ಜಾಗತಿಕ ಮಟ್ಟದ ಉತ್ಪಾದನೆ, ಪೂರೈಕೆ ಜಾಲ, ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೆ COVID- 19 ಭಾರೀ ಪೆಟ್ಟು ನೀಡುತ್ತದೆ. 2020ರಲ್ಲಿ ಜಾಗತಿಕ ಆರ್ಥಿಕ ಕುಸಿತ ಉಂಟಾಗಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಹೇಳಿದೆ. ಭಾರತದ ಬೆಳವಣಿಗೆಯ ಮೇಲೂ ಕೆಟ್ಟ ಪರಿಣಾಮ ಇರಲಿದ್ದು, ಹಣದುಬ್ಬರವನ್ನು ಸರಿದೂಗಿಸಬೇಕಾಸ ಅಪಾಯ ಇದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.
2020ರಲ್ಲಿ ಜಾಗತಿಕ ಆರ್ಥಿಕ ಕುಸಿತ ಆಗಬಹುದು. ಕೊರೊನಾ ನಂತರ ಮುಂದೇನು ಎಂಬುದಕ್ಕೆ ಉತ್ತರವಾಗಿ ಅದು ಕಾಣಿಸುತ್ತಿದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಆಗುತ್ತಿದೆ. ಇದು ಒಂದು ವೇಳೆ ಸ್ಥಿರವಾದರೆ ದೇಶದ ವ್ಯಾಪಾರ- ವ್ಯವಹಾರ ಸ್ಥಿರವಾಗಬಹುದು. ಆದರೆ ಇದರಿಂದ ದೊಡ್ಡ ಮಟ್ಟದ ಲಾಭ ಆಗಲಿಕ್ಕಿಲ್ಲ. ಲಾಕ್ ಡೌನ್ ಹಾಗೂ ಬಾಹ್ಯ ಬೇಡಿಕೆ ಇಳಿದಿರುವುದರಿಂದ ಲಾಭ ಆಗಲಿಕ್ಕಿಲ್ಲ.
ಕೊರೊನಾ ಎಷ್ಟು ಬೇಗ ನಿಯಂತ್ರಣಕ್ಕೆ ಬರುತ್ತದೋ ಅದರ ಮೇಲೆ ದೇಶೀಯ ಪ್ರಗತಿ ಅವಲಂಬಿಸಿದೆ. ಜತೆಗೆ ಆರ್ಥಿಕ ಚಟುವಟಿಕೆ ಕೂಡ ಸಾಮಾನ್ಯ ಸ್ಥಿತಿಗೆ ಬರುತ್ತದೆ. ಆರ್ ಬಿಐ ಹಾಗೂ ಸರ್ಕಾರ ತೆಗೆದುಕೊಂಡ ಆರ್ಥಿಕ ಉತ್ತೇಜನ ಕ್ರಮಗಳು ದೇಶೀಯ ಬೇಡಿಕೆ ಮೇಲಿನ ಪ್ರತಿಕೂಲ ಪರಿಣಾಮ ತಡೆಯುತ್ತದೆ.

ಕಚ್ಚಾ ತೈಲ ಬೆಲೆ ಕಡಿಮೆ ಇರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುವ ಸಾಧ್ಯತೆ ಇಲ್ಲ. ಹಣದುಬ್ಬರ ದರವು ನಿಯಂತ್ರಣದಲ್ಲಿ ಇರುತ್ತದೆ. ಮುಂಗಾರು ಸಾಮಾನ್ಯವಾಗಿ ಆಗಬಹುದು ಹಾಗೂ ಯಾವುದೇ ಸಮಸ್ಯೆ ಆಗಲಿಕ್ಕಿಲ್ಲ ಎನ್ನುವ ಕಾರಣಕ್ಕೆ 2021ರ ಆರ್ಥಿಕ ವರ್ಷದಲ್ಲಿ ಹಣದುಬ್ಬರ ದರವು 3.6ರಿಂದ 3.8 ಪರ್ಸೆಂಟ್ ಇರಬಹುದು ಎಂದು ಆರ್ ಬಿಐ ಅಂದಾಜಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications