ಕೊರೊನಾ ದಿನದಿನಕ್ಕೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಜಗತ್ತಿನಾದ್ಯಂತ ಇರುವ ಗೂಗಲ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಅವಕಾಶವನ್ನು 2021ರ ಜೂನ್ ತನಕ ವಿಸ್ತರಿಸಲಾಗಿದೆ. ಸಿಬ್ಬಂದಿಗೆ ಇಮೇಲ್ ಮಾಡಿರುವ ಸುಂದರ್ ಪಿಚೈ, ಕಚೇರಿಗಳಿಗೆ ಬಂದು ಕೆಲಸ ಮಾಡುವ ಅಗತ್ಯ ಇಲ್ಲದವರು ಮುಂದಿನ ದಿನಗಳಿಗಾಗಿ ಯೋಜನೆ ರೂಪಿಸಿಕೊಳ್ಳಲು ಜಾಗತಿಕ ಸ್ವಯಂಪ್ರೇರಿತ ವರ್ಕ್ ಫ್ರಮ್ ಹೋಮ್ ಆಯ್ಕೆಯನ್ನು ಜೂನ್ 30, 2021ರ ತನಕ ವಿಸ್ತರಿಸಿದ್ದೇವೆ ಎಂದಿದ್ದಾರೆ.
ಈ ನಡೆಯು ಗೂಗಲ್ ಹಾಗೂ ಅದರ ಮಾತೃ ಸಂಸ್ಥೆ ಆಲ್ಫಾಬೆಟ್ ನಲ್ಲಿ ಇರುವ ಎರಡು ಲಕ್ಷದಷ್ಟು ಇರುವ ಪೂರ್ಣಾವಧಿ ಹಾಗೂ ಗುತ್ತಿಗೆ ಸಿಬ್ಬಂದಿಯಲ್ಲಿ ಬಹುತೇಕರ ಮೇಲೆ ಪ್ರಭಾವ ಬೀರಲಿದೆ. ಅಂದ ಹಾಗೆ ಭಾರತದಲ್ಲೇ ಐದು ಸಾವಿರದಷ್ಟು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಗೂಗಲ್ ಕಂಪೆನಿಗೆ ಭಾರತ ಪ್ರಮುಖ ಮಾರುಕಟ್ಟೆ. ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಮುಖ್ಯವಾಗಿ ಕಚೇರಿಗಳಿವೆ. ಮುಂದಿನ ಐದರಿಂದ ಏಳು ವರ್ಷದಲ್ಲಿ ಭಾರತದಲ್ಲಿ 75 ಸಾವಿರ ಕೋಟಿ ರುಪಾಯಿ ಹೂಡಿಕೆ ಮಾಡುವ ಬಗ್ಗೆ ಈಚೆಗಷ್ಟೇ ಸುಂದರ್ ಪಿಚೈ ಘೋಷಣೆ ಮಾಡಿದ್ದರು.

ಹೇಗೆ ಇತರ ಕಂಪೆನಿಗಳು ಮುಂಜಾಗ್ರತಾ ಕ್ರಮವಾಗಿ ವರ್ಕ್ ಫ್ರಮ್ ಹೋಮ್ ವಿಸ್ತರಣೆ ಮಾಡುತ್ತಿದೆಯೋ ಅದೇ ರೀತಿ ಗೂಗಲ್ ಸಹ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಅಮೆಜಾನ್ ಕಂಪೆನಿಯು, ಜನವರಿ 8, 2021ರ ತನಕ ವರ್ಕ್ ಫ್ರಮ್ ಹೋಮ್ ವಿಸ್ತರಿಸಿತ್ತು. ಡೆಲ್ ಟೆಕ್ನಾಲಜಿಯ ಅಧ್ಯಕ್ಷ- ಎಂ.ಡಿ. ಅಲೋಕ್ ಒಹ್ರಿ ಮಾಧ್ಯಮದೊಂದಿಗೆ ಮಾತನಾಡಿ, ಕೊರೊನಾ ಬಿಕ್ಕಟ್ಟಿಗೂ ಮುಂಚೆಯೇ ಶೇಕಡಾ ನೂರರಷ್ಟು ಸಿಬ್ಬಂದಿಗೆ ನಾವು ವರ್ಕ್ ಫ್ರಮ್ ಅವಕಾಶ ಕೊಟ್ಟಿದ್ದೆವು ಎಂದಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications