ಗೋಕುಲ್ ದಾಸ್ ಎಕ್ಸ್ ಪೋರ್ಟ್ಸ್ 1400ಕ್ಕೂ ಹೆಚ್ಚು ಗಾರ್ಮೆಂಟ್ ಕಾರ್ಮಿಕರ ಮೇಲೆ ಕೆಲಸ ಹೋಗುವ ತೂಗುಗತ್ತಿ ಅಲುಗಾಡುತ್ತಿದೆ. ಶ್ರೀರಂಗಪಟ್ಟಣದಲ್ಲಿ ಇರುವ ಅದರ ಘಟಕವನ್ನು ಮುಚ್ಚಿ, ಉದ್ಯೋಗ ಕಡಿತಕ್ಕೆ ನಾಂದಿ ಹಾಡಿರುವುದು ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಅಂದ ಹಾಗೆ ಅಮೆರಿಕ ಹಾಗೂ ಯುರೋಪ್ ನ ಹಲವು ಬ್ರ್ಯಾಂಡ್ ಗಳಿಗೆ ಬಟ್ಟೆಗಳನ್ನು ಉತ್ಪಾದಿಸುವ ಮತ್ತು ಪೂರೈಸುತ್ತದೆ ಗೋಕುಲ್ ದಾಸ್ ಎಕ್ಸ್ ಪೋರ್ಟ್ಸ್.
ಯುರೋ ಕ್ಲಾಥಿಂಗ್ ಕಂಪೆನಿ- II (ECG) ಸಹಿ ಹಾಕಿರುವ ನೋಟಿಸ್ ನಲ್ಲಿ, ಕೆಲಸದಿಂದ ಉದ್ಯೋಗಿಗಳನ್ನು ತೆಗೆಯುವ ಬಗ್ಗೆ ಮಾಹಿತಿ ಇದೆ. ಉಳಿದಂತೆ ಬೇರೆ ಯಾವುದೇ ವಿಷಯಗಳನ್ನು ಪ್ರಸ್ತಾಪಿಸಿಲ್ಲ. ಯುರೋ ಕ್ಲಾಥಿಂಗ್ ಕಂಪೆನಿ- II ಅನ್ನು ಜುಲೈ 1, 2010ರಲ್ಲಿ ಆರಂಭ ಮಾಡಲಾಗಿತ್ತು. ದೇಶದಲ್ಲೇ ಅತಿ ದೊಡ್ಡ ಬಟ್ಟೆ ತಯಾರಿಕೆ ಸಂಸ್ಥೆ ಇದು. ಉದ್ಯೋಗ ಕಡಿತದ ನಿರ್ಧಾರವು ಕಾರ್ಮಿಕರಲ್ಲಿ, ಕಾರ್ಮಿಕ ಒಕ್ಕೂಟಗಳಲ್ಲಿ ಸಿಟ್ಟನ್ನು ತರಿಸಿವೆ.
ಫ್ಯಾಕ್ಟರಿ ಮ್ಯಾನೇಜರ್ ಎಸ್. ಮಂಜುನಾಥ್ ಸಹಿ ಮಾಡಿರುವ ಪತ್ರದಲ್ಲಿ, ಜೂನ್ 8, 2020ರಿಂದ ಅನ್ವಯ ಆಗುವಂತೆ ಶ್ರೀರಂಗಪಟ್ಟಣ ಘಟಕದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ನಿರ್ಧರಿಸಲಾಗಿದೆ. ಕೊರೊನಾದಿಂದ ಕಂಪೆನಿಯ ವ್ಯವಹಾರ ಮತ್ತು ರಫ್ತಿನ ಮೇಲೆ ಪರಿಣಾಮ ಬೀರಿದೆ. ಆರ್ಡರ್ ಗಳು ಬಂದಿಲ್ಲ. ರೀಟೇಲ್ ಮಳಿಗೆ, ಮಾಲ್ ಗಳು ಹಾಗೂ ಇತರ ವ್ಯಾಪಾರ- ವ್ಯವಹಾರಗಳು ಮುಚ್ಚಿರುವುದರಿಂದ ಹೀಗೆ ಆಗಿದೆ ಎಂದು ತಿಳಿಸಿದೆ.

ಇನ್ನು ಭಾರತದಲ್ಲಿನ ಚಿಲ್ಲರೆ ಮಾರಾಟಗಾರರು ಕನಿಷ್ಠ ಈ ವರ್ಷದ ಕೊನೆ ತನಕ ಆರ್ಡರ್ ಗಳನ್ನು ರದ್ದು ಮಾಡಿದ್ದಾರೆ ಎಂದು ತಿಳಿಸಲಾಗಿದೆ. ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ಸುದ್ದಿ ಕೇಳಿ ನೂರಾರು ಉದ್ಯೋಗಿಗಳು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸೇರಿದಂತೆ ಇಡೀ ಭಾರತದಲ್ಲಿ ಹಲವು ಕೈಗಾರಿಕೆಗಳು ಕೊರೊನಾದ ಕಾರಣಕ್ಕೆ ಸಮಸ್ಯೆ ಎದುರಿಸುತ್ತಿವೆ. ಭವಿಷ್ಯದ ಬಗ್ಗೆ ಚಿಂತೆಗೆ ಈಡಾಗಿವೆ. ಕೊರೊನಾ ಲಾಕ್ ಡೌನ್ ದಿಂದಾಗಿ ಹತ್ತಿರಹತ್ತಿರ ಮೂರು ತಿಂಗಳ್ಯ್ ವ್ಯಾಪಾರಗಳು ಬಂದ್ ಆಗಿವೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications