ಗೂಗಲ್ ಸಿಇಒ ಸುಂದರ್ ಪಿಚೈಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತದ ಅತೀ ಶ್ರೇಷ್ಠ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಯುಎಸ್ಗೆ ಭಾರತದ ರಾಯಭಾರಿಯಾಗಿರುವ ತಾರಂಜೀತ್ ಸಿಂಗ್ ಸಂಧು, ಈ ಪ್ರಶಸ್ತಿಯನ್ನು ಹಸ್ತಾಂತರ ಮಾಡಿದ್ದಾರೆ.
ಗಣರಾಜ್ಯೋತ್ಸವ ದಿನದಂದು ಭಾರತದ ಮೂರನೇ ಅತೀ ದೊಡ್ಡ ಪ್ರಶಸ್ತಿಯಾದ ಪದ್ಮ ಭೂಷಣ ವಿಜೇತರನ್ನಾಗಿ ಸುಂದರ್ ಪಿಚೈ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಟ್ರೇಡ್ ಹಾಗೂ ಇಂಡಸ್ಟ್ರೀ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತದ ಕೌನ್ಸಲ್ ಜನರಲ್ ಟಿ ವಿ ನಾಗೇಂದ್ರ, ಸುಂದರ್ ಪಿಚೈ ಕುಟುಂಬ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.
ಸುಂದರ್ ಪಿಚೈಗೆ ಈ ಪ್ರಶಸ್ತಿಯನ್ನು ಹಸ್ತಾಂತರ ಮಾಡಿದ ಬಳಿಕ ಟ್ವೀಟ್ ಮಾಡಿದ ತಾರಂಜೀತ್ ಸಿಂಗ್ ಸಧು, "ಗೂಗಲ್ & ಆಲ್ಫಾಬೈಟ್ ಸಿಇಒ ಸುಂದರ್ ಪಿಚೈ ಅವರಿಗೆ ಸ್ಯಾನ್ ಫ್ರಾನ್ಸಿಸ್ಕೋರದಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ಹಸ್ತಾಂತರ ಮಾಡಿರುವುದು ನನಗೆ ಸಂತೋಷವಾಗಿದೆ," ಎಂದು ತಿಳಿಸಿದ್ದಾರೆ.

ಹಾಗೆಯೇ, "ಮದುರೈನಿಂದ ಕಣಿವೆ ಎತ್ತರಕ್ಕೂ ಸುಂದರ್ ಪಿಚೈ ಅವರ ಸ್ಪೂರ್ತಿಧಾಯಕ ಜೀವನ ಸಂಚಾರವು ಆರ್ಥಿಕ ಹಾಗೂ ಟೆಕ್ ಕ್ಷೇತ್ರವನ್ನು ಬಲಗೊಳಿಸಿದೆ. ಜಾಗತಿಕವಾಗಿ ಭಾರತದ ಪ್ರತಿಭೆಯ ಕೊಡುಗೆಯನ್ನು ದೃಢೀಕರಿಸುತ್ತದೆ," ಎಂದು ಕೂಡಾ ಸಂಧು ಹೇಳಿದ್ದಾರೆ.
ಸುಂದರ್ ಪಿಚೈ ಹೇಳುವುದು ಏನು?
"ನನಗೆ ಈ ಗೌರವ ನೀಡಿದ ಭಾರತ ಸರ್ಕಾರಕ್ಕೆ ಹಾಗೂ ಭಾರತದ ಜನರಿಗೆ ನಾನು ಅಭಾರಿಯಾಗಿದ್ದೇನೆ. ನನ್ನನ್ನು ಬೆಳೆಸಿದ ದೇಶದಿಂದ ಈ ರೀತಿಯಾಗಿ ಗೌರವ ಪಡೆಯುವುದು ನನಗೆ ಸಂತೋಷವಾಗಿದೆ," ಎಂದು 50 ವರ್ಷ ಪ್ರಾಯದ ಸುಂದರ್ ಪಿಚೈ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಹೇಳಿದ್ದಾರೆ.
"ಭಾರತ ನನ್ನ ಭಾಗವಾಗಿದೆ. ನಾನು ಎಲ್ಲಿ ಹೋದರು ಭಾರತ ನನ್ನೊಂದಿಗೆ ಇದೆ. ಈ ಪ್ರಶಸ್ತಿಯನ್ನು ನಾನು ಸುರಕ್ಷಿತವಾಗಗಿ ಇರಿಸುತ್ತೇನೆ," ಎಂದು ತಿಳಿಸಿದ್ದಾರೆ. "ನನ್ನ ಕಲಿಕೆಯನ್ನು, ಜ್ಞಾನವನ್ನು ಅಭಿವೃದ್ಧಿಪಡಿಸುವ ಕುಟುಂಬದಲ್ಲಿ ಹುಟ್ಟಿರುವುದು ನನ್ನ ಅದೃಷ್ಟವಾಗಿದೆ. ನನ್ನ ಆಸಕ್ತಿಯ ಕ್ಷೇತ್ರದಲ್ಲಿ ಕಲಿಕೆ ಮಾಡಲು ನನ್ನ ಪೋಷಕರು ಹಲವಾರು ತ್ಯಾಗವನ್ನು ಮಾಡಿದ್ದಾರೆ," ಎಂದು ಕೂಡಾ ತಿಳಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications