ಕರಾವಳಿಗರಿಗೆ ನಿಜಕ್ಕೂ ಇದೊಂದು ಸಿಹಿಸುದ್ದಿ. ಯಾಕೆಂದರೆ ಬಹುನಿರೀಕ್ಷಿತ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಕರ್ನಾಟಕ ಜಲಸಾರಿಗೆ ಮಂಡಳಿ ಕೊನೆಗೂ ಅನುಮೋದನೆ ನೀಡಿದೆ.
ಇದು ಕರ್ನಾಟಕದಲ್ಲೇ ಮೊತ್ತ ಮೊದಲ ವಾಟರ್ ಮೆಟ್ರೋ ಯೋಜನೆಯಾಗಿದ್ದು ಇದರಿಂದ ಗುರುಪುರ ಮತ್ತು ನೇತ್ರಾವತಿ ನದಿ ಪ್ರದೇಶದ ಜನರಿಗೆ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ಈ ಯೋಜನೆಯು ಮಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಲಿದ್ದು, ಈ ಯೋಜನೆಯ ಶೀಘ್ರ ಅನುಷ್ಟಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಸಿಎಂ ಅವರ ಅಧಿಕೃತ ನಿವಾಸ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಕರ್ನಾಟಕ ಜಲಸಾರಿಗೆ ಮಂಡಳಿ ಸಭೆಯಲ್ಲಿ 'ಕರ್ನಾಟಕ ಜಲ ಸಾರಿಗೆ ನೀತಿ ೨೦೨೪' ಬಿಡುಗಡೆ ಮಾಡಲಾಯಿತು. ಈ ವೇಳೆ, ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಭಾಗವಹಿಸಿದ್ದರು. ಈ ವೇಳೆ ಸಭೆಯಲ್ಲಿ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಆರಂಭಿಸಲಿರುವ ವಾಟರ್ ಮೆಟ್ರೋ ಯೋಜನೆಯ ಸಂಬಂಧ ಪ್ರಸ್ತಾವನೆ ಮಂಡಿಸಲಾಯಿತು. ಈ ಬಗ್ಗೆ ಚರ್ಚಿಸಿ ಯೋಜನೆ ಕಾರ್ಯಗತಗೊಳಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದರು.
ಇದೇ ಸಂದರ್ಭದಲ್ಲಿ ಸಾಗರಮಾಲಾ ಯೋಜನೆಯಡಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಸಿಎಂ ಒಪ್ಪಿಗೆ ನೀಡಿದರು.
ಕೇರಳದ ಕೊಚ್ಚಿನ್ ಭಾರತದ ಪ್ರಪ್ರಥಮ ವಾಟರ್ ಮೆಟ್ರೋ ಹೊಂದಿರುವ ನಗರ. ಇದೇ ಮಾದರಿಯಲ್ಲಿ ಈ ಯೋಜನೆ ಕಾರ್ಯಗತಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ. 17 ಪಾಯಿಂಟ್ಗಳನ್ನು ಒಳಗೊಂಡ 30 ಕಿ.ಮೀ ಉದ್ದದ ಮಾರ್ಗವು ಮಂಗಳೂರಿನ ಹಲವು ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸಲಿದೆ. ಕುಳೂರು ಸೇತುವೆ, ಹೊಸ ಮಂಗಳೂರು ಬಂದರು, ಸುಲ್ತಾನ್ ಬ್ಯಾಟರಿ, ತಣ್ಣೀರುಬಾವಿ ಮತ್ತು ಹಳೆಯ ಬಂದರು ಮುಂತಾದ ಸ್ಥಳಗಳಿಗೆ ಜಲಮಾರ್ಗದ ಮೂಲಕ ಸಂಪರ್ಕ ಕಲ್ಪಿಸಲಾಗಲಿದ್ದು ಇದರಿಂಡ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಳನಾಡು ಸಾರಿಗೆ ಪ್ರಾವಾಸೋಧ್ಯಮಕ್ಕೆ ವಿಪುಲ ಅವಕಾಶವಿದೆ. ನೇತ್ರಾವತಿ ನದಿ ಹರಿಯುತ್ತಿರುವುದು ಅಡ್ಯಾರ್ ನಿಂದ ಅಳಿವೆ ಬಾಗಿಲು ವರೆಗೆ ಹಾಗೂ ಫಲ್ಗುಣಿ ನದಿ ಹರಿಯುತ್ತಿರುವ ಗುರುಪುರದಿಂದ ಆರಂಭಿಸಿ ತಣ್ಣೀರುಬಾವಿವರೆಗೆ ನದಿ ಪೂರ್ತಿಯಾಗಿ ಹರಿಯುತ್ತಿರುವುದರಿಂದ ಭಟ್ಕಳದವರೆಗೆ ಪ್ರಥಮ ಹಂತದಲ್ಲಿ ಹಲವಾರು ಕಡೆಗಳಲ್ಲಿ ನಿಲ್ಲುವ ವ್ಯವಸ್ಥೆಯಲ್ಲಿ ಸುಂದರ ಪ್ರಕೃತಿ ಕಾಣಬಹುದು. ಬೋಟ್ಗಳಿಗೂ, ಪ್ರವಾಸಿಗರಿಗೂ ತಾಣಗಳಿಗೂ ಈ ಪ್ರದೇಶಗಳು ಅತ್ಯಂತ ಸೂಕ್ತ ಎಂದು ಅಂದಾಜಿಸಲಾಗಿದೆ.
ಕೇರಳದ ಕೊಚ್ಚಿನ್ ನಲ್ಲಿ ಮೊದಲ ವಾಟರ್ ಮೆಟ್ರೋ:
ಭಾರತದಲ್ಲಿಯೇ ಮೊದಲ ಜಲ ಮೆಟ್ರೋ ಎಂಬ ಕೀರ್ತಿಗೆ ಭಾಜನವಾಗಿರುವ ಕೊಚ್ಚಿ, ಜಲಮಾರ್ಗವನ್ನು ಆಧುನಿಕ ಸಾರಿಗೆ ವ್ಯವಸ್ಥೆಯೊಂದಿಗೆ ಯಶಸ್ವಿಯಾಗಿ ಪರಿಚಯಿಸಿದೆ.2023ರ ಏಪ್ರಿಲ್ 25ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಿದ್ದು ಇದು ಅಲ್ಲಿನ ನಗರ ಸಾರಿಗೆ ಸಂಪರ್ಕಕ್ಕೆ ಒಂದು ಹೊಸ ಆಯಾಮವನ್ನು ನೀಡಿದೆ.
ಕೊಚ್ಚಿ ಜಲಸಾರಿಗೆಯಲ್ಲಿ 28 ಬೋಟ್ ಮತ್ತು ವಾಟರ್ ಮೆಟ್ರೋ ಟರ್ಮಿನಲ್ ಒಳಗೊಂಡಿದ್ದು, ಕೊಚ್ಚಿಯನ್ನು ಆವರಿಸಿರುವ ವೆಂಬನಾಡ್ ಸರೋವರದಲ್ಲಿ ಬರುವ 10 ದ್ವೀಪಗಳನ್ನು ಇದು ಸಂಪರ್ಕ ಮಾಡಲಿದೆ. ಒಟ್ಟು 76 ಕಿಲೋಮೀಟರ್ ಉದ್ದದ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಂಪೂರ್ಣ ಏರ್ ಕಂಡೀಷನ್ ಇರುವ ಈ ಮೆಟ್ರೋ ಸಾರಿಗೆಯು ಕೊಚ್ಚಿ ಮೆಟ್ರೋ ರೈಲು ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದು, ಬಸ್ ಟರ್ಮಿನಲ್ ಮತ್ತು ಮೆಟ್ರೋ ನೆಟ್ವರ್ಕ್ ಮತ್ತು ರೈಲ್ವೆ ಜೊತೆ ಸಂಪರ್ಕ ಆಗುವಂತಿದೆ. ಕೊಚ್ಚಿ ವಾಟರ್ ಮೆಟ್ರೋದಲ್ಲಿ 100 ಮತ್ತು 50 ಜನರ ಸಾಮರ್ಥ್ಯದ ಎರಡು ಮಾದರಿಯ ಪ್ಯಾಸೆಂಜರ್ ಬೋಟ್ ಅನ್ನು ಅಳವಡಿಸಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications