ಬೆಂಗಳೂರು, ಅಕ್ಟೋಬರ್ 22: ಶೀಘ್ರದಲ್ಲೇ ಕೇಂದ್ರ ಸರ್ಕಾರ ರಾಷ್ಟ್ರೀಯ ಉದ್ಯೋಗ ನೀತಿ ಜಾರಿಗೆ ತರಲಿದ್ದು, ಉದ್ಯೋಗದ ವ್ಯಾಪ್ತಿಗೆ ಗಿಗ್ ಕಾರ್ಮಿಕರು(ನಿರ್ದಿಷ್ಟ ಅವಧಿಯ ಕಾರ್ಮಿಕರು), ಅಂಗನವಾಡಿ ಕಾರ್ಯಕರ್ತರು, ಫ್ಲಾಟ್ ಫಾರಂ ಕಾರ್ಮಿಕರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ.
ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಲ್ಲಿ ಕೆಲಸ ಮಾಡುವ ಕೆಲಸಗಾರರಿಗೂ ರಜೆ ಸೇರಿದಂತೆ, ವಿವಿಧ ಸೌಲಭ್ಯಗಳನ್ನು ಮುಂದಿನ ದಿನಗಳಲ್ಲಿ ನಿರೀಕ್ಷಿಸಬಹುದಾಗಿದೆ.
ಹಲವು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಹಲವರು ತಮ್ಮನ್ನು ಉದ್ಯೋಗ ನಿಯಮ ವ್ಯಾಪ್ತಿಗೆ ಒಳಪಡಿಸುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ.

ದೇಶದಲ್ಲಿ ಹೊಸ ಹೊಸ ರೀತಿಯ ಉದ್ಯೋಗಳು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಉದ್ಯೋಗದ ವ್ಯಾಖ್ಯಾನವನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ನಿಯಮ ಜಾರಿಯಾದರೇ ಓಲಾ, ಊಬರ್, ಜೊಮ್ಯಾಟೋ, ಸ್ವಿಗ್ಗಿ ಮುಂತಾದ ಆ್ಯಪ್ ಬೇಸ್ ನಲ್ಲಿ ಕೆಲಸ ಮಾಡುವ ನೌಕರರು ಇದರ ವ್ಯಾಪ್ತಿಗೆ ಬರಲಿದ್ದಾರೆ. ಈ ನಿಯಮದಡಿ ಗಿಗ್ ಕಾರ್ಮಿಕರು ಕನಿಷ್ಟ ವೇತನ, ವಾರದ ರಜೆ , ಪಿಎಫ್ ಹಾಗೂ ಇಎಸ್ ಐ ಸೌಲಭ್ಯ ಪಡೆಯಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಮತ್ತು ಅಕ್ಟೋಬರ್ 30 ರ ಉಪಚುನಾವಣೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೆಬ್ಬಾರ್ ಹೇಳಿದರು.
ಸೆಪ್ಟೆಂಬರ್ ತಿಂಗಳಿನಲ್ಲಿ ಶುರುವಾದ ಅಸಂಘಟಿತ ಕಾರ್ಮಿಕರಿಗಾಗಿ ಕರ್ನಾಟಕದ 7 ಲಕ್ಷಕ್ಕೂ ಹೆಚ್ಚು ಜನರು ಇ-ಶ್ರಾಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ 1.6 ಕೋಟಿ ಅಸಂಘಟಿತ ಕಾರ್ಮಿಕರಿದ್ದಾರೆ ಎಂದು ಅಧಿವೇಶನದಲ್ಲಿ ಹೆಬ್ಬಾರ್ ಮಾಹಿತಿ ನೀಡಿದ್ದರು.
ಪ್ರಸ್ತುತ, ಗಿಗ್ ಕೆಲಸಗಾರರು, ಆಹಾರ ವಿತರಣಾ ಏಜೆಂಟ್ಗಳು ಮತ್ತು ಮೊಬೈಲ್-ಅಪ್ಲಿಕೇಶನ್ ಆಧಾರಿತ ಚಾಲಕರು ಕಂಪನಿಯ ಉದ್ಯೋಗಿಗಳಲ್ಲ-ಅವರಿಗೆ ಪ್ರತಿ ಡೆಲಿವರಿ ಮತ್ತು ಟ್ರಿಪ್ ಗೆ ಹಣ ಪಾವತಿಸಲಾಗುತ್ತದೆ ಮತ್ತು ಅವರು ಇಂಧನದ ವೆಚ್ಚವನ್ನು ಭರಿಸಬೇಕಾಗಿದೆ.
ಕೇಂದ್ರ ಸರ್ಕಾರ ನೀತಿಯನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ, ಕರ್ನಾಟಕವು ಮೊಬೈಲ್ ಆಧಾರಿತ ಟ್ಯಾಕ್ಸಿ, ಆಟೋರಿಕ್ಷಾ ಚಾಲಕರು, ವಿತರಣಾ ಏಜೆಂಟ್ಗಳು ಮತ್ತು ಆಹಾರ ವಿತರಣಾ ಏಜೆಂಟ್ಗಳ ಜಿಲ್ಲಾವಾರು ಸಮೀಕ್ಷೆಯನ್ನು ನಡೆಸುತ್ತೇವೆ.
ಫಲಾನುಭವಿಗಳು ಸರಿಯಾದ ಮಾಹಿತಿ ಹೊಂದಿದ್ದರೆ ಮಾತ್ರ ನಾವು ಅವರಿಗೆ ಸೌಲಭ್ಯಗಳನ್ನು ಒದಗಿಸಬಹುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ 'ಇಂಡಿಯನ್ ಎಕ್ಸ್ಪ್ರೆಸ್ಗೆ' ತಿಳಿಸಿದ್ದಾರೆ.
More From GoodReturns

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gruha Lakshmi: ಅಯ್ಯಯ್ಯೊ..79 ಕೋಟಿ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮಾ… 2.3 ಲಕ್ಷ ಫಲಾನುಭವಿಗಳ ಖಾತೆ ತಡೆ!

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



Click it and Unblock the Notifications