ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ ಅಧಿಕ ಮಾಡುವ ನಿರ್ಧಾರಕ್ಕೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಇದರಿಂದಾಗಿ ಸರ್ಕಾರಿ ನೌಕರರು ಇನ್ನು ಮುಂದೆ ಅಧಿಕ ಡಿಎ ಪಡೆಯುವ ಅವಕಾಶ ಲಭ್ಯವಾಗಲಿದೆ.
ಡಿಎ ಸುಮಾರು ಶೇಕಡ 4ರಷ್ಟು ಅಧಿಕವಾಗಿ ಶೇಕಡ 38ಕ್ಕೆ ತಲುಪಿದೆ. ಈ ಹಿಂದೆ ತಜ್ಞರು ಕೂಡಾ ಇದೇ ಅಂದಾಜನ್ನು ವ್ಯಕ್ತಪಡಿಸಿದ್ದರು. ಇನ್ನು ಕಳೆದ ತಿಂಗಳು ಡಿಎ ಹೆಚ್ಚಳದ ಬಗ್ಗೆ ನಕಲಿ ಸುದ್ದಿಯೂ ಕೂಡಾ ಹರಿದಾಡಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಇದಕ್ಕೆಕೇಂದ್ರ ಸರ್ಕಾರ ಸ್ಪಷ್ಟಣೆಯನ್ನು ಕೂಡಾ ನೀಡಿದ್ದರು.

ಕೇಂದ್ರದ ನೋಡಲ್ ಏಜೆನ್ಸಿಯಾದ ಸಾರ್ವಜನಿಕ ಮಾಹಿತಿ ಬ್ಯೂರೋದ (ಪಿಐಬಿ) ಸತ್ಯ ಪರಿಶೀಲನಾ ವಿಭಾಗವು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಹೆಚ್ಚಳ ಮಾಡಲಾಗಿದೆ ಎಂಬ ಪತ್ರದ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಟ್ವಿಟರ್ನಲ್ಲಿ "ನಕಲಿ ಆದೇಶ" ದ ಚಿತ್ರವನ್ನು ಹಂಚಿಕೊಂಡಿರುವ ಪಿಐಬಿ ಫ್ಯಾಕ್ಟ್ ಚೆಕ್ ತಂಡವು ಈ ಬಗ್ಗೆ ಮಾಹಿತಿ ನೀಡಿದೆ.
ಡಿಎ ಲೆಕ್ಕಾಚಾರದ ಹೊಸ ಸೂತ್ರ ಯಾವುದು?
7 ನೇ ವೇತನ ಆಯೋಗದ ನಿಯಮಗಳ ಪ್ರಕಾರ ಉದ್ಯೋಗಿಯ ಮೂಲ ವೇತನದ ಆಧಾರದಲ್ಲಿ ಡಿಎ ಮೊತ್ತವನ್ನು ಪ್ರಸ್ತುತ ದರದ ಅಂಶವಾಗಿ ಲೆಕ್ಕಹಾಕಲಾಗುತ್ತದೆ. ಪ್ರಸ್ತುತ ಶೇಕಡಾ 12 ರ ದರದ ಪ್ರಕಾರ, ಈ ಲೆಕ್ಕಾಚಾರವು ಈ ಕೆಳಗಿನಂತಿದೆ.
(ಮೂಲ ವೇತನ x 12)/ 100
(Basic Pay x 12)/ 100
ಡಿಎ ಶೇಕಡ=12 ತಿಂಗಳ ಸಿಪಿಐ ಸರಾಸರಿ (Consumer Price Index) - 115.76
ಇದರ ಉತ್ತರವನ್ನು 115.76ರಿಂದ ಭಾಗಾಕಾರ ಹಾಗೂ 100ರಿಂದ ಗುಣಾಕಾರ ಮಾಡಲಾಗುತ್ತದೆ.
ಈ ನಡುವೆ ಕೇಂದ್ರ ಸರ್ಕಾರಿ ನೌಕರರು ಶೇಕಡ 4ರಷ್ಟು ಡಿಎ ಹೆಚ್ಚಳ ನಿರೀಕ್ಷೆಯಲ್ಲಿ ಇದ್ದಾರೆ. ಇದರಿಂದಾಗಿ ಡಿಎ ಶೇಕಡ 38ಕ್ಕೆ ಏರಿಕೆಯಾಗಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications