ಗೂಗಲ್ ನಿಂದ ಜುಲೈ 6ನೇ ತಾರೀಕು ದಿನಾಂಕ ನಿಗದಿ ಮಾಡಿದ್ದು, ಹಂತ ಹಂತವಾಗಿ ಉದ್ಯೋಗಿಗಳು ಕಚೇರಿಗೆ ಹಿಂತಿರುವುದಕ್ಕೆ ಈ ದಿನವನ್ನು ಗೊತ್ತು ಮಾಡಿಟ್ಟುಕೊಳ್ಳಲಾಗಿದೆ. ಅಷ್ಟೇ ಅಲ್ಲ, ಪ್ರತಿ ಉದ್ಯೋಗಿಗೆ ತಲಾ $ 1000 (ಭಾರತದ ರುಪಾಯಿಗಳಲ್ಲಿ 75,000) ನೀಡಲಿದೆ. ವರ್ಕ್ ಫ್ರಮ್ ಹೋಮ್ ಮಾಡುತ್ತಿರುವುದರಿಂದ ಉದ್ಯೋಗಿಗಳ ಅಗತ್ಯ ವೆಚ್ಚಗಳು ಮತ್ತು ಕಚೇರಿ ಪೀಠೋಪಕರಣಗಳಿಗಾಗಿ ಈ ಮೊತ್ತವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ಜುಲೈ 6ನೇ ತಾರೀಕಿನಿಂದ ಹೆಚ್ಚು ನಗರಗಳಲ್ಲಿ, ಹೆಚ್ಚು ಕಟ್ಟಡಗಳನ್ನು ಮತ್ತೆ ತೆರೆಯಲಾಗುವುದು ಎಂದು ಆಲ್ಫಾಬೆಟ್ ಹಾಗೂ ಗೂಗಲ್ ಸಿಇಒ ಸುಂದರ್ ಪಿಚೈ ತಿಳಿಸಿದ್ದಾರೆ. ಒಂದು ವೇಳೆ ಪರಿಸ್ಥಿತಿ ಅವಕಾಶ ಮಾಡಿಕೊಟ್ಟರೆ ಸೆಪ್ಟೆಂಬರ್ ಹೊತ್ತಿಗೆ ಒಟ್ಟು ಸಾಮರ್ಥ್ಯದ ಶೇಕಡಾ 30ರಷ್ಟು ಮಂದಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ನಮ್ಮ ಅಂದಾಜಿನ ಪ್ರಕಾರ, ಗೂಗಲ್ ಉದ್ಯೋಗಿಗಳು ಈ ವರ್ಷದ ಇನ್ನೂ ಬಹಳ ಸಮಯ ಮನೆಗಳಿಂದ ಕೆಲಸ ಮಾಡಬೇಕಾಗಬಹುದು. ಆದ್ದರಿಂದ 1,000 ಅಮೆರಿಕನ್ ಡಾಲರ್ ಅಥವಾ ಆಯಾ ದೇಶದಲ್ಲಿ ಆ ಮೊತ್ತಕ್ಕೆ ಸರಿ ಸಮನಾಗಿ ಭತ್ಯೆ ನೀಡಲಾಗುವುದು. ಅದನ್ನು ಅಗತ್ಯ ವೆಚ್ಚಗಳು ಮತ್ತು ಪೀಠೋಪಕರಣಕ್ಕೆ ಬಳಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಈ ವರ್ಷದಲ್ಲಿ ಕಚೇರಿಯಲ್ಲಿ ಬಂದು ಕೆಲಸ ಮಾಡಬೇಕು ಎನ್ನುವಂಥ ಗೂಗಲ್ ಉದ್ಯೋಗಿಗಳ ಸಂಖ್ಯೆಯ ಅಗತ್ಯ ಕಡಿಮೆ ಇದೆ. ಆ ರೀತಿ ಯಾವ ಉದ್ಯೋಗಿ ಕಚೇರಿಗೆ ಬರಬೇಕು ಅನ್ನೋದನ್ನು ಆಯಾ ಮ್ಯಾನೇಜರ್ ಜೂನ್ 10ನೇ ತಾರೀಕಿನೊಳಗೆ ತಿಳಿಸುತ್ತಾರೆ. ಇತರರಿಗೆ ಕಚೇರಿಗೆ ಬರುವ ವಿಚಾರಕ್ಕೆ ಅವರ ಆಯ್ಕೆಗೆ ಬಿಟ್ಟದ್ದು. ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಸಾಧ್ಯವಿದ್ದರೆ ಅದನ್ನೇ ಮುಂದುವರಿಸಿ ಎಂದು ಸಲಹೆ ಮಾಡುತ್ತೇವೆ ಎಂದು ಪಿಚೈ ಹೇಳಿದ್ದಾರೆ.
ಇದಕ್ಕೂ ಮುನ್ನ ಗೂಗಲ್ ನಿಂದ ಜೂನ್ 1ನೇ ತಾರೀಕಿನವರೆಗೆ ಮಾತ್ರ ವರ್ಕ್ ಫ್ರಮ್ ಹೋಮ್ ನಿಯಮ ರೂಪಿಸಲಾಗಿತ್ತು. ಇದೀಗ ವಿಸ್ತರಣೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಘೋಷಣೆ ಮಾಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications