪ್ರಸ್ತಾವಿತ ಪುರಂದರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಮಹಾರಾಷ್ಟ್ರ ಕೈಗಾರಿಕಾ ಇಲಾಖೆಯು ಏಳು ಹಳ್ಳಿಗಳಿಂದ ಭೂಮಿಯನ್ನು ಅಧಿಸೂಚನೆ ಮಾಡಿದ ಒಂದು ವಾರದ ನಂತರ, ಭೂಸ್ವಾಧೀನ ಪ್ರಕ್ರಿಯೆ ಮತ್ತು ಇತರ ಪ್ರಮುಖ ಬೆಳವಣಿಗೆಗಳು ಕುರಿತು ಚರ್ಚಿಸಲು ಪುಣೆ ವಿಭಾಗೀಯ ಆಯುಕ್ತ ಚಂದ್ರಕಾಂತ್ ಪುಲ್ಕುಂದ್ವಾರ್ ಅವರು ನಿನ್ನೆ ಉನ್ನತ ಅಧಿಕಾರ ಸಮಿತಿ ಸಭೆಯನ್ನು ಕರೆದರು.

ಏಳು ಹಳ್ಳಿಗಳಲ್ಲಿ 2,753 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಮೇಲ್ವಿಚಾರಣೆಗೆ ನಾಲ್ವರು ಭೂಸ್ವಾಧೀನ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಲಾಗಿದೆ.ಪುರಂದರ ತಾಲ್ಲೂಕಿನಲ್ಲಿರುವ ಎಲ್ಲಾ 3,352 ಭೂ ಸರ್ವೆ ಸಂಖ್ಯೆಗಳಿಗೆ ಭೂ ಅಳತೆಗಳನ್ನು ನಡೆಸಲು ಖಾಸಗಿ ಏಜೆನ್ಸಿಯನ್ನು ನೇಮಿಸಲಾಗುವುದು. ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯು ಆರು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.
ಇನ್ನೂ ಪುಣೆ ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪುಣೆ ಜಿಲ್ಲಾಧಿಕಾರಿ ಜಿತೇಂದ್ರ ದುಡಿ, ವಿಭಾಗೀಯ ಆಯುಕ್ತರ ಕಚೇರಿಯ ಹಿರಿಯ ಅಧಿಕಾರಿಗಳು,ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಅಧಿಕಾರಿಗಳು ಮತ್ತು ಪುರಂದರ್ ತಾಲೂಕು ಆಡಳಿತ ಭಾಗವಹಿಸಿದ್ದರು.
ಯೋಜನೆಯ ಪಾರದರ್ಶಕ ಮತ್ತು ಸಮಯಕ್ಕೆ ಅನುಗುಣವಾಗಿ ಪ್ರಕ್ರಿಯೆಯ ಬಗ್ಗೆಯೂ ಅಧಿಕಾರಿಗಳು ಚರ್ಚಿಸಿದರು.
ಸುಗಮ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು, ಪ್ರತಿ ಹಂತದಲ್ಲೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲಾಗುವುದು. ಮುಂದಿನ ಆರು ತಿಂಗಳೊಳಗೆ ಭೂಸ್ವಾಧೀನವನ್ನು ಪೂರ್ಣಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಪುಣೆ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಹೇಳಿದರು.
ಪುಣೆ ವಿಭಾಗೀಯ ಆಯುಕ್ತರ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು, ಹೆಸರು ಬಹಿರಂಗಪಡಿಸಲು ಇಚ್ಛಿಸದ ಸ್ಥಿತಿಯಲ್ಲಿ ಮಾತನಾಡಿದೆ ಭೂ ಸಮೀಕ್ಷೆ ಮತ್ತು ಅಳತೆ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಾಲ್ವರು ಭೂಸ್ವಾಧೀನ ಅಧಿಕಾರಿಗಳನ್ನು ನೇಮಿಸಿದ ನಂತರ, ಜವಾಬ್ದಾರಿಗಳನ್ನು ವಿಂಗಡಿಸಲಾಗುತ್ತದೆ ಮತ್ತು ಭೂ ಮಾಪನಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗುತ್ತದೆ.
MIDC ಮಾಪನ ಪ್ರಕ್ರಿಯೆಗಾಗಿ ಖಾಸಗಿ ಏಜೆನ್ಸಿಯನ್ನು ನೇಮಿಸಿಕೊಳ್ಳುತ್ತದೆ, ಅದರ ನಂತರ ನಿಜವಾದ ಸ್ವಾಧೀನ ಪ್ರಾರಂಭವಾಗುತ್ತದೆ. ಭೂಸ್ವಾಧೀನದ ಅಂದಾಜು ವೆಚ್ಚ 3,500 ಕೋಟಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.
ರೈತರ ಪಾಲ್ಗೊಳ್ಳುವಿಕೆಯ ಅಗತ್ಯವನ್ನು ಒತ್ತಿ ಹೇಳುತ್ತಾ, ಅಧಿಕಾರಿ ಮತ್ತಷ್ಟು ಹೇಳಿದರು,ರೈತರು ಮತ್ತು ಗ್ರಾಮಸ್ಥರೊಂದಿಗೆ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಸಕಾರಾತ್ಮಕ ಸಂವಾದವನ್ನು ನಿರ್ವಹಿಸುವುದು ಆದ್ಯತೆಯಾಗಿದೆ. ಅವರಿಗೆ ಕಿರುಕುಳ ನೀಡಲಾಗುವುದಿಲ್ಲ ಮತ್ತು ಭೂಮಿಯ ಮೌಲ್ಯಮಾಪನ ಮತ್ತು ಪರಿಹಾರವನ್ನು ನ್ಯಾಯಯುತವಾಗಿ ಕೈಗೊಳ್ಳಲಾಗುವುದು ಎಂದು ನಾವು ಅವರಿಗೆ ಭರವಸೆಯನ್ನು ನೀಡಲು ಹೇಳಿದೆ.
ಮಾರ್ಚ್ 10, 2025 ರಂದು, ಮಹಾರಾಷ್ಟ್ರ ಸರ್ಕಾರದ ಕೈಗಾರಿಕೆಗಳು, ಇಂಧನ, ಕಾರ್ಮಿಕ ಮತ್ತು ಗಣಿಗಾರಿಕೆ ಇಲಾಖೆಯು ಜಂಟಿ ಕಾರ್ಯದರ್ಶಿ ಎಸ್.ಎಲ್. ಪುಲ್ಕುಂದ್ವಾರ್ ಅವರು ಸಹಿ ಮಾಡಿದ ಅಧಿಸೂಚನೆಯನ್ನು ಹೊರಡಿಸಿತು, ಪುರಂದರ್ ತಾಲ್ಲೂಕಿನ ಏಳು ಹಳ್ಳಿಗಳಲ್ಲಿ 3,352 ಭೂ ಸರ್ವೆ ಸಂಖ್ಯೆಗಳಲ್ಲಿ 2,753.053 ಹೆಕ್ಟೇರ್ ಭೂಮಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೈಗಾರಿಕಾ ಪ್ರದೇಶವೆಂದು ಅಧಿಕೃತವಾಗಿ ಗೊತ್ತುಪಡಿಸಲಾಯಿತು ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಇನ್ನೂ ಹೆಚ್ಚುವರಿಯಾಗಿ, ರಾಜ್ಯ ಅರಣ್ಯ ಇಲಾಖೆಯಿಂದ 70 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು, ಪುರಂದರ್ ವಿಮಾನ ನಿಲ್ದಾಣ ಯೋಜನೆಗಾಗಿ ಒಟ್ಟು ಸ್ವಾಧೀನ 2,823 ಹೆಕ್ಟೇರ್ಗಳಿಗೆ ತಲುಪುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications