ಮಾರ್ಚ್ 18, 2026 ರಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಆರಂಭ. ಈಗಾಗಲೇ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಯ ಸಿದ್ಧತೆಯಲ್ಲಿದ್ದಾರೆ. ಇದೀಗ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ, ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ನಿಗಮ (KSRTC) ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಹೌದು, ರಾಜ್ಯಾದ್ಯಂತ ಎಸ್ಎಲ್ಸಿ ಬರೆಯುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ದಿನಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಘೋಷಣೆ ಮಾಡಲಾಗಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!
ಮಾರ್ಚ್ 18, 2026 ರಿಂದ ಏಪ್ರಿಲ್ 2, 2026 ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಅಂದರೆ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಉಚಿತವಾಗಿ ಕೆಎಸ್ಆರ್ಟಿಸಿ ಅಥವಾ ಅದರಡಿಯಲ್ಲಿ ಕಾರ್ಯನಿರ್ವಹಿಸುವ ಇತರ ಸಾರಿಗೆ ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಫ್ರೀಯಾಗಿ ಹೋಗೋದು ಹೇಗೆ?
ವಿದ್ಯಾರ್ಥಿಗಳು ಬಸ್ಗಳಲ್ಲಿ ತಮ್ಮ ಹಾಲ್ ಟಿಕೆಟ್ ತೋರಿಸಿದ್ರೆ ಸಾಕು, ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಮರಳಿ ಬರಲು ಅವಕಾಶ ನೀಡಲಾಗಿದೆ. ಪರೀಕ್ಷಾ ಸಮಯದಲ್ಲಿ ಪ್ರಯಾಣದ ಒತ್ತಡ ಕಡಿಮೆ ಮಾಡಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಲುಪುವಂತೆ ಮಾಡುವುದೇ ಈ ಕ್ರಮದ ಮುಖ್ಯ ಉದ್ದೇಶವಾಗಿದೆ.
ಮಾರ್ಚ್ 18, 2026 ರಂದು ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ-1 ರಂದು ಆರಂಭವಾಗಲಿದೆ. ರಾಜ್ಯದ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSRAB) ನಿಗದಿಪಡಿಸಿದಂತೆ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2, 2026 ರವರೆಗ ನಡೆಯಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಅನ್ನುವಂತಹದ್ದು, ವಿದ್ಯಾರ್ಥಿಯ ಶೈಕ್ಷಣಿಕ ಜೀವನಲ್ಲಿ ಒಂದು ಮಹತ್ವದ ಘಟ್ಟವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಪಾಸ್ ಮಾಡಬೇಕೆಂದರೆ ಸರಿಯಾದ ತಯಾರಿ, ಶಿಸ್ತು, ಆತ್ಮವಿಶ್ವಾಸ ಬಹಳ ಅಗತ್ಯ. ಆದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವವರು, ಓದಿಗಾಗಿ ಒಂದು ಟೈಂ ಟೇಬಲ್ ರಚಿಸಬೇಕು. ಆ ನಂತರ ಪ್ರತಿದಿನ 6 ರಿಂದ 8 ಗಂಟೆಗಳವರೆಗೆ ಓದುವುದನ್ನು ರೂಢಿಸಿಕೊಳ್ಳಿ. ಎಲ್ಲಾ ವಿಷಯಗಳಿಗೂ ಓದಲು ಸಮಾನ ಸಮಯ ನಿಗದಿಪಡಿಸಿ. ಅಲ್ಲದೇ ನಿಮಗೆ ಯಾವುದು ಕಷ್ಟ ಎನಿಸುತ್ತದೆಯೋ, ಅದನ್ನು ಹೆಚ್ಚು ಪ್ರಾಕ್ಟೀಸ್ ಮಾಡಿ.
ಇನ್ನು ಪ್ರತೀ ವಿಷಯಗಳಲ್ಲೂ ಪರೀಕ್ಷೆ ಬರೆಯುವಾಗ ಬಹಳ ಸ್ವಚ್ಛವಾಗಿ, ಪ್ರಶ್ನೆಗೆ ತಕ್ಕ ಉತ್ತರ ಬರೆಯಿರಿ. ಉತ್ತರ ಬರೆಯುವ ಮೊದಲು ಪ್ರಶ್ನೆಯನ್ನು ಮೊದಲು ಸರಿಯಾಗಿ ಓದಿಕೊಳ್ಳಿ. ಆ ನಂತರ ಹಂತ ಹಂತವಾಗಿ, ಸುಲಭವಾಗಿ ಅರ್ಥವಾಗುವಂತೆ ಉತ್ತರಗಳನ್ನು ಬರೆಯಲು ಆರಂಭಿಸಿ. ಪರೀಕ್ಷಾ ದಿನಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಆದ್ದರಿಂದ ನಾಳೆಯ ಪರೀಕ್ಷೆಗಾಗಿ ಇಂದು ಅಭ್ಯಾಸ ಮಾಡಿ. ಆಲ್ ದಿ ಬೆಸ್ಟ್...
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Myauru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Tumkur Railway: ತುಮಕೂರಿನ ಈ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿ; ಸುಮಾರು 25 ರೈಲುಗಳ ಸಂಚಾರ ವ್ಯತ್ಯಯ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

LPG cylinder shortage: ಬೆಂಗಳೂರಲ್ಲಿ 1,700ರೂ. ಸಿಲಿಂಡರ್ 5,000 ರೂ.ಗೆ ಮಾರಾಟ..ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Bidadi Township: ಬಿಡದಿ ಟೌನ್ಶಿಪ್ ಯೋಜನೆ; 7,000 ಎಕರೆಗೂ ಅಧಿಕ ಭೂಸ್ವಾಧೀನಕ್ಕೆ ಸರ್ಕಾರ ಸಿದ್ಧ

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ



Click it and Unblock the Notifications